ಉಡುಪಿ | ನ. 16, 17ರಂದು ಬೃಹತ್ ಉದ್ಯೋಗ ಮೇಳ

Date:

ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳ ನಗರ ಮಣಿಪುರ, ಉಡುಪಿ ಇವರ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ವತಿಯಿಂದ ಸತತವಾಗಿ 3ನೇ ಬಾರಿ ಬೃಹತ್ ಎರಡು ದಿನಗಳ ಉದ್ಯೋಗ ಮೇಳ ನವೆಂಬರ್ 16 ಮತ್ತು 17 ರಂದು ಎಂಆರ್‌ಜಿ ಗ್ರೂಪ್ ನ ಪ್ರಾಯೋಜಕತ್ವದಲ್ಲಿ ನಡೆಯಲಿದೆ ಎಂದು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಆದ ಅಶೋಕ ಕುಮಾರ ಶೆಟ್ಟಿ ಹೇಳಿದರು.

ಉಡುಪಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಎರಡು ಬಾರಿ ನಡೆದ ಉದ್ಯೋಗ ಮೇಳ ದಲ್ಲಿ 1300ಕ್ಕಿಂತಲೂ ಹೆಚ್ಚು ಅಭ್ಯರ್ಥಿಗಳಿಗೆ ಉತ್ತಮ ಕಂಪನಿಗಳಲ್ಲಿ ಉದ್ಯೋಗ ಸಿಕ್ಕಿದೆ. ಈ ಬಾರಿಯು ಈಗಾಗಲೇ ಸುಮಾರು 1500 ಅಭ್ಯರ್ಥಿ ಗಳು ಆನ್‌ಲೈನ್ ಮೂಲಕ ರಿಜಿಸ್ಟ‌ರ್ ಮಾಡಿದ್ದು, ಒಟ್ಟಾರೆ ಸ್ಪಾಟ್ ರಿಜಿಸ್ಟ್ರೇಷನ್ 16 ರಂದು ಮಾಡುವ ಮೂಲಕ 2500ರಷ್ಟು ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂಬ ನೀರೀಕ್ಷೆ ಇದೆ ಎಂದರು.

ನಾವು ಪ್ರತಿ ಸಲವು ಉತ್ತಮ 30 ಕಂಪನಿಗಳಿಗೆ ರಿಜಿಸ್ಟರ್ ಮಾಡಿ ಒಳ್ಳೆಯ ಉದ್ಯೋಗ ಅವಕಾಶಗಳನ್ನು ಅಭ್ಯರ್ಥಿಗಳಿಗೆ ಸೃಷ್ಟಿ ಮಾಡುತ್ತೇವೆ ಎಂದು ತಿಳಿಸಿದ ಅವರು, ಈ ಬಾರಿ 30 ಕಂಪನಿಗಳಲ್ಲಿ 1500ಕ್ಕೂ ಮಿಕ್ಕಿ ಉದ್ಯೋಗ ಅವಕಾಶಗಳಿವೆ ಆದ ಕಾರಣ ಬರಲಿರುವ ಒಳ್ಳೆಯ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವ ನೀರೀಕ್ಷೆ ಇದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 11 13 at 11.32.05 AM 1

ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಪ್ರೋಗ್ರಾಮ್ ಡೈರೆಕ್ಟರ್ ದಿವ್ಯ ರಾಣಿ ಪ್ರದೀಪ್ ಮಾತನಾಡಿ, ಉದ್ಯೋಗ ಮೇಳಕ್ಕ ಈಗಾಗಲೇ ಕಲಿತ ಮತ್ತು ಅಂತಿಮ ವರ್ಷ ದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ಇದ್ದು, ಪ್ರತಿಯೊಬ್ಬ ಅಭ್ಯರ್ಥಿಗಳಿಗೆ 5 ಕಂಪನಿಗಳಲ್ಲಿ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಪ್ರತಿಯೊಂದು ಸಂದರ್ಭದಲ್ಲಿ ಬಯೋ ಡಾಟಾ ತರಬೇಕೆಂದು ತಿಳಿಸಿದರು.

ಈ ಬಾರಿ ಸ್ಥಳೀಯ, ಕರ್ನಾಟಕ, ಬೇರೆ ರಾಜ್ಯ ಮಾತ್ರವಲ್ಲದೆ ಅಂತರಾಷ್ಟ್ರೀಯ ಕಂಪ ಗಳು ರಿಜಿಸ್ಟ್ರೇಷನ್ ಮಾಡಿವೆ. ಆದ ಕಾರಣ ಎಲ್ಲಾ ಕ್ಷೇತ್ರಗಳಲ್ಲಿ ಉದ್ಯೋಗ ಅವಕಾಶಗಳಿವೆ ಎಂದು ಮಾಹಿತಿ ನೀಡಿದರು.

ಈ ಬಾರಿಯ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಕಾರ್ಯಕ್ರಮ ನವೆಂಬರ್ ತಾ. 16ರಂದು ಶನಿವಾರ -ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳ ನಗರ, ಮಣಿಪುರ, ಉಡುಪಿ ಇವರ ಸ್ಕಿಲ್ ಡೆವಲಪ್ಟೆಂಟ್ ಸೆಂಟರ್, ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ನನ್ ಸೆಂಟರ್‌ನಲ್ಲಿ ಎಂಆರ್‌ಜಿ ಗ್ರೂಪ್‌ನ ಚೇರ್‌ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಉದ್ಘಾಟನೆ ಮಾಡಲಿದ್ದು, ಮಣಿಪಾಲ ಮಾಹೆಯ ಚಾನ್ಸೆಲ್ಲರ್ ಡಾ. ಎಚ್.ಎಸ್. ಬಲ್ಲಾಳ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಲೋಕಸಭಾ ಸದಸ್ಯರುಗಳಾದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಬ್ರಜೇಶ್ ಚೌಟ, ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ, ಯಶ್ಪಾಲ್ ಸುವರ್ಣ, ಐವನ್ ಡಿಸೋಜಾ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ರಘುಪತಿ ಭಟ್, ಮುಖಂಡರುಗಳಾದ ಮಟ್ಟಾರು ರತ್ನಾಕರ್ ಹೆಗ್ಡೆ, ಕಾಪು ವಾಸುದೇವ ಶೆಟ್ಟಿ, ಮನೋಹರ್ ಶೆಟ್ಟಿ, ಸಾಯಿ ರಾಧಾ ಗ್ರೂಪ್, ಪ್ರಸಾದ್ ರಾಜ್ ಕಾಂಚನ್, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಸಂತೋಷ್ ಶೆಟ್ಟಿ ಪೂನಾ, ಸುಗ್ಗಿ ಸುಧಾಕ‌ರ್ ಶೆಟ್ಟಿ,, ಪ್ರೊ ಶರತ್ ಆಳ್ವ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಉದ್ಯೋಗ ಮೇಳದ ಪ್ರಯೋಜನವನ್ನು ಎಲ್ಲರೂ ಪಡೆದು, ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುದೆ ನಮ್ಮ ಟ್ರಸ್ಟ್ ನ ಮತ್ತು ಎಂಆರ್‌ಜಿ ಗ್ರೂಪ್ ಉದ್ದೇಶ. ಈ ಬಾರಿ ಸುಮಾರು 1200 ರಿಂದ 1500 ಅಭ್ಯರ್ಥಿಗಳಿಗೆ ಈ ಉದ್ಯೋಗ ಮೇಳದಲ್ಲಿ ಉದ್ಯೋಗ ಸಿಗಬಹುದಂಬ ನಿರೀಕ್ಷೆ ಇಟ್ಟಿದ್ದೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಯಾವುದೇ ಜಾತಿ ಮತ ಬೇಧ ಇಲ್ಲದೆ ಎಲ್ಲ ಸಮುದಾಯದ ಯುವಕ, ಯುವತಿಯವರಿಗೆ ಅವಕಾಶ ಇದ್ದು, ಯಾವುದೇ ನೋಂದಣಿ ಶುಲ್ಕ ಇಟ್ಟಿಲ್ಲ ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...