ಉಡುಪಿ | ಭಾರತ ಜನಮನಗೆದ್ದ ಜಾಗತಿಕ ಶಾಂತಿ ರೂಪಕವಾದ ಗಾಂಧಿ : ಡಾ. ದಿನೇಶ ಹೆಗ್ದೆ

Date:

ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ – ಗಾಂಧಿ ಭಾರತ – ವಿಶೇಷ ಉಪನ್ಯಾಸ – ಸಾಕ್ಷ್ಯಚಿತ್ರ ಪ್ರದರ್ಶನ ” ಗಾಂಧಿ ಮತ್ತು ಹಿಂದ್ ಸ್ವರಾಜ್.

ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಕನ್ನಡ ಮತ್ತು ರಾಜ್ಯ ಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ ಹಾಗೂ ಗಾಂಧಿ ಭಾರತದ ಅಂಗವಾಗಿ ವಿಶೇಷ ಉಪನ್ಯಾಸ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ ” ಗಾಂಧಿ ಮತ್ತು ಹಿಂದ್ ಸ್ವರಾಜ್ ” ಗುರುವಾರ ನಡೆಯಿತು.

ನಿವೃತ್ತ ಪ್ರಾಂಶುಪಾಲರಾದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ದಿನೇಶ ಹೆಗ್ಡೆ ವಿಶೇಷ ಉಪನ್ಯಾಸ ನೀಡಿ ಗಾಂಧಿ ಸ್ವರಾಜ್ಯದ ಪರಿಕಲ್ಪನೆ ಪೂರ್ಣ ಪ್ರಮಾಣದ ಸ್ವಾವಲಂಬಿ, ಸ್ವತಂತ್ರ ದೇಶ ನಿರ್ಮಾಣವೇ ಹೊರತು ಸ್ವದೇಶಿ ಮತ್ತು ಬಂಡವಾಳಿಗರ ಅವಲಂಬನೆ ಅಲ್ಲ. ವಸ್ತು ಮತ್ತು ವಿಚಾರಗಳೇಡರಲ್ಲೂ ಯಾರನ್ನೂ ಅವರು ಅವಲಂಬಿಸದೆ ಪೂರ್ಣ ಸ್ವಾಯತ್ತತೆಯನ್ನು ಗಳಿಸಿಕೊಳ್ಳುವುದಕ್ಕೆ ಭೂಮಿಯಕೆಯಾಗಿ ಅಹಿಂಸೆ, ಶಾಂತಿ ಮತ್ತು ಮತರೂಪಗಳ ಗೋಡೆಗಳನ್ನು ದಾಟಿ ಸಾಧಿಸುವ ಸಾಮರಸ್ಯವನ್ನು ಅಳವಡಿಸಿಕೊಳ್ಳುವುದೇ ಆಗಿದೆ ಎಂದು ಪ್ರತಿಪಾದಿಸಿದ ರಾಜಕೀಯ ಸಂತ ಗಾಂಧಿ ಆಗಿದ್ದರು ಎಂದು ಡಾ. ಹೆಗ್ಡೆ ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 03 at 10.21.07 AM

ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ ಶೆಟ್ಟಿ ಎಚ್ ಅಧ್ಯಕ್ಷತೆ ವಹಿಸಿ ಮಾತನಾಡಿ ಏಕಕಾಲದಲ್ಲಿ ಅನೇಕ ಧರ್ಮಗಳನ್ನು ಬದುಕಿದ ಗಾಂಧಿಗೆ, ಸತ್ಯವೇ ದೇವರಾಗಿತ್ತಲ್ಲದೆ, ದೇವರೇ ಸತ್ಯ ಎಂಬ ಮಾನಸಿಕ ಕುರುಡು ಅವರಲ್ಲಿರಲಿಲ್ಲ. ಧರ್ಮ ಅವರಿಗೆ ಎದೆಯ ಭಾಗವಾಗಿತ್ತಲ್ಲದೆ, ನೆತ್ತಿಯ ನಂಜು ಆಗಿರಲಿಲ್ಲ ಎಂದು ತಿಳಿಸಿದರು.

ಕನ್ನಡ ಉಪನ್ಯಾಸಕ ರಾಮಾಂಜಿ ಉಡುಪಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಪ್ರೋ. ನಂದೀಶ್ ಕುಮಾರ್ ಕೆ.ಸಿ, ವಿದ್ಯಾರ್ಥಿ ನಾಯಕ ಈರಬಸು, ಐಕ್ಯುಎಸಿ ಸಂಚಾಲಕ ಡಾ.ಲಿತಿನ್ ಬಿ.ಎಂ, ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ವಿಖ್ಯಾತ್ ಗಾಂಧಿಪ್ರಿಯ ಮಂತ್ರ ಪಠಣ ಮಾಡಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಪರ್ಣಾ ಕೆಯು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಅಶ್ವಿನಿ ಡಿ.ಎಸ್ ನಿರೂಪಿಸಿ, ಸಂತೋಷ್ ವಂದಿಸಿ, ದೀಕ್ಷಾ ಸ್ವಾಗತಿಸಿದರು.

WhatsApp Image 2025 10 03 at 10.21.08 AM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...