ಉಡುಪಿ‌ | ಮಣಿಪಾಲ ಮಳೆಯ ರಭಸಕ್ಕೆ ಕಿತ್ತುಹೋದ ರಾಷ್ಟ್ರೀಯ ಹೆದ್ದಾರಿ, ಟ್ರಾಫಿಕ್ ಜಾಮ್

Date:

ಕರಾವಳಿಯ ಉಡುಪಿಯಲ್ಲಿ ಬಾರಿ ಗಾಳಿಮಳೆಯ ಹೊಡೆತಕ್ಕೆ ಮಣಿಪಾಲದ ಐನಾಕ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಕಿತ್ತುಹೋಗಿದೆ.

ಅಪಾರ ಪ್ರಮಾಣದಲ್ಲಿ ಮಳೆಯ ನೀರು ರಸ್ತೆಯಲ್ಲೇ ಹರಿದುಹೋಗುತ್ತಿದ್ದು, ನೀರಿನ ರಭಸಕ್ಕೆ ರಸ್ತೆ ಕಿತ್ತುಹೋಗಿ ತೋಡಾಗಿ ಮಾರ್ಪಟ್ಟಿದೆ. ಇದರಿಂದ ವಾಹನ ಸವಾರರಿಗೆ ಮುಂದಕ್ಕೆ ಚಲಿಸಲು ಆಗದೆ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಇದೇ ರೀತಿ ಮಳೆ ಮುಂದುವರಿದರೆ ಮಣಿಪಾಲ ಐನಾಕ್ಸ್ ಮುಂಭಾಗದ ರಸ್ತೆ ಸಂಪೂರ್ಣವಾಗಿ ಕಿತ್ತುಹೋಗುವ ಸಾಧ್ಯತೆ ಇದೆ. ಮಳೆನೀರು ಹೋಗಲು ಬೇರೆ ಜಾಗವಿಲ್ಲದೆ, ಹೆದ್ದಾರಿಯಲ್ಲೇ ಹರಿದು ಹೋಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...