ಉಡುಪಿ‌ | ಕಾರ್ಕಳ ಪಡುಬಿದ್ರಿ ಟೋಲ್ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆ

Date:

ಉಡುಪಿ ಜಿಲ್ಲೆಯ ಕಾರ್ಕಳ ಪಡುಬಿದ್ರಿ ಟೋಲ್‌ ಸಂಗ್ರಹಣಾ ಕೇಂದ್ರವನ್ನು ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಇದನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್‌ಗೇಟ್‌ ಹೋರಾಟ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಸಿತು.

ಈ ವೇಳೆ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, “ಲೋಕೋಪಯೋಗಿ ಇಲಾಖೆ ಸಚಿವರು ಈಗಾಗಲೇ ತಾತ್ಕಾಲಿಕ ರದ್ದು ಎಂಬ ಆದೇಶ ಹೊರಡಿಸಿದ್ದಾರೆ. ಆದರೆ ಈ ಅದೇಶ ಶಾಶ್ವತ ರದ್ದಾಗಬೇಕು. ರಾಜ್ಯಪತ್ರದಲ್ಲಿ, ಆದೇಶ ಪತ್ರದಲ್ಲಿ ಇದನ್ನು ಪ್ರಕಟಿಸಬೇಕು. ಈ ಬಗ್ಗೆ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು” ಎಂದರು.

IMG 20240824 WA0054 1

ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಮಾತನಾಡಿ, “ನಮ್ಮ ಊರಿಗೆ ಬಂದಿರುವ ಟೋಲ್‌ಗೇಟ್‌ ಎಂಬ ಕಂಟಕವನ್ನು ಒದ್ದೋಡಿಸುವ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲರೂ ಕೈಜೋಡಿಸಿರುವುದು ಹೋರಾಟಕ್ಕೆ ಬಲ ಬಂದಿದೆ. ಕಾರ್ಯಾದೇಶಕ್ಕೆ ತಾತ್ಕಾಲಿಕ ತಡೆ ಸ್ವಾಗತಾರ್ಹವೇ ಆಗಿದ್ದು, ಕಾರ್ಕಳ–ಪಡುಬಿದ್ರಿ ನಡುವಿನ ರಸ್ತೆಯಿಂದ ಸಂಪೂರ್ಣ ಎತ್ತಂಗಡಿಯಾಗುವವರೆಗೂ ಈ ಹೋರಾಟ ಮುಂದುವರಿಯಲಿದೆ. ರಾಜ್ಯ ಸರ್ಕಾರ ಕೂಡಲೇ ಸಂಪೂರ್ಣ ರದ್ದುಪಡಿಸಿ ಆದೇಶ ಹೊರಡಿಸಬೇಕು” ಎಂದು ಆಗ್ರಹಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಮಾರು ಸಾಂದೀಪನಿ ಸಾಧನಾಶ್ರಮದ ಈಶವಿಠಲದಾಸ ಸ್ವಾಮೀಜಿ ಮಾತನಾಡಿ, “ಟೋಲ್ ಹೋರಾಟವು ಜನರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದೆ. ಇಲ್ಲಿ ಎಲ್ಲ ಪಕ್ಷಗಳು ಹಾಗೂ ಎಲ್ಲ ಜಾತಿಯ ಜನರೂ ಒಗ್ಗೂಡಿದ್ದು, ರಾಜಕೀಯ ರಹಿತ ಹೋರಾಟಕ್ಕೆ ಸರ್ಕಾರವೂ ತಲೆಬಾಗುವುದು ನಿಶ್ಚಯವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಟೋಲ್ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ನಾವೆಲ್ಲರೂ ಒಗ್ಗೂಡೋಣ” ಎಂದರು.

IMG 20240824 WA0054 2

ಉಡುಪಿ ಶಾಸಕ ಯಶಪಾಲ್ ಸುವರ್ಣ, ವಿಧಾನ ಪರಿಷತ್‌ ಸದಸ್ಯ ಡಾ.‌ ಧನಂಜಯ ಸರ್ಜಿ, ಮಾಜಿ ಶಾಸಕರಾದ ಲಾಲಾಜಿ ಆ‌ರ್ ಮೆಂಡನ್, ಕೆ ರಘುಪತಿ ಭಟ್, ಪ್ರಮುಖರಾದ ಯೋಗೀಶ್‌ ಶೆಟ್ಟಿ ಬಾಲಾಜಿ, ಮುನಿಯಾಲು ಉದಯ ಕುಮಾ‌ರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಅನ್ಸಾರ್ ಅಹಮದ್ ಮೊದಲಾದವರು ಮಾತನಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

IMG 20240824 WA0051

ಕೆಎಂಎಫ್ ಅಧ್ಯಕ್ಷ ಕೆ ಸುಚರಿತ ಶೆಟ್ಟಿ, ಮಧ್ವರಾಯ ಭಟ್ ನಂದಿಕೂರು, ಮುಖಂಡರಾದ ಸತೀಶ್ ಶೆಟ್ಟಿ ಮುಟ್ಟುಪಾಡಿ, ಕುಯಿಲಾಡಿ ಸುರೇಶ್ ನಾಯಕ್, ಸಾಂತೂರು ಭಾಸ್ಕರ ಶೆಟ್ಟಿ, ರಾಮಕೃಷ್ಣ ಶರ್ಮ ಬಂಟಕಲ್ಲು, ಅನ್ಸಾರ್ ಅಹಮದ್‌ ಉಡುಪಿ, ರೇಷ್ಮಾ ಉದಯ ಶೆಟ್ಟಿ, ನವೀನ್ ಚಂದ್ರಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಉದಯ್ ಶೆಟ್ಟಿ ಇನ್ನ, ದೀಪಕ್ ಕೋಟ್ಯಾನ್‌ ಇನ್ನ, ಶೀಲಾ ಕೆ ಶೆಟ್ಟಿ ಎರ್ಮಾಳು, ವೆಂಕಟರಮಣ ಮುಚ್ಚಿಂತಾಯ, ದಿನೇಶ್ ಕೋಟ್ಯಾನ್ ಪಲಿಮಾರು, ದಿನಕರ ಬಾಬು, ಅಶೋಕ್‌ ಕುಮಾ‌ರ್ ಶೆಟ್ಟಿ, ಶಶಿಧರ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಸದಾಶಿವ ಶೆಟ್ಟಿ, ಪ್ರವೀಣ್‌ ಶೆಟ್ಟಿ ಕಪ್ಪೆಟ್ಟು, ಶಶಿಕಾಂತ್ ಪಡುಬಿದ್ರಿ, ಲಕ್ಷ್ಮಣ ಶೆಟ್ಟಿ, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಶಶಿಕಲಾ ಸೇರಿದಂತ ಬಹುತೇಕರು ಇದ್ದರು.

IMG 20240824 WA0052
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...