ಉಡುಪಿ | ಭವಿಷ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಿ – ಶ್ರೀರಾಮುಲು ಮನವಿ

Date:

ಬಿಜೆಪಿಯನ್ನು ಭವಿಷ್ಯದಲ್ಲಿ ಅಧಿಕಾರಕ್ಕೆ ತರಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಮನವಿ ಮಾಡಿದರು.

ಬಿಜೆಪಿ ಜನಾಕ್ರೋಶ ಯಾತ್ರೆಯ ಅಂಗವಾಗಿ ಇಂದು ಉಡುಪಿಯಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆಯಿಂದ ರಾಜ್ಯದಲ್ಲಿ ಇವತ್ತು ಸಾಮಾನ್ಯ ಜನರು ಬದುಕಲಾರದ ಪರಿಸ್ಥಿತಿಗೆ ಬಂದುಬಿಟ್ಟಿದ್ದಾರೆ. ಒಂದು ಕಡೆ ಸರ್ಕಾರವು ಮಾತನಾಡದೆ ಮೂಕ, ಕಿವಿ ಕೇಳದಂತೆ ಹಾಗೂ ಕಿವುಡಾಗಿ ಕುಳಿತಿದೆ. ಕಣ್ಣು ಕಾಣದ ಹಾಗೆ ಕುರುಡರಂತೆ ಕುಳಿತಿದೆ. ಇವತ್ತು ಸರ್ಕಾರಕ್ಕೆ ಬುದ್ಧಿ ಕಲಿಸುವ ಉದ್ದೇಶದಿಂದ ಹಾಗೂ ದಿನನಿತ್ಯದ ಬದುಕಿನಲ್ಲಿ ಜನರಿಗೆ ಸಮಸ್ಯೆ ಉಂಟಾಗಿರುವ ಕಾರಣ ಈ ಹೋರಾಟವನ್ನು ಮಾಡುತ್ತಿದ್ದೇವೆ ಎಂದು ವಿವರಿಸಿದರು.

ಬಿಜೆಪಿ ಶಾಸಕರನ್ನು ಮಾರ್ಷಲ್‌ಗಳ ಮುಖಾಂತರ ಸದನದಿಂದ ಹೊರಗಡೆ ಕಳುಹಿಸಿ ಅಮಾನತು ಮಾಡಿದ್ದನ್ನು ಅವರು ಖಂಡಿಸಿದರು. ಸಿದ್ದರಾಮಯ್ಯರವರ ಆಪ್ತರು, ಶಾಸಕರಾದ ಹಾಗೂ ಮಾಜಿ ಮಂತ್ರಿಗಳಾದ ಬಸವರಾಜ ರಾಯರೆಡ್ಡಿರವರೇ ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ಇಡೀ ದೇಶದಲ್ಲಿ ನಂ.1 ಸ್ಥಾನಕ್ಕೆ ಏರಿದ್ದಾಗಿ ಹೇಳುತ್ತಿದ್ದಾರೆ ಎಂದು ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1004987618

ಭ್ರಷ್ಟಾಚಾರ ತೀವ್ರವಾಗಿ ತಾರಕಕ್ಕೆ ಏರುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿರುವ ಸಚಿವರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಈ ರಾಜ್ಯದಲ್ಲಿರುವ ಎಲ್ಲಾ ಸಂಪತ್ತನ್ನು ಈ ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ. ಎಲ್ಲಾ ಸಚಿವರು ಹಣ ವಸೂಲಿ ಮಾಡಿ, ಕುರ್ಚಿ ಭದ್ರಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಾಗೂ ಎಲ್ಲಾ ನಿಗಮಗಳಲ್ಲಿ ಹಣವನ್ನು ಖಾಲಿ ಮಾಡಿ ಭ್ರಷ್ಟಾಚಾರ ಮಾಡಿ ವಿಚಾರಣೆ ನೆಪದಲ್ಲಿ ಅವರದ್ದೇ ಸರ್ಕಾರದ ಬೇರೆ ಬೇರೆ ಅಧಿಕಾರಿಗಳನ್ನು ನೇಮಿಸಿ ಕ್ಲೀನ್ ಚಿಟ್ ನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಉಡುಪಿ ಜಿಲ್ಲೆಯು ನಮ್ಮ ಇಡೀ ರಾಜ್ಯಕ್ಕೆ ಮತ್ತು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಗೆ ಶಿಸ್ತು ಮತ್ತು ಶ್ರದ್ಧೆಯನ್ನು ಕಲಿಸಿಕೊಟ್ಟ ಸ್ಥಳ ಎಂದು ಮೆಚ್ಚುಗೆ ಸೂಚಿಸಿದರು. ಉಡುಪಿ ಜಿಲ್ಲೆಯ ವಿಚಾರ ಬಂದಾಗ ದಿವಂಗತ ಆಚಾರ್ಯರವರ ನೆನಪಾಗುತ್ತದೆ ಎಂದು ನುಡಿದರು. ಆಚಾರ್ಯ ರವರ ನೆನಪಿನ ಸಲುವಾಗಿ ಉಡುಪಿಯ ಬಸ್ ನಿಲ್ದಾಣವನ್ನು ಆಚಾರ್ಯ ಬಸ್ ನಿಲ್ದಾಣವೆಂದು ಮಾಡಬೇಕು ಎಂದು ಹೇಳಿದಾಗ ಆವತ್ತಿನ ಕ್ಯಾಬಿನೆಟ್‌ನಲ್ಲಿ ಯಡಿಯೂರಪ್ಪ ರವರು ತೀರ್ಮಾನ ತೆಗೆದುಕೊಂಡಿದ್ದರು. ನಾನು ಸಾರಿಗೆ ಮಂತ್ರಿಯಾಗಿ ಉಡುಪಿಯ ಬಸ್ ನಿಲ್ದಾಣವನ್ನು ಆಚಾರ್ಯ ಬಸ್ ನಿಲ್ದಾಣವೆಂದು ಹೆಸರು ಇಡುವ ಕೆಲಸ ನಾನು ಮಾಡಿಕೊಟ್ಟೆ ಎಂದು ನೆನಪಿಸಿದರು.

2028 ರಲ್ಲಿ ವಿಜಯೇಂದ್ರ ರವರು ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಪುನಃ ಅಧಿಕಾರಕ್ಕೆ ತರುವ ಕೆಲಸ ಮಾಡೋಣ ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...