ಉಡುಪಿ | ವಿಶೇಷ ಮಕ್ಕಳ ಜೊತೆ ಸ್ವಾತಂತ್ರ್ಯೋತ್ಸವ ಆಚರಿಸಿದ ಅಲ್ಪಸಂಖ್ಯಾತರ ವೇದಿಕೆ

Date:

ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ವತಿಯಿಂದ ಉಡುಪಿ ತಾಲೂಕಿನ ನೇಜಾರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಲ್-ಫುರ್ಖಾನ್ ವಿಶೇಷ ಮಕ್ಕಳ ಶಾಲೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಸಂಸ್ಥಾಪಕರ ದಿನಾಚರಣೆ ಮತ್ತು ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ವಿಶೇಷ ಮಕ್ಕಳು ರಾಷ್ಟ್ರ ಧ್ವಜಾರೋಹಣ ಮಾಡಿ ದೇಶಪ್ರೇಮ ಗೀತೆಗಳನ್ನು ಹಾಡಿ ಎಲ್ಲರ ಮನ ಗೆದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷರಾದ ಚಾರ್ಲ್ಸ್ ಅಂಬ್ಲರ್ ಮಾತನಾಡುತ್ತಾ, ದೇವರು ನಮ್ಮನ್ನು ಹುಟ್ಟಿಸಿದ ಹಾಗೆ ಈ ಮಕ್ಕಳನ್ನು ಸಹ ಹುಟ್ಟಿಸಿದ್ದಾನೆ. ಇವರನ್ನು ಅಂಗವಿಕಲರು ಎಂದು ಹೇಳಬಾರದು. ಇವರಲ್ಲಿಯೂ ತುಂಬಾ ಪ್ರತಿಭೆಯಿದೆ. ಇವರನ್ನು ವಿಶೇಷ ಮಕ್ಕಳು ಎಂದು ಹೇಳಬೇಕು. ಇಂತಹ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಶಾಲೆಯ ಪೋಷಕರಾದ ದಿಲ್ದಾರ್ ಫಝ್ಲುರ್ರಹ್ಮಾನ್ ಇವರು ಬಂದ ಅತಿಥಿಗಳನ್ನು ಸ್ವಾಗತಿಸಿ, ಇಂತಹ ಶಾಲೆಯ ಅಗತ್ಯತೆ ಮತ್ತು ಮಕ್ಕಳ ಪ್ರತಿಭೆ ಬಗ್ಗೆ ವಿವರಿಸಿದರು. ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಮಾಜಿ ಅಧ್ಯಕ್ಷರಾದ ಖತೀಬ್ ಅಬ್ದುಲ್ ರಶೀದ್ ಯವರು ಮಕ್ಕಳ ಉತ್ಸಾಹವನ್ನು ಹೆಚ್ಚಿಸಲು ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೂ ಉಡುಗೊರೆಗಳನ್ನು ಹಂಚಿದರು. ವಿಶೇಷ ಮಕ್ಕಳಿಗೆ ಪ್ರೋತ್ಸಾಹ ನೀಡುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯವೆಂದು ಸಂಘಟಕರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೇದಿಕೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಬೈಕಾಡಿ ಹುಸೇನ್ ಸಾಹೆಬ್, ನಿಕಟಪೂರ್ವ ಅಧ್ಯಕ್ಷರಾದ ಇಸ್ಮಾಯಿಲ್ ಹುಸೈನ್ ಕಟ್ಪಾಡಿ, ಕಾರ್ಯದರ್ಶಿ ಟಿ.ಎಂ. ಝಫ್ರುಲ್ಲಾ , ಕೋಶಾಧಿಕಾರಿ ಸಯ್ಯದ್ ಎಂ.ಎಸ್. ಖಾನ್, ಸಂಪರ್ಕ ಪತ್ರಿಕೆಯ ಸಂಪಾದಕ ಜೆರಾಲ್ಡ್ ಪಿಂಟೊ, ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಮತ್ತು ಶಾಲೆಯ ಅಧ್ಯಾಪಕರು ಹಾಗೂ ಪೋಷಕರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಯಾಗುವಂತೆ ಸಹಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...