ಉಡುಪಿ | ಕೊರಂಟಿಕಟ್ಟೆ ನವೀಕೃತ ಮಸೀದಿ ಉದ್ಘಾಟನೆ; ಸೌಹಾರ್ದ ಸಂಗಮ

Date:

ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಕಳತ್ತೂರು ಕೊರಂಟಿಕಟ್ಟೆಯಲ್ಲಿ ನವೀಕೃತಗೊಂಡ ಮಸ್ಜಿದ್ ಇ ನೂರು ಮಸೀದಿ ಉದ್ಘಾಟನೆ ಕಾರ್ಯ ಕ್ರಮದ ಪ್ರಯುಕ್ತ ಸೌಹಾರ್ದ ಸಂಗಮ ಸಮಾರಂಭವನ್ನು ರವಿವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಗಿತ್ತು.

ಸೌಹಾರ್ದ ಸಂಗಮವನ್ನು ಮಜೂರು ಮಲ್ಲಾರು ಬದ್ರಿಯಾ ಜುಮ್ಮಾ ಮಸೀದಿಯ ಖತೀಬ್ ಅಬ್ದುಲ್ ರಶೀದ್ ಕಾಮಿಲ್ ಸಖಾಫಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಸೀದಿ ಅಧ್ಯಕ್ಷ ಬಿ.ಎ.ಫಕ್ರುದ್ದೀನ್ ಅಲಿ ವಹಿಸಿದ್ದರು. ಖತೀಬ್ ನೌಫಲ್ ಸಖಾಫಿ ದುವಾ ನೆರವೇರಿಸಿದರು.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿದರು. ವಕೀಲ ಹಂಝತ್ ಹೆಜಮಾಡಿ ಸೌಹಾರ್ದ ಸಂದೇಶ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಝ್ಮತ್ ಅಲಿ, ಪಿಡಬ್ಲ್ಯುಡಿ ಮಂಗಳೂರು ವಿಭಾಗದ ಅಹಮದ್ ನೌಝಲ್, ಕಳತ್ತೂರು ಗ್ರಾಪಂ ಅಧ್ಯಕ್ಷ ಜನಾರ್ದನ ಆಚಾರ್ಯ, ಉದ್ಯಮಿಗಳಾದ ನಿತ್ಯಾ ನಂದ ಫೈಯರ್, ಶ್ರೀಧರ ಭಟ್ ಚಂದ್ರನಗರ, ಗ್ರಾಪಂ ಮಾಜಿ ಉಪಾಧ್ಯಕ್ಷ ಪ್ರವೀಣ್ ಪೈ ಗುರ್ಮೆ, ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಶರ್ಫುದ್ದೀನ್ ಶೇಕ್, ಗ್ರಾಪಂ ಸದಸ್ಯ ಸ್ಟ್ಯಾನ್ಲಿ ಕೋರ್ದ ಮುಖ್ಯ ಅತಿಥಿಗಳಾಗಿದ್ದರು.

ಈ ಸಂದರ್ಭದಲ್ಲಿ ಕಾಪು ಬೀಚ್‌ನಲ್ಲಿ ಹಲವು ಮಂದಿಯ ಜೀವ ರಕ್ಷಿಸಿದ ಮೊಗವೀರ ಸಮುದಾಯದ ಏಳು ಮಂದಿಯನ್ನು, ಸಮಾಜ ಸೇವಕ ಜಲಾಲುದ್ದೀನ್ ಉಚ್ಚಿಲ ಮತ್ತು ತಂಡ, ಪತ್ರಕರ್ತರಾದ ನಝೀರ್ ಪೊಲ್ಯ, ಖಲೀಲ್ ಕಾರ್ಕಳ, ಹಿರಿಯ ಖತೀಬ್ ಅಹ್ಮದ್ ಮುಸ್ಲಿಯಾರ್, ಲೈನ್‌ಮೆನ್‌ಗಳು ಸೇರಿದಂತೆ ಹಲವು ಮಂದಿ ಸಾಧಕರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಪ್ರಮುಖರಾದ ಎಚ್.ಆರ್.ಹಸನ್, ಅಬ್ದುಲ್ ರಝಾಕ್ ಖಾಸಿಮಿ, ಅಬ್ದುಲ್ ಝಿಯಾನ್, ಅಲಿಯಬ್ಬ ಇಬ್ರಾಹಿಂ ಕೊರಂಟಿಕಟ್ಟೆ, ಅಹಮದ್ ಶಬೀರ್ ಸಖಾಫಿ, ಶಾಬಾನ್ ಕರಂದಾಡಿ, ಮುಹಮ್ಮದ್ ಮುಸ್ತಫಾ ಸಖಾಫಿ, ಅಬ್ದುಲ್ ಮಜೀದ್ ಹನೀಫ್, ಮುಹಿಯುದ್ದೀನ್ ಸಖಾಫಿ, ಯಾಕೂಬ್ ಸಅದಿ, ಸಾದಿಕ್ ದೀನರ್ ಕಾಪು, ನಝೀರ್ ಕೊಂಬಗುಡ್ಡೆ, ಅಬ್ದುಲ್ಲಾ ಸೂಪರ್‌ಸ್ಟಾರ್, ಅಬ್ದುಲ್ ಜಲೀಲ್ ಸಾಹೇಬ್, ಇಂಜಿನಿಯರ್ ಸುಲೈಮಾನ್ ಕಾಪು, ಇದ್ರೀಸ್ ಮೌಲಾನ, ಮೌಲಾನ ಅಲ್‌ಲಖ್ ರಝಾ, ಮೌಲಾನ ಝಮೀರ್ ಅಹ್ಮದ್ ರಶದಿ, ಅಬ್ಬಾಸ್ ಬ್ಯಾರಿ, ಮುಸ್ತಾಕ್ ಅಹ್ಮದ್, ಅಬ್ದುಲ್ಲಾ ಮೊಯಿದಿನ್ ಉಪಸ್ಥಿತರಿದ್ದರು.

ಮಸೀದಿ ಕಾರ್ಯದರ್ಶಿ ಇಮ್ರಾನ್ ಬಶೀರ್ ಸ್ವಾಗತಿಸಿದರು. ರಝಾಕ್ ಕೊರಂಟಿಕಟ್ಟೆ ವಂದಿಸಿದರು. ಆಸೀಫ್ ಉಚ್ಚಿಲ ಕಾರ್ಯಕ್ರಮ ನಿರೂಪಿಸಿದರು.

ಮಸೀದಿ ಉದ್ಘಾಟನೆ: ನವೀಕೃತ ಮಸೀದಿಯ ಉದ್ಘಾಟನೆಯನ್ನು ಶುಕ್ರವಾರ ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ನಾಯಿಬ್ ಖಾಝಿ ಅಬ್ದುಲ್ ರಹಿಮಾನ್ ಮದನಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷ ಬಿ.ಎ.ಫಕ್ರುದ್ದೀನ್ ಅಲಿ, ಗೌರವಾಧ್ಯಕ್ಷ ಅಲ್‌ಹಾಜ್ ಅಬ್ದುಲ್ ಕರೀಂ, ಖತೀಬ್ ನೌಫಲ್ ಸಖಾಫಿ, ಮೂಳೂರು ಮಸೀದಿ ಖತೀಬ್ ಅಶ್ರಫ್ ಸಖಾಪಿ ಅಲ್ ಹಿಕಮಿ, ಶಿರ್ವ ಮಸೀದಿ ಖತೀಬ್ ಸಿರಾಜುದ್ದೀನ್ ಝೈನಿ ಅಲ್ ರಶಾದಿ, ಮಸೀದಿ ಕೋಶಾಧಿಕಾರಿ ಹನೀಫ್ ಚಂದ್ರನಗರ ಉಪಸ್ಥಿತರಿದ್ದರು.

1009207720
1009207702

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...