ಉಡುಪಿ | ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ

Date:

ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು.

ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್
ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಅವರು ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.
ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ, ಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಆನ್‌ಲೈನ್ ತೆರಿಗೆ ಪಾವತಿಗೆ ಕ್ರಮ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಕೋಚಿಂಗ್ ಮೂಲಕ ಎಸೆಸೆಲ್ಸಿ ಪಿಯುಸಿಯಲ್ಲಿ ಅಗ್ರಸ್ಥಾನ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಗ್ರಾಮೀಣ ಭಾಗದಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ, ಸೇರಿದಂತೆ ಮತ್ತಿತರ ಉತ್ತಮ ಕಾರ್ಯಗಳಿಂದ ಜಿಲ್ಲೆಗೆ ಈ ಪ್ರಶಸ್ತಿ ಸಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...