ಉಡುಪಿ | ಮಳೆಗಾಲ: ಘಾಟಿ ರಸ್ತೆಗಳಲ್ಲಿ ನಿಮಗೆ ನೀವೇ ಜವಾಬ್ದಾರರು

Date:

ತಡವಾಗಿಯಾದರೂ ಮುಂಗಾರು ಮಳೆ ರಾಜ್ಯವನ್ನು ಪ್ರವೇಶಿಸಿದೆ. ಮಂಗಳವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅಲ್ಲಿನ ಘಾಟಿ ರಸ್ತೆಗಳಲ್ಲಿ ಸಂಚಾರ ಮಾಡುವುದು ಅಪಾಯಕಾರಿಯಾಗಿ ಪರಿಣಮಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ಕುದುರೆಮುಖ-ಮಾಳ ರಾಷ್ಟ್ರೀಯ ಹೆದ್ದಾರಿಯು ಅರಣ್ಯ ಭಾಗದಲ್ಲಿ ಹಾದುಹೋಗಿದೆ. ಹೆಚ್ಚು ತಿರುವುಗಳಿರುವ ಈ ರಸ್ತೆಯಲ್ಲಿ ಮಳೆ ಬೀಳುವ ಸಮಯದಲ್ಲಿ ವಾಹನ ಚಾಲನೆ ಮಾಡುವುದು ಸವಾಲಾಗಿದೆ. ಮರ ಬೀಳುವುದು, ಮಣ್ಣು ಕುಸಿತ, ನೀರಿನ ಹರಿವಿನಿಂದ ರಸ್ತೆಯಲ್ಲಿ ಸಂಚಾರ ಅಸಾಧ್ಯವೆಂಬಂತಾಗುತ್ತದೆ.

ಈ ರಸ್ತೆಯಲ್ಲಿ ಅಪಘಾತವೇನಾದರೂ ಸಂಭವಿಸಿದರೆ, ಹತ್ತಿರದಲ್ಲಿ ಆಸ್ಪತ್ರೆಗಳೂ ಇಲ್ಲ. ಅಪಘಾತಕ್ಕೀಡಾದವರು ಶೃಂಗೇರಿ ಅಥವಾ ಕಾರ್ಕಳಕ್ಕೆ ತೆರಳಬೇಕಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಮಾಳ-ಮುಳ್ಳೂರು ರಸ್ತೆಯಲ್ಲಿಯೂ ಅದೇ ಕತೆ. ಧರ್ಮಸ್ಥಳ, ಸುಬ್ರಹ್ಮಣ್ಯ, ಹೊರನಾಡು ಸೇರಿದಂತೆ ನಾನಾ ಧಾರ್ಮಿಕ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಸಾವಿರಾರು ಜನರು ಸಂಚರಿಸುತ್ತಾರೆ. ಮಳೆ ಸಮಯದಲ್ಲಿ ಘಾಟಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ನಿಯಂತ್ರಣ ತಪ್ಪುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಸ್ಥಳೀಯರು ಹೇಳುತ್ತಾರೆ.

ತನಿಕೋಡು ಅರಣ್ಯ ತಪಾಸಣಾ ಕೇಂದ್ರ ಮತ್ತು ಮಾಳ ಅರಣ್ಯ ತಪಾಸಣಾ ಕೇಂದ್ರದ ನಡುವೆ 39 ಕಿ.ಮೀ ಅಂತರವಿದೆ. ಈ ರಸ್ತೆಯಲ್ಲಿ ಸಂವಹನ ಮಾಡಲು ಯಾವುದೇ ಸಂಪರ್ಕ ವ್ಯವಸ್ಥೆಯಿಲ್ಲ. ಅಪಘಾತವಾದರೆ, ಗಲಾಟೆಗಳು ನಡೆದರೆ, ಅನಾಹುತಗಳು ಸಂಭವಿಸಿದರೆ ಅಥವಾ ಬೇರೇನಾದರೂ ಸಮಸ್ಯೆಗಳಾದರೆ, ಯಾವ ರೀತಿಯಲ್ಲೂ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗುವುದಿಲ್ಲವೆಂಬ ಆರೋಪಗಳೂ ಇವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...