ಉಡುಪಿ | ನಿರ್ಭೀತವಾದ ಪತ್ರಿಕೋದ್ಯಮ ತುಂಬಾ ಅಗತ್ಯ: ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ

Date:

ಪ್ರಸ್ತುತ ದಿನಗಳಲ್ಲಿ ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ನಿರ್ಭೀತವಾದ ಪತ್ರಿಕೋದ್ಯಮ ತುಂಬಾ ಅಗತ್ಯವಾಗಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡವಿರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡದ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾ ಕೂಟ ಉದ್ಘಾಟಿಸಿ, ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, “ಪತ್ರಿಕೋದ್ಯಮ ಪ್ರಭಾವಿ ಮಾಧ್ಯಮವಾಗಿದ್ದು, ಜನರು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಕರ್ತರು ದಿನದ 30 ನಿಮಿಷಗಳನ್ನು ಕ್ರೀಡಾ ಚಟುವಟಿಕೆಗಳಿಗೆ ಮೀಸಲಿಡಬೇಕು. ಇದರಿಂದ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಧ್ವಜಾರೋಹಣ ನೆರವೇರಿಸಿದರು. ರಜತ ಮಹೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ದೀಪಕ್ ಜೈನ್ ನೇತೃತ್ವದಲ್ಲಿ ವಿವಿಧ ತಾಲೂಕು ಸಂಘಗಳ ಸದಸ್ಯರಿಂದ ಪಥ ಸಂಚಲನ ನಡೆಯಿತು. ರಜತ ಮಹೋತ್ಸವ ಸಮಿತಿಯ ಕ್ರೀಡಾ ಸಂಚಾಲಕ ರಾಜು ಖಾರ್ವಿ ನೇತೃತ್ವದಲ್ಲಿ ಕ್ರೀಡಾ ಜ್ಯೋತಿ ಬೆಳಗಿಸಲಾಯಿತು. ಕ್ರೀಡಾಜ್ಯೋತಿಯನ್ನು ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ, ಉದ್ಯಮಿ ಆನಂದ ಪಿ. ಸುವರ್ಣ ಮಲ್ಪೆ, ಮಣಿಪಾಲ ಮಾಹೆಯ ಕ್ರೀಡಾ ಕಾರ್ಯದರ್ಶಿ ವಿನೋದ್ ನಾಯಕ್ ಭಾಗವಹಿಸಿದ್ದರು. ಕ್ರೀಡಾಕೂಟಕ್ಕೆ ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಚಾಲನೆ ನೀಡಿದರು.

ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಶರೀಫ್ ಕಾರ್ಕಳ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ಕೆ ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ಓಟ, ರಿಲೇ, ಹಗ್ಗಜಗ್ಗಾಟ, ಮಡಕೆ ಒಡೆಯುವುದು ಸೇರಿದಂತೆ ವಿವಿಧ ಮನರಂಜನಾ ಸ್ಪರ್ಧೆಗಳು ನಡೆದವು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...