ಉಡುಪಿ | ಕಾರ್ಮಿಕ ಸಂಹಿತೆಗಳ ಅಧಿಸೂಚನೆ, ಜಿಲ್ಲೆಯಾದ್ಯಂತ ಪ್ರತಿಭಟನೆ

Date:

ಇಪ್ಪತ್ತೈದು ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಿ ಹೊಸ ಕಾರ್ಮಿಕ ಸಂಹಿತೆ ವಿರೋಧಿಸಿದರೂ ಕೇಂದ್ರ ಸರಕಾರವು ತನ್ನ ಪಕ್ಷದ ಬೆಳೆವಣಿಗೆಗೆ ದೇಶದ ಬಂಡವಾಳಗಾರರಿಂದ ಲಾಭ ಪಡೆಯಲು ಬಂಡವಾಳಗಾರರ ಪರವಾದ ನೂತನ ಕಾರ್ಮಿಕ ಸಂಹಿತೆ ಅಧಿಸೂಚನೆ ಹೊರಡಿಸಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.

ಅವರು ಸಾಲಿಗ್ರಾಮದಲ್ಲಿ ನಡೆದ ಕಟ್ಟಡ ಕಾರ್ಮಿಕರ ಸಭೆಯಲ್ಲಿ ನೂತನ ಕಾರ್ಮಿಕ ಸಂಹಿತೆ ದಹಿಸಿ ಮಾತನಾಡಿದರು. ಹೊಸ ಕಾರ್ಮಿಕ ಸಂಹಿತೆ ಕಾರ್ಮಿಕರು ಅನ್ಯಾಯಕ್ಕೊಳಗಾದಾಗ ನಡೆಸುವ ಮುಷ್ಕರ ದೇಶದ್ರೋಹ ಆಗುತ್ತದೆ.
ಮಾಲಿಕರು ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಲು ನಿರಾಕರಿಸಿದಾಗ ಲೇಬರ್ ಇನ್ಸ್ಪೆಕ್ಟರ್ ಮಾಡುವ ತಪಾಸಣೆ ನಿರ್ಬಂಧಿಸುತ್ತದೆ ಅಥವಾ ಸ್ಪೇಷಲಿಟೇಟರ್ ಆಗುತ್ತದೆ.

WhatsApp Image 2025 11 23 at 8.02.35 PM

ಕಾರ್ಮಿಕ ಇಲಾಖೆ ಕಾರ್ಮಿಕರ ರಕ್ಷಣೆಗೆ ಬದಲಾಗಿ ಖಾಸಗಿ ವಲಯದಲ್ಲಿ ಉದ್ಯೋಗ ಒದಗಿಸುವ ಮಾಲಿಕರ ಏಜೆಂಟ್ ಆಗಿ ಕೆಲಸ ಮಾಡಲು ಸೀಮಿತಗೊಳ್ಳುವ ಅಪಾಯಕಾರಿ ಅಂಶಗಳು ಶ್ರಮಶಕ್ತಿ ನೀತಿ -2025 ರಲ್ಲಿ ಅಡಕವಾಗಿದೆ ಆದರೆ ಕೇಂದ್ರ ಸರ್ಕಾರ ಇವುಗಳನ್ನು ಮರೆಮಾಚಿ ಜನರನ್ನು ಮರಳುಗೊಳಿಸುವ ಪ್ರಕಟಣೆ ಮಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಹೊಸ ಸಂಹಿತೆ ರಾಜ್ಯ ಸರ್ಕಾರ ಜಾರಿ ಮಾಡಬಾರದು ಎಂದು ಅವರು ಹೇಳಿದರು. ಹೊಸ ಸಂಹಿತೆಯು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮೇಲೆ ದುಷ್ಪರಿಣಾಮ ಬೀರುತ್ತದೆ ಮಂಡಳಿ ರದ್ದಾಗುತ್ತದೆ ಈ ಸಂಹಿತೆ ವಾಪಾಸ್ಸು ಪಡೆಯಬೇಕು ಎಂದು ಅವರು ಆಗ್ರಹಿಸಿದರು.

WhatsApp Image 2025 11 23 at 8.02.45 PM

ಪ್ರತಿಭಟನೆಯು ಉಡುಪಿ ತಾಲೂಕು ಸಾಲಿಗ್ರಾಮ, ಕುಂದಾಪುರ ತಾಲೂಕು ಹಾಲಾಡಿ, ಗಂಗೊಳ್ಳಿ, ಆಲೂರು ಗ್ರಾಮಗಳಲ್ಲಿ ಕಾರ್ಮಿಕರು ಕೇಂದ್ರ ಸರ್ಕಾರದ ಜಾರಿ ಮಾಡಿದ ಪ್ರತಿಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ, ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ಗೌರವಾಧ್ಯಕ್ಷರಾದ ಚಿಕ್ಕ ಮೊಗವೀರ ಗಂಗೊಳ್ಳಿ, ಶಶಿಕಾಂತ್, ರಘುರಾಮ ನಾಯ್ಕ್,ಅನಂತ ಕುಲಾಲ್, ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಮುಖಂಡರಾದ ರಾಮ ಕಾರ್ಕಡ, ಸಾಲಿಗ್ರಾಮ ಕ್ರಷ್ಣ, ನಾಗರಾಜ್, ಶಾರದಾ ಇದ್ದರು. ಉಡುಪಿ ಜಿಲ್ಲೆಯಲ್ಲಿ 5 ಪ್ರದೇಶಗಳಲ್ಲಿ 217 ಮಂದಿ ಭಾಗವಹಿಸಿದ್ದರು.

WhatsApp Image 2025 11 23 at 8.02.46 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...