ಉಡುಪಿ | ಕಾವಡಿ ಹಾಲಿನ ಡೇರಿ ಚುನಾವಣೆಯಲ್ಲಿ ಅಕ್ರಮ; 11 ಮಂದಿ ಅಭ್ಯರ್ಥಿಗಳಿಂದ ಮತದಾನ ಬಹಿಷ್ಕಾರ

Date:

ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕಾವಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯನ್ನು ಅಭ್ಯರ್ಥಿಗಳೇ ಬಹಿಷ್ಕರಿಸುವ ಅಪರೂಪದ ಘಟನೆ ನಡೆದಿದೆ. 2023-24ನೇ ಸಾಲಿನ ಮುಂದಿನ ಐದು ವರ್ಷಗಳಿಗೆ ಆಡಳಿತ ಮಂಡಳಿ ಸದಸ್ಯರಾಗಲು 11 ಮಂದಿ ಅಭ್ಯರ್ಥಿಗಳಿಗಾಗಿ ಅಗಸ್ಟ್ 5 ರಂದು ಚುನಾವಣೆ ನಿಗದಿಯಾಗಿದೆ. ಆಡಳಿತ ಮಂಡಳಿಯ ಸದಸ್ಯತ್ವ ಬಯಸಿ ಎರಡು ಬಣದಿಂದ ಒಟ್ಟು 22 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಚುನಾವಣಾ ಕಣದಲ್ಲಿದ್ದರು.

ಒಂದು ಬಣದ 11 ಜನ ಅಭ್ಯರ್ಥಿಗಳಿಗೆ ನೀಡಿದ ಮತದಾರರ ಪಟ್ಟಿಯನ್ನು ಪರಿಶೀಲಿಸಿದಾಗ ಸುಮಾರು 177 ಸದಸ್ಯರನ್ನು ಅನರ್ಹಗೊಳಿಸಿ ಅವರನ್ನು ಮತದಾನದಿಂದ ವಂಚಿತರನ್ನಾಗಿ ಮಾಡಿರುವುದು ಅಭ್ಯರ್ಥಿಗಳ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಬಣದವರು ಹೈಕೋರ್ಟ್ ಮೆಟ್ಟಿಲೇರಿ, 177 ಅನರ್ಹ ಸದಸ್ಯರಲ್ಲಿ 43 ಸದಸ್ಯರನ್ನು ಅರ್ಹಗೊಳಿಸಿ ಮತದಾನ ಮಾಡಲು ಹಕ್ಕು ನೀಡಿರುವುದು ಗಮನಕ್ಕೆ ಬಂದಿದೆ.

ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960ರ ನಿಯಮ 13ಡಿ (2-A) ರನ್ವಯ ಸಂಘದ ಚುನಾವಣೆಗೆ 195 ದಿನ ಬಾಕಿ ಇರುವಾಗ ಅನರ್ಹ ಸದಸ್ಯರಿಗೆ ನೋಟಿಸ್ ನೀಡಿ, ಸ್ವೀಕೃತವಾದ ಅಹವಾಲುಗಳನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿ, ನಿಯಮಾನುಸಾರ ವಿಚಾರಣೆ ನಡೆಸಿ ವಿಲೇವಾರಿಗೊಳಿಸಬೇಕು. ಆದರೆ ಅಂತಿಮ ಮತದಾರರ ಪಟ್ಟಿ ಸಿದ್ಧಪಡಿಸಿರುವುದರಿಂದ ಸಂಘದ ಸದಸ್ಯರು ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶದಿಂದ ವಂಚಿತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದು ಕಾನೂನಿಗೆ ವಿರುದ್ಧವಾಗಿದ್ದು, ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಕ್ರಮ ದುರುದ್ದೇಶದಿಂದ ಕೂಡಿದೆ ಎಂದು ಆಪಾದಿಸಲಾಗಿದೆ. ಈ ರೀತಿಯಾಗಿ ಸಂಘದ ಸದಸ್ಯರಿಗೆ ಅನ್ಯಾಯವಾಗಿ ಅವರನ್ನು ಹಕ್ಕಿನಿಂದ ವಂಚಿತರನ್ನಾಗಿ ಮಾಡಿರುವುದಕ್ಕೆ 11 ಮಂದಿ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸುವುದರೊಂದಿಗೆ, 11 ಮಂದಿ ಅಭ್ಯರ್ಥಿಗಳೂ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ಮತದಾನದಿಂದ ವಂಚಿತರಾದ ಸಂಘದ ಸದಸ್ಯರ ಪರವಾಗಿ ಅನ್ಯಾಯದ ವಿರುದ್ಧ ಕಾನೂನು ಹೋರಾಟ ಮಾಡಲು ತಮ್ಮ ಸಂಪೂರ್ಣ ಬೆಂಬಲ ಘೋಷಿಸಿ ಪ್ರತಿಭಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ʼಗೃಹಜ್ಯೋತಿʼ ಯೋಜನೆಗೆ ಅಧಿಕೃತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

“11 ಮಂದಿ ಅಭ್ಯರ್ಥಿಗಳು ಚುನಾವಣಾ ಅಧಿಕಾರಿಗೆ ಮನವಿ ಸಲ್ಲಿಸಿ ಅನರ್ಹ ಸದಸ್ಯರ ಪಟ್ಟಿಯನ್ನು ಮರುಪರಿಶೀಲಿಸಿ, ಅನ್ಯಾಯ ಹಾಗೂ ಮೋಸ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಮಂಜುನಾಥ ಹೆಬ್ಬಾರ್, ಮಹಾಬಲ ಪೂಜಾರಿ, ಸಂತೋಷ್ ಶೆಟ್ಟಿ, ರಾಜೀವ ಶೆಟ್ಟಿ, ದಿನಕರ್ ಶೆಟ್ಟಿ, ಕೃಷ್ಣ ಜಿ. ಕುಮಾರ್, ಸಂಪ ಮರಕಾಲ್ತಿ, ರುದ್ರಮ್ಮ ಶೆಟ್ಟಿ, ಸವಿತಾ, ಜ್ಯೋತಿ ಕುಲಾಲ್, ಗಿರಿಜಾ ಕುಲಾಲ್ತಿ ಚುನಾವಣೆ ಬಹಿಷ್ಕರಿಸಿದ್ದು, ಸಂಘದ ಸದಸ್ಯರಾದ
ಗಣೇಶ್ ರಾವ್, ಉದಯ ಚಂದ್ರ ಶೆಟ್ಟಿ, ಪ್ರಭಾಕರ್ ಮಾಸ್ಟರ್, ಗೋಪಾಲ್ ಕಾಂಚನ್, ಜಯರಾಮ್ ಶೆಟ್ಟಿ, ವೇದಾವತಿ ಜಿ. ರಾವ್, ಜಯ ಮಹಾಬಲ ಪೂಜಾರ್ತಿ ಸೇರಿದಂತೆ ಇತರರು ಬೆಂಬಲ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...