ಉಡುಪಿ | ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿಯ ಹಣತೆ ಹಚ್ಚೋಣ : ವಂ| ಕುಮಾರ್ ಸಾಲಿನ್ಸ್

Date:

ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿ, ಸಹಬಾಳ್ವೆ ಎಂಬ ಹಣತೆಗಳನ್ನು ಹಚ್ಚುವ ಮೂಲಕ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕನ್ನು ಕಾಣುವ ಕೆಲಸ ಇಂದಿನ ಪ್ರಮುಖ ಆದ್ಯತೆಯಾಗಬೇಕು ಎಂದು ಯುಬಿಎಂ ಚರ್ಚ್ ಮಲ್ಪೆ ಇದರ ವಂ| ಕುಮಾರ್ ಸಾಲಿನ್ಸ್ ಹೇಳಿದರು.

ಅವರು ಗುರುವಾರ ಮಲ್ಪೆ ಸಿಎಸ್ ಐ ಎಬನೇಜರ್ ಚರ್ಚ್ ಮಲ್ಪೆಯಲ್ಲಿ ಜರುಗಿದ ಕಲ್ಯಾಣಪುರ ವಲಯ ಹಂತದ ಕ್ರೈಸ್ತ ಐಕ್ಯತಾ ಪ್ರಾರ್ಥನಾ ಸಭೆಯಲ್ಲಿ ಪ್ರಬೋಧನೆ ನೀಡಿ ಮಾತನಾಡಿದರು.

ಬೆಳಕು ನಮ್ಮ ಸುತ್ತಲಿನ ಕತ್ತಲನ್ನು ಕರಗಿಸುತ್ತದೆ. ಯೇಸು ಸ್ವಾಮಿಯು ಮರಣವನ್ನು ಜಯಿಸಿ ಪುನರುತ್ಥಾನದ ಬೆಳಕನ್ನು ನಮಗೆ ನೀಡಿದ್ದಾರೆ. ಅಂತೆಯೇ ನಾವು ಕೂಡ ಕತ್ತಲನ್ನು ತುಂಬಿದ ದುರ್ಬಲರ ಬದುಕಿನಲ್ಲಿ ಹಣತೆ ಹಚ್ಚುವ ಕೆಲಸ ಮಾಡಿದಾಗ ನಮ್ಮ ಜೀವನ ಸಾರ್ಥಕತೆಯನ್ನು ಕಾಣುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಸಹಾಯಕ ಧರ್ಮಗುರು ವಂ|ಪ್ರದೀಪ್ ಕಾರ್ಡೊಜಾ ತಮ್ಮ ಪ್ರಬೋಧನೆಯಲ್ಲಿ ಪರರನ್ನು ಪ್ರೀತಿಸದ ಮಾನವ ಹೃದಯ ಸ್ಮಶಾನಕ್ಕೆ ಸಮ ಎಂಬಂತೆ ನಾವು ವಸ್ತುಗಳನ್ನು ಪ್ರೀತಿಸುವ ಬದಲು ಮಾನವರನ್ನು ಪ್ರೀತಸುವುದರ ಮೂಲಕ ಪ್ರತಿಯೊಬ್ಬರೂ ಶಾಂತಿಯ ದೂತರಾಗಿ ಜಗತ್ತಿಗೆ ದಾರಿದೀಪವಾಗುವ ಕೆಲಸವನ್ನು ಮಾಡಬೇಕಾಗಿದೆ. ಪರರ ಕಷ್ಟ ಸಂಕಷ್ಟಗಳಿಗೆ ನಾವು ಸ್ಪಂದಿಸುವುದರ ಮೂಲಕ ಐಕ್ಯತಾ ಮನೋಭಾವವನ್ನು ವೃದ್ಧಿಗೊಳಿಸಬೇಕು. ಪರರ ನೋವಿಗೆ ದನಿಯಾದಾಗ ಅವರಲ್ಲಿ ಪರಮಾತ್ಮನನ್ನು ಕಾಣಲು ಸಾಧ್ಯವಿದೆ. ಸಮಾಜದಲ್ಲಿ ನಿರ್ಗತಕರನ್ನು ಅನಾಥರನ್ನು ಪ್ರೀತಿಸುವ ಮೂಲಕ ಯೇಸು ಸ್ವಾಮಿ ತೋರಿಸಿದ ದಾರಿಯಲ್ಲಿ ಸಾಗಬೇಕು ಎಂದರು.

ಪ್ರಾರ್ಥನಾ ಕೂಟದ ನೇತೃತ್ವವನ್ನು ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಹಾಗೂ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಪ್ರಧಾನ ಧರ್ಮಗುರುಗಳಾದ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ವಹಿಸಿದ್ದರು. ಪ್ರಾರ್ಥನಾ ಕೂಟದಲ್ಲಿ ವಂ|ಡಾ|ರೋಕ್ ಡಿಸೋಜಾ, ವಂ|ಜೋನ್ ಫೆರ್ನಾಂಡಿಸ್, ವಂ|ವಿಲ್ಸನ್ ಡಿಸೋಜಾ, ವಂ|ಅಶ್ವಿನ್ ಆರಾನ್ಹಾ, ವಂ|ಜೋಕಿಮ್ ಡಿಸೋಜಾ, ಸಿಎಸ್ ಐ ಸಭೆಯ ಉಡುಪಿ ವಲಯ ಮುಖ್ಯಸ್ಥರಾದ ವಂ|ಕಿಶೋರ್, ವಂ|ಎಡ್ವಿನ್ ಸೋನ್ಸ್, ತೊಟ್ಟಂ ಚರ್ಚಿನ ಪಾಲನಾ ಸಮಿತಿಯ ಲೆಸ್ಲಿ ಆರೋಜಾ, ಸಿಸ್ಟರ್ ಸುಶ್ಮಾ, ರೋಮನ್ ಕ್ಯಾಥೊಲಿಕ್, ಸಿಎಸ್ ಐ, ಸಹಿತ ವಿವಿಧ ಕ್ರೈಸ್ತ ಸಭೆಗಳ ಪ್ರತಿನಿಧಿಗಳು ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡಿದ್ದರು.

ಸಿಎಸ್ ಐ ಎಬನೇಜರ್ ಚರ್ಚ್ ಮಲ್ಪೆ ಪಾಸ್ಟರ್ ವಂ|ವಿನಯ್ ಸಂದೇಶ್ ಸ್ವಾಗತಿಸಿ, ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...