ಉಡುಪಿ | ನೀರಿಗಾಗಿ ಕಣ್ಣೀರಿಡುವ ದುರಂತ ಕಾಲವನ್ನು ದೂರ ಮಾಡೋಣ

Date:

ನಮ್ಮ ಬದುಕಿಗೆ ನೆಲೆ ಒದಗಿಸಿದ ಈ ನೆಲದೊಡಲಿನ ನೀರ ಖಜಾನೆಯನ್ನು ಬರಿದಾಗದಂತೆ ಕಾದುಕೊಳ್ಳದಿದ್ದರೆ ನೀರಿಗಾಗಿ ಕಣ್ಣೀರಿಡುವ ದುರಂತ ಕಾಲ ನಮ್ಮಿಂದ ಬಹಳ ದೂರವೇನೂ ಇಲ್ಲ ಎಂದು ಜಲಜೀವನ್‌ ಮಿಶನ್‌ನ ರಾಜ್ಯ ಸಂಪನ್ಮೂಲ ವ್ಯಕ್ತಿ ರತ್ನಶ್ರೀ ಜೋಸೆಫ್ ಜಿ ಎಂ‌ ರೆಬೆಲ್ಲೋ ಹೇಳಿದರು.

ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್‌ ಜಲಜೀವನ್‌ ಮಿಶನ್‌ ವತಿಯಿಂದ ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಾ.ಸೇ.ಯೋ. ಘಟಕ, ಯೂತ್‌ ರೆಡ್‌ಕ್ರಾಸ್‌ ಘಟಕಗಳ ಸಹಯೋಗದಲ್ಲಿ ಆಯೋಜಿಸಿದ ʼಮಳೆನೀರು ಕೊಯ್ಲು ಮತ್ತು ಮಳೆನೀರು ಪುನರ್‌ ಬಳಕೆʼ ಕಾರ್ಯಕ್ರಮದ ಅಂಗವಾಗಿ ಪ್ರಾತ್ಯಕ್ಷಿಕೆ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.

WhatsApp Image 2025 10 10 at 10.10.12 AM

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌. ʼನಮ್ಮ ಹಿರೀಕರು ನೀರನ್ನೇ ನಿಧಿಯಾಗಿ ಕಾದುಕೊಳ್ಳುವ ಸಲುವಾಗಿಯೇ ಅದಕ್ಕೆ ಆಸ್ತಿಕತೆಯ ಆವರಣವನ್ನು ಬೆಸೆದು ಮಳೆನೀರು ಕೊಯ್ಲಿನ ನಿಸರ್ಗ ಸಹಜ ಮಾದರಿಗಳಾದ ಹುತ್ತಗಳನ್ನು ಹೇಗೆ ಜತನವಾಗಿ ಕಾದುಕೊಂಡಿದ್ದರು ಎಂಬ ಅರಿವು ನಮಗೆ ಅಗತ್ಯವಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಜಲಜೀವನ್‌ ಮಿಶನ್‌ನ ಐ.ಎಸ್‌.ಎ. ಟೀಮ್‌ ಲೀಡರ್‌ ಶ್ರೀಮತಿ ಉಷಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯಲತಾ ಪಿ., ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ.ಎಂ., ರಾ.ಸೇ.ಯೋ. ಮತ್ತು ಯೂತ್‌ ರೆಡ್‌ಕ್ರಾಸ್‌ ಕಾರ್ಯಕ್ರಮಾಧಿಕಾರಿ ನಂದೀಶ್‌ಕುಮಾರ್‌ ಕೆ.ಸಿ. ಮತ್ತು ವಿದ್ಯಾರ್ಥಿ ನಾಯಕ ಈರಬಸು ಉಪಸ್ಥಿತರಿದ್ದರು. ಸುಹಾ ಸ್ವಾಗತಿಸಿ, ಯಮನಪ್ಪ ಅತಿಥಿಗಳನ್ನು ಪರಿಚಯಿಸಿ, ಖುಷಿ ವಂದಿಸಿದ ಈ ಕಾರ್ಯಕ್ರಮವನ್ನು ವೈಷ್ಣವಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...