ಉಡುಪಿ | ವರಾಂಡದಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ

Date:

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೊಟ್ಟು ಬಳಿ ನಡೆದಿದೆ.

ಬಿಹಾರ ಮೂಲದ ಕಾರ್ಮಿಕ ಸುರೇಂದ್ರ (55) ಗಾಯಗೊಂಡ ವ್ಯಕ್ತಿ. ಇವರು ನದಿಯಲ್ಲಿ ಮರಳುಗಾರಿಕೆ ನಡೆಸುವ ಕಾರ್ಮಿಕ ಎಂದು ತಿಳಿದುಬಂದಿದೆ.

ಇವರು ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ರಾಜೇಶ್‌ ಅವರ ಮನೆ ಬಳಿಯ ವರಾಂಡದಲ್ಲಿ ಭಾನುವಾರ ರಾತ್ರಿ ಮಲಗಿದ್ದಾಗ ಈ ಘಟನೆ ನಡೆದಿದೆ. ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ್ದು, ಕೆನ್ನೆ, ಗಲ್ಲ ಮತ್ತು ಮುಖಕ್ಕೆ ಗಾಯಗೊಳಿಸಿದೆ. ಸದ್ಯ ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿ ನಡೆಸಿದ ಚಿರತೆಯೊಂದಿಗೆ ಮರಿ ಚಿರತೆಯೂ ಇತ್ತು ಎನ್ನಲಾಗಿದೆ. ಕಲ್ಲೊಟ್ಟು, ಸೊರ್ಪು, ಆಗೋಳಿಬೈಲು, ಪದವು ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ಚಿರತೆ ಓಡಾಡುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದೆರಡು ದಿನಗಳಲ್ಲಿ ಕಲ್ಲೊಟ್ಟು ಸಂಗೀತಾ ನಾಯ್ಕ ಅವರ ಮನೆಯ ಎರಡು ಸಾಕು ನಾಯಿಗಳನ್ನು ಚಿರತೆ ಬೇಟೆಯಾಡಿ ನಾಯಿಗಳೆರಡನ್ನೂ ತಿಂದು ಹಾಕಿದೆ.

ಕಳೆದ ನವೆಂಬರ್‌ನಲ್ಲಿ ಇದೇ ಪರಿಸರದ ಕಲ್ಲೊಟ್ಟು ದೇವಣ್ಣ ನಾಯಕ್‌ ಎಂಬುವವರ ಮನೆಯ ಸಾಕು ನಾಯಿಯನ್ನು ಚಿರತೆ ಬೇಟೆಯಾಡಿ ಅರ್ಧ ತಿಂದು ಉಳಿದರ್ಧ ದೇಹವನ್ನು ಮಲ್ಲಿಗೆ ಗಿಡದ ತೋಟದ ಬಳಿ ಬಿಟ್ಟು, ಪರಾರಿಯಾಗಿತ್ತು.

“ಕಳೆದ ವರ್ಷ ಚಿರತೆಯೊಂದು ಪದವು ಮುಟ್ಲುಪಾಡಿ ರಸ್ತೆಯಲ್ಲಿ ಓಡಾಡುತ್ತಿರುವುದನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರೆಂದು ನಂಬಲಾದ ವೀಡಿಯೋವೊಂದು ವೈರಲ್‌ ಆಗಿತ್ತು. ಆ ಸಮಯ ಅರಣ್ಯ ಇಲಾಖೆಯವರು ಅಗೋಳಿಬೈಲು ಸಮೀಪ ದರ್ಕಾಸು ಬಳಿ ಚಿರತೆ ಹಿಡಿಯಲು ಬೋನು ಇಟ್ಟಿದ್ದರು. ಆದರೆ ಚಿರತೆ ಬೋನಿಗೆ ಬಿದ್ದಿರಲಿಲ್ಲ. ಈ ರಸ್ತೆಯಲ್ಲಿ ನಿತ್ಯವೂ ಶಿರ್ವದ ವಿವಿಧ ಶಾಲಾ ಕಾಲೇಜುಗಳಿಗೆ ಕಾಲ್ನಡಿಗೆಯಲ್ಲಿ ಹೋಗುವ ವಿದ್ಯಾರ್ಥಿಗಳು, ವಿವಿಧ ಸ್ಥಳಗಳಿಗೆ ಕೆಲಸಕ್ಕೆ ಹೋಗುವ ಸ್ಥಳೀಯರು, ವಾಹನ ಸವಾರರು ಭಯಭೀತರಾಗಿದ್ದು, ಗ್ರಾ.ಪಂ. ಆಡಳಿತ ಮತ್ತು ಅರಣ್ಯ ಇಲಾಖೆ ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸಬೇಕು” ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪರಿಹಾರ ನೀಡಲು ಪ್ರಯತ್ನ : ಘಟನೆ ನಡೆದ ಕಲ್ಲೊಟ್ಟು ಪರಿಸರದಲ್ಲಿ ಬೋನು ಇಡಲು ಅರಣ್ಯ ರಕ್ಷಕರಿಗೆ ಸೂಚಿಸಲಾಗಿದೆ. ಗಾಯಾಳುವನ್ನು ಭೇಟಿ ಮಾಡಿ, ದಾಳಿ ನಡೆಸಿದ್ದು ಚಿರತೆಯೇ ಆಗಿದ್ದರೆ, ಮಹಜರು ನಡೆಸಿ ಸರಕಾರದಿಂದ ಗರಿಷ್ಟ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ಪಡುಬಿದ್ರಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಜೀವನ್‌ ದಾಸ್‌ ಶೆಟ್ಟಿ ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...