ಉಡುಪಿ | ಇಂದಿನ ಸರಕಾರಗಳು ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ – ಪಂಜು ಗಂಗೊಳ್ಳಿ

Date:

ಯಾವುದೇ ಸರಕಾರ ನಿಜ ಹೇಳುವುದಿಲ್ಲ. ಈಗಿನ ಸರಕಾರಗಳಂತೂ ಸುಳ್ಳು ಹೇಳುವುದು ಮಾತ್ರವಲ್ಲ ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ. ಪತ್ರಿಕಾ ರಂಗ ಆ ಸುಳ್ಳಿನ ಹಿಂದೆ ಹೋಗಿ ಸತ್ಯವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಆದರೆ ಇಂದು ಆ ಪರಿಸ್ಥಿತಿ ಬದಲಾಗಿದೆ. ಸರಕಾರದ ಪರವಾಗಿ ಸುಳ್ಳುಗಳನ್ನು ಹರಡುವ ಕಾರ್ಯ ನಡೆಯುತ್ತಿದೆ ಎಂದು ಕಾರ್ಟೂನಿಸ್ಟ್ ಹಾಗೂ ಬಹರಗಾರ ಪಂಜು ಗಂಗೊಳ್ಳಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾದ ಸಂಘದ ಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪತ್ರಿಕಾ ರಂಗ ಇಂದು ಬಹಳಷ್ಟು ದುರ್ಬಲ ಸ್ಥಿತಿಯಲ್ಲಿದೆ. ಕೊಲೆ, ಅತ್ಯಾಚಾರ, ಶೋಷಣೆಯ ಸಂತ್ರಸ್ತರ ಪರ ನಿಲ್ಲುವ ಬದಲು ಶೋಷಣೆ ಮಾಡುವವರೊಂದಿಗೆ ನಿಲ್ಲುತ್ತಿದೆ. ಇದು ವೀಕ್ಷಕರು ಹಾಗೂ ಓದುಗರಿಗೆ ಮಾಡುವ ದ್ರೋಹ ಎಂದು ಅವರು ತಿಳಿಸಿದರು.ಹಿಂದೆ ಪ್ರತಕರ್ತರಿಗೆ ಸಮಾಜದಲ್ಲಿ ಗೌರವ ಸ್ಥಾನ ಇತ್ತು. ಜನ ಅವರ ಮಾತುಗಳನ್ನು ಗಂಭೀರವಾಗಿ ಕೇಳುತ್ತಿದ್ದರು ಮತ್ತು ಅದನ್ನು ಸತ್ಯ ಎಂಬುದಾಗಿ ನಂಬುತ್ತಿದ್ದರು. ಆದರೆ ಈಗ ನಾನೊಬ್ಬ ಪತ್ರಕರ್ತ ಹೇಳಿಕೊಂಡರೆ ಯಾವ ಪಕ್ಷದವರು ಕೇಳುವ ಸ್ಥಿತಿಯಲ್ಲಿ ನಾವು ಇದ್ದೇವೆ. ಆ ಮೂಲಕ ನಾವು ನೈತಿಕವಾಗಿ ದುರ್ಬಲವಾಗಿದ್ದೇವೆ ಎಂಬುದಕ್ಕೆ ಇದು ಸೂಚನೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳು ಏನು ಮಾಡುತ್ತದೆ ಮತ್ತು ಏನು ಮಾಡುತ್ತಿಲ್ಲ ಎಂದು ತಿಳಿಸುವ ಕಾರ್ಯವನ್ನು ಪತ್ರಿಕಾ ರಂಗ ಮಾಡಬೇಕು. ಹಾಗಾಗಿ ಪತ್ರಿಕಾ ರಂಗವನ್ನು ಜನ ಕಾವಲು ನಾಯಿ ಎಂಬುದಾಗಿ ತಿಳಿದುಕೊಂಡಿದ್ದಾರೆ. ಆದರೆ ಈಗ ಕೆಲವು ಮಾಧ್ಯಮ ನಿರ್ದಿಷ್ಟ ಪಕ್ಷದ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಎಂದು ಅವರು ದೂರಿದರು.

1005012009

ಮಾಧ್ಯಮ ಸರಕಾರವನ್ನು ಪ್ರಶ್ನಿಸುವ ಬದಲು ವಿರೋಧ ಪಕ್ಷಗಳನ್ನು ಪ್ರಶ್ನಿಸುತ್ತಿದೆ. ಮಾಧ್ಯಮ ಸರಕಾರದ ವಿರೋಧ ಪಕ್ಷ ಆಗುವ ಬದಲು ವಿರೋಧ ಪಕ್ಷಗಳ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದೆ. ಈ ಕುರಿತು ಇಂದು ನಾವು ನಮ್ಮನ್ನೇ ಪ್ರಶ್ನಿಸಬೇಕಾಗಿದೆ ಎಂದು ಅವರು ತಿಳಿಸಿದರು.

ಹಿರಿಯ ಪತ್ರಕರ್ತ ಮೋಹನ್ಚಂದ್ರ ನಂಬಿಯಾರ್ ಸಂಘದ ಸ್ಥಾಪನೆ, ಅಧ್ಯಕ್ಷರುಗಳ ಕೊಡುಗೆ ಕುರಿತು ಮಾತನಾಡಿದರು. ಸ್ಥಾಪನಾ ದಿನದ ಗೌರವ ಸನ್ಮಾನವನ್ನು ಸಂಘದ ಸ್ಥಾಪಕ ಸದಸ್ಯ, ಹಿರಿಯ ಪತ್ರಕರ್ತ ಡಾ.ಸುಧಾಕರ್ ನಂಬಿಯಾರ್ ಅವರಿಗೆ ಸಲ್ಲಿಸಲಾಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು.

ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಸಂಘದ ಸದಸ್ಯ ಆಸ್ಟ್ರೋ ಮೋಹನ್ ಅವರನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಅಸ್ಟ್ರೋ ಮೋಹನ್ ತಮ್ಮ ಪುಸ್ತಕಗಳನ್ನು ಸಂಘದ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಅತಿಥಿಗಳ ಪರಿಚಯ ಮಾಡಿದರು. ರಜತ ಮಹೋತ್ಸವ ಸಮಿತಿಯ ಸಂಚಾಲಕ ಶರೀಫ್ ಕಾರ್ಕಳ ವಂದಿಸಿದರು. ಪತ್ರಕರ್ತ ಮೈಕಲ್ ರೋಡಿಗ್ರಸ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...