ಉಡುಪಿ | ಜೋಗಿ ಸಮಾಜ ಸೇವಾ ಸಮಿತಿಯ 16ನೇ ವಾರ್ಷಿಕೋತ್ಸವ

Date:

ಉಡುಪಿ ನಗರದ ಎಂ.ಜಿ.ಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಜೋಗಿ ಸಮಾಜ ಸೇವಾ ಸಮಿತಿ (ರಿ.) ಉಡುಪಿ – ಕಾರ್ಕಳ ಘಟಕದ 16ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಅಧ್ಯಕ್ಷರಾದ ಗೋವಿಂದ ಜೋಗಿಪಳ್ಳಿ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ ಜರುಗಿತು.

ಬೆಳಿಗ್ಗೆ ಸಾಮೂಹಿಕ ಸತ್ಯನಾರಾಯಣ ಪೂಜೆಯಿಂದ ಕಾರ್ಯಕ್ರಮಕ್ಕೆ ಆರಂಭವಾಗಿದ್ದು, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜದ ಹಿರಿಯರು ಹಾಗೂ ಸಮಾಜದ ಏಳಿಗೆಗೆ ಶ್ರಮಿಸಿರುವ ಗಣ್ಯರನ್ನು ಸನ್ಮಾನಿಸಲಾಯಿತು.

ಸಮಾಜ ಸೇವೆ ಹಾಗೂ ನಾಯಕತ್ವಕ್ಕಾಗಿ ಕೆ.ಎನ್. ಶ್ರೀನಿವಾಸ ಜೋಗಿ ಬೆಂಗಳೂರು ಅವರಿಗೆ “ಜೋಗಿ ರತ್ನ”, ಶ್ರೀ ದೇವರಾಜ ಬಳೆಗಾರ್ ಬೈಂದೂರು ಅವರಿಗೆ “ಜೋಗಿ ಭಾರ್ಗವ” ಹಾಗೂ ಪುರುಷೋತ್ತಮ ಹೆಚ್.ಕೆ ಮಂಗಳೂರು ಅವರಿಗೆ “ಜೋಗಿ ಸಾಮ್ರಾಟ್” ಬಿರುದು ನೀಡಿ ಗೌರವಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ರೀತಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಿರಿಯರು ಹಾಗೂ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು. ಸಮಾಜದ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿರುವ ನಿತ್ಯಾನಂದ ಒಳಕಾಡು ಮತ್ತು ವಿಶು ಶೆಟ್ಟಿ ಇವರಿಗೂ ಸಮಾಜದ ಮುಖಂಡರಾದ ನವೀನಚಂದ್ರ ಜೋಗಿ ಹಾಗೂ ಕೆ.ಎನ್. ಮುರಲೀಧರ ಜೋಗಿ ಕಮ್ಮರಡಿ ಅವರಿಂದ ಸನ್ಮಾನ ನೆರವೇರಿತು.

ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಕೆ.ಎನ್. ಚಂದ್ರಶೇಖರ ಜೋಗಿ ಬೆಂಗಳೂರು, ಸ್ಥಾಪಕಾಧ್ಯಕ್ಷ ನವೀನಚಂದ್ರ ಜೋಗಿ, ಮಾಜಿ ಅಧ್ಯಕ್ಷರು ಪಿ. ಸುರೇಶ್ ಕುಮಾರ್ ಹೆಬ್ರಿ, ಗೌರವಾಧ್ಯಕ್ಷ ಹರೀಶ್ಚಂದ್ರ ಜೋಗಿ ಕಟಪಾಡಿ, ಕರ್ನಾಟಕ ಜೋಗಿ ಸುಧಾರಕ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಜೋಗಿ ಮಂಗಳೂರು, ಹಿಂದುಳಿದ ವರ್ಗಗಳ ವಿಸ್ತರಣಾ ಅಧಿಕಾರಿ ಶ್ರೀಕಾಂತ್, ಕುಂದಾಪುರ ಸಂಘದ ಅಧ್ಯಕ್ಷ ರಮೇಶ್ ಜೋಗಿ ಹೆಮ್ಮಾಡಿ, ಮಹಿಳಾ ಸಂಘದ ಅಧ್ಯಕ್ಷೆ ರಜನಿ ಜೋಗಿ ಸೂಡಾ, ಉದ್ಯಮಿಗಳು ಉದಯಕುಮಾರ್ ಜೋಗಿ ಬೆಂಗಳೂರು ಹಾಗೂ ಉದಯ ಜೋಗಿ ಗೋಳಿಯಂಗಡಿ, ಉ.ಕ. ಅಧ್ಯಕ್ಷ ಶಿವರಾಮ ಜೋಗಿ ಮುರ್ದೆಶ್ವರ, ವೈ. ದಿಲೀಪ್ ಜೋಗಿ, ಉಡುಪಿ ಜೋಗಿ ವಿವಿದೋದ್ದೇಶ ಸಹಕಾರಿ ಸಂಸ್ಥೆಯ ಅಧ್ಯಕ್ಷ ವಸಂತ ಜೋಗಿ ಏರ್ಮಾಳು, ಕುಂದಾಪುರ ಸಂಸ್ಥೆಯ ಅಧ್ಯಕ್ಷ ಶೇಖರ ಜೋಗಿ, ಪ್ರಧಾನ ಕಾರ್ಯದರ್ಶಿ ಅಶೋಕ ಜೋಗಿ ಕಾರ್ಕಳ ಹಾಗೂ ಕೋಶಾಧಿಕಾರಿ ರಾಕೇಶ್ ಜೋಗಿ ನಿಟ್ಟೂರು ಉಪಸ್ಥಿತರಿದ್ದರು.

ರಾಕೇಶ್ ಜೋಗಿ ಪ್ರಾಸ್ತವಿಕವಾಗಿ ಮಾತನಾಡಿದರು. ಪ್ರಭಾಕರ ಜೋಗಿ ಬಂಟಕಲ್ಲು ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...