ಉಡುಪಿ | ನಕಲಿ ದಾಖಲೆ ಸೃಷ್ಟಿಸಿ ಸಾವಿರಕ್ಕೂ ಅಧಿಕ ಮಂದಿಗೆ ₹28 ಕೋಟಿ ಮೋಸ!

Date:

ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ಪಡೆದು ಸ್ವಂತ ಬಳಕೆಗೆ ಉಪಯೋಗಿಸಿ ಲಕ್ಷಾಂತರ ರೂ. ವಂಚನೆ ಎಸಗಿರುವ ಮಲ್ಪೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್‌ ಅಧ್ಯಕ್ಷರು, ವ್ಯವಸ್ಥಾಪಕ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಹತ್ತು ಮಂದಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್‌ ಠಾಣೆಗೆ ದೂರು ನೀಡಿರುವುದಾಗಿ ಸಂತ್ರಸ್ತರಾದ ಕೊಳಲಗಿರಿ ಲಕ್ಷ್ಮೀನಗರದ ವಿಶ್ವನಾಥ ಹಾಗೂ ಸುಕೇಶ್ ತಿಳಿಸಿದ್ದಾರೆ.

ಉಡುಪಿಯ ಖಾಸಗಿ ಹೋಟೆಲ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯ ವ್ಯವಸ್ಥಾಪಕ ಸುಬ್ಬಣ್ಣ ಕೊರೋನಾ ಕಾಲದಲ್ಲಿ ಅಂದರೆ 2021ರ ಜೂನ್ ತಿಂಗಳಲ್ಲಿ ಮನೆಗೆ ಬಂದು, ಆಧಾರ್ ಹಾಗೂ ಪಾನ್ ಕಾರ್ಡ್ ಪಡೆದು, ಯಾವುದೇ ದಾಖಲೆಗಳಿಗೆ ಸಹಿ ಪಡೆಯದೆ 20,000ರೂ. ಸಾಲ ನೀಡಿದ್ದು, ತಿಂಗಳಿಗೆ 900ರೂ. ಬ್ಯಾಂಕಿಗೆ ಪಾವತಿಸುವಂತೆ ತಿಳಿಸಿದ್ದರು. ಇದೇ ಸಮಯದಲ್ಲಿ ಇವರು ದೀಪಕ್, ಮಿಥುನ್, ವಾರಿಜಾ, ರೆಹನಾ, ನಸೀಮ ಹಾಗೂ ಇತರ ಹಲವು ಮಂದಿಗೆ ಇದೇ ರೀತಿ ಸಾಲ ಕೊಟ್ಟಿದ್ದರು ಎಂದರು.

ನಂತರ ನಾವು ಸಾಲದ ಹಣವನ್ನು ತಿಂಗಳಿಗೆ ಸರಿಯಾಗಿ ಕಟ್ಟಿಕೊಂಡು ಬಂದಿದ್ದೆವು. ಬಳಿಕ ಬ್ಯಾಂಕಿನಿಂದ ನೋಟಿಸು ಬಂದಿದ್ದು, ಮಲ್ಪೆ ಬ್ಯಾಂಕಿಗೆ ಹೋಗಿ ಪರಿಶೀಲಿಸಿದಾಗ ನಮ್ಮ ಖಾತೆಯಿಂದ 2 ಲಕ್ಷ ರೂ. ಸಾಲ ಪಡೆದಿದ್ದು, ಕೂಡಲೆ ಪಾವತಿಸುವಂತೆ ಸಿಬ್ಬಂದಿ ತಿಳಿಸಿದ್ದರು. ಈ ಬಗ್ಗೆ ವ್ಯವಸ್ಥಾಪಕರು ಕೂಡ ಸರಿಯಾಗಿ ಉತ್ತರ ನೀಡಿಲ್ಲ. ಈ ಬಗ್ಗೆ ಅಧ್ಯಕ್ಷರಲ್ಲಿ ಈ ಮೋಸದ ಬಗ್ಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಕಕ 2

ಈ ಮಧ್ಯೆ ಬ್ಯಾಂಕ್ ವ್ಯವಸ್ಥಾಪಕ ಸುಬ್ಬಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದು, ನಂತರ ಬ್ಯಾಂಕ್‌ನವರು ಪದೇ ಪದೇ ನೋಟಿಸ್ ನೀಡಿ ಸಾಲ ಮರುಪಾವತಿಸುವಂತೆ ಕಿರುಕುಳ ನೀಡುತ್ತಿದ್ದರು. ನಮ್ಮಿಂದ ಆಧಾರ್ ಹಾಗೂ ಪಾನ್ ಕಾರ್ಡ್ ಪಡೆದು ಕ್ರಿಮಿನಲ್ ಸಂಚು ರೂಪಿಸಿ ನಮ್ಮ ನಕಲಿ ಸಹಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ನಮ್ಮ ಹೆಸರಿನಲ್ಲಿ ಸಾಲ ಪಡೆದು ಅದನ್ನು ಸ್ವಂತ ಬಳಕೆಗೆ ಉಪಯೋಗಿಸಿ ಮೋಸ ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಅರೆಬರೆ ರಸ್ತೆ ಕಾಮಗಾರಿ : ಗ್ರಾಮಸ್ಥರಿಂದ ಆಕ್ರೋಶ; ಅಧಿಕಾರಿಗಳಿಗೆ ಹಿಡಿಶಾಪ

ನಾವು ಪಡೆದ 20 ಸಾವಿರ ರೂ. ಸಾಲದ ಹಣವನ್ನು ಬ್ಯಾಂಕಿಗೆ ವಾಪಾಸ್ ನೀಡಲು ನಾವು ಸಿದ್ಧರಿದ್ದೇವೆ. ಈ ಪ್ರಕರಣದಿಂದ ನಮ್ಮ ಮಕ್ಕಳ ಶಿಕ್ಷಣ ಸಾಲ ಹಾಗೂ ಬ್ಯಾಂಕ್ ವ್ಯವಹಾರಗಳಲ್ಲಿ ನಮಗೆ ತುಂಬಾ ಸಮಸ್ಯೆ ಆಗುತ್ತಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಕೋಟ ಮಾತನಾಡಿ, ಈ ರೀತಿ ಸಾಲದ ಹೆಸರಿನಲ್ಲಿ 1413 ಮಂದಿಗೆ 28 ಕೋಟಿ ರೂ. ಹಣವನ್ನು ಮೋಸ ಮಾಡಲಾಗಿದೆ. ಈ ಮೋಸದ ಜಾಲದಲ್ಲಿರುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಬೇಕು. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ವ್ಯವಸ್ಥಾಪಕರ ಆತ್ಮಹತ್ಯೆಗೆ ಕಾರಣರಾದವರನ್ನು ಉನ್ನತ ಮಟ್ಟದ ತನಿಖೆ ನಡೆಸಿ ಮೋಸ ಹೋದವರಿಗೆ ಹಾಗೂ ಮೃತ ವ್ಯವಸ್ಥಾಪಕರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...