ದುಷ್ಟ ಶಕ್ತಿಗಳ ನಿವಾರಣೆಗೆ ‘ಗಣಹೋಮ’ದ ಮೊರೆಹೋದ ಉಡುಪಿ ವಕೀಲರ ಸಂಘ!

Date:

ಉಡುಪಿಯ ವಕೀಲರ ಸಂಘವು ಸಂಘದ ಉದ್ಧಾರಕ್ಕಾಗಿ ಹಾಗೂ ದುಷ್ಟ ಶಕ್ತಿಗಳ ನಿವಾರಣೆಗೆ ‘ಗಣಹೋಮ’ದ ಮೊರೆ ಹೋಗಿದ್ದಾರೆ. ಇದು ಈಗ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ರೆನೋಲ್ಡ್ ಪ್ರವೀಣ್ ಕುಮಾರ್ ಅವರ ಹೆಸರಿನಲ್ಲಿ ಪೋಸ್ಟ್ ಒಂದನ್ನು ಹಂಚಲಾಗುತ್ತಿದ್ದು, ಫೆ.10ರ ಸೋಮವಾರ ಬೆಳಗ್ಗೆ 8ಕ್ಕೆ ಸ್ಥಳಾಂತರಗೊಂಡಿರುವ ವಕೀಲರ ಸಂಘದಲ್ಲಿ ಗಣಹೋಮ ಹಮ್ಮಿಕೊಂಡಿರುವುದಾಗಿ ತಿಳಿಸಲಾಗಿದೆ.

ವೈರಲ್ ಆಗಿರುವ ಪೋಸ್ಟರ್‌ನಲ್ಲಿ, “ಉಡುಪಿ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡ ವಕೀಲರ ಸಂಘದಲ್ಲಿ ಸದಸ್ಯರ ಶ್ರೇಯೋಭಿವೃದ್ಧಿಗಾಗಿ ಹಾಗೂ ತಮ್ಮ ಸ್ವಾರ್ಥ ಸಾಧನೆಗಾಗಿ ವಿನಾಕಾರಣ ಸುಳ್ಳು ಆರೋಪ ಹೊರಿಸಿ ಕಿರುಕುಳ ನೀಡುತ್ತಾ ಸಂಘಕ್ಕೆ ಅಹಿತ ಬಯಸುವ ಸಮಸ್ತ ದುಷ್ಟ ಶಕ್ತಿಗಳ ನಿವಾರಣೆಗಾಗಿ ದಿನಾಂಕ 10.2.2025ನೇ ಸೋಮವಾರ ಬೆಳಗ್ಗೆ 8ಕ್ಕೆ ಸರಿಯಾಗಿ ಸ್ಥಳಾಂತರಿತ ವಕೀಲರ ಸಂಘದಲ್ಲಿ “ಗಣಹೋಮ” ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಸದಸ್ಯರು ಪಾಲ್ಗೊಂಡು ವಿಘ್ನೇಶ್ವರನ ಕೃಪೆಗೆ ಪಾತ್ರರಾಗಬೇಕಾಗಿ ಕೋರುತ್ತಿದ್ದೇವೆ” ಎಂದು ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003366822
ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಪೋಸ್ಟರ್

ಕಾನೂನಿನ ಶಿಕ್ಷಣ ಪಡೆದು, ಮೌಢ್ಯತೆ ದೂರ ಮಾಡಬೇಕಾದ ವಕೀಲರೇ, ‘ತಮ್ಮ ಸಂಘದ ವಿರುದ್ಧದ ದುಷ್ಟ ಶಕ್ತಿಯನ್ನು ನಿವಾರಿಸುವ ಉದ್ದೇಶಕ್ಕಾಗಿ’ ಎಂದು ಉಲ್ಲೇಖಿಸಿ ಗಣಹೋಮ ಹಮ್ಮಿಕೊಂಡಿರುವುದು ಈಗ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ, ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಇದನ್ನು ಪ್ರಶ್ನಿಸುತ್ತಿದ್ದಾರೆ.

ವಕೀಲರ ಸಂಘಕ್ಕೆ ಅಹಿತ ಬಯಸುತ್ತಿರುವ ದುಷ್ಟ ಶಕ್ತಿಗಳು ಯಾರು? ಆ ದುಷ್ಟ ಶಕ್ತಿಗಳು ಸಂಘಕ್ಕೆ ಏನು ಮಾಡಿದೆ ಎಂಬುದನ್ನು ಉಡುಪಿ ವಕೀಲರ ಸಂಘವೇ ಉತ್ತರಿಸಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...