ಉಡುಪಿ | ಮಕ್ಕಳಲ್ಲಿ ಪರಿಸರ ಪ್ರೇಮ ಮತ್ತು ಉದಾತ್ತ ಮೌಲ್ಯಗಳನ್ನು ಬಿತ್ತೋಣ

Date:

ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳಲ್ಲಿ ಪರಿಸರ ಪ್ರೇಮ ಮತ್ತು ಉದಾತ್ತ ಮೌಲ್ಯಗಳನ್ನು ಬಿತ್ತಬೇಕು ಎಂದು ಜಮಾಅತೆ ಇಸ್ಲಾಮೀ ಹಿಂದ್‌ನ ರಾಜ್ಯ ಕಾರ್ಯದರ್ಶಿ ರಿಯಾಝ್ ಅಹಮದ್ ರೋಣ್ ಅವರು ಅಭಿಪ್ರಾಯಪಟ್ಟರು, ಅವರು ನಗರದಲ್ಲಿ ಸಿಐಓ ವತಿಯಿಂದ ಅಯೋಜಿಸಿದ್ದ “ಹ್ಯಾಂಡ್ಸ್ ಆನ್ ಸಾಯ್ಲ್, ಹಾರ್ಟ್ ವಿದ್ ಇಂಡಿಯಾ” – “ಕೈಯಲ್ಲಿ ಮಣ್ಣು-ಹೃದಯದಲ್ಲಿ ಭಾರತ” ಎಂಬ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಒಂದು ತಿಂಗಳಿನಿAದ ರಾಷ್ಟ್ರಾದ್ಯಂತ ಚಿಲ್ಡ್ರನ್ಸ್ ಸರ್ಕಲ್ ಇಸ್ಲಾಮಿಕ್ ಆರ್ಗನೈಝೇಶನ್ (ಸಿಐಓ) ವತಿಯಿಂದ ಮಕ್ಕಳ ಮೂಲಕ ಪರಿಸರ ಜಾಗೃತಿ, ಪ್ರಕೃತಿ ಸಂರಕ್ಷಣೆಯ ಕುರಿತು ವೈವಿದ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳು ತಮ್ಮ ತಮ್ಮ ಪರಿಸರದಲ್ಲಿ, ಶಾಲಾ-ಕಾಲೇಜು, ಕಛೇರಿ ಪಾರ್ಕು, ಉದ್ಯಾನವನ, ಮಸೀದಿ, ಮದ್ರಸಾ, ಮಂದಿರ, ಚರ್ಚ್ ವೃದ್ಧಾಶ್ರಮಗಳ ವಠಾರದಲ್ಲಿ ತೆರಳಿ ಗಿಡ ನೆಡುವ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಭಾಷಣಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಪತ್ರಿಕಾಗೋಷ್ಠಿ, ರ‍್ಯಾಲಿಗಳ ಮೂಲಕ ಜಾಗೃತಿ ಮೂಡಿಸುವ ವೈವಿದ್ಯಮ ಕಾರ್ಯಕ್ರಮಗಳನ್ನು ಹಮಿಕೊಂಡಿದ್ದರು. ಉಡುಪಿ ಜಿಲ್ಲೆಯಲ್ಲೂ ಮಕ್ಕಳು ಸಕ್ರೀಯವಾಗಿ ಈ ಚಟುವಟಿಕೆಗಳಲ್ಲಿ ಪಾಲ್ಗೊಂಡರು ಮತ್ತು ಉಡುಪಿ ಜಿಲ್ಲೆಯಾದ್ಯಂತ 3,000ಕ್ಕೂ ಮಿಕ್ಕಿ ಗಿಡಗಳನ್ನು ನೆಡಲಾಯಿತು.

ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಿಐಓ ರಾಜ್ಯಘಟಕ ಸದಸ್ಯೆ ಮೆಹರುನ್ನಿಸಾ ಮಣಿಪಾಲ್, ಜಮಾಅತೆ ಇಸ್ಲಾಮೀ ಹಿಂದ್‌ನ ಉಡುಪಿ ನಗರ ಶಾಖೆಯ ಅಧ್ಯಕ್ಷ ನಿಸಾರ್ ಅಹಮದ್, ಮಹಿಳಾ ವಿಭಾಗದ ಅಧ್ಯಕ್ಷೆ ವಾಜಿದಾ ತಬಸ್ಸುಮ್ ಉಪಸ್ಥಿತರಿದ್ದರು. ನೂರ್‌ಜಹಾನ್ ಕಟಪಾಡಿ ಪ್ರಸ್ತಾವನೆಗೈದರು. ಶಮ್ಶಾದ್ ಹಸನ್ ನಿರೂಪಣೆಗೈದು ಕೊನೆಯಲ್ಲಿ ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...