ಉಡುಪಿ ಕೊಲೆ ಪ್ರಕರಣ | ಆರೋಪಿ ಪ್ರವೀಣ್‌ಗೆ ಜೈಲಲ್ಲಿ ಪ್ರತ್ಯೇಕ ಸೆಲ್: ಎಸ್‌ಪಿ ಅರುಣ್

Date:

ಕಳೆದ ನ.12ರಂದು ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ, ‘ಗಂಭೀರ ಪ್ರಕರಣವಾಗಿರುವುದರಿಂದ ಆರೋಪಿಗೆ ಪ್ರತ್ಯೇಕ ಸೆಲ್ ಜೊತೆ ಬಿಗಿ ಬಂದೋಬಸ್ತ್ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ.

ಉಡುಪಿಯ ತಮ್ಮ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೇಜಾರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ. ಆತನನ್ನು ಹಿರಿಯಡ್ಕ ಜೈಲಿನಲ್ಲಿಡಲಾಗಿದ್ದು ಪ್ರತ್ಯೇಕ ಸೆಲ್ ಜೊತೆಗೆ ಬಿಗಿ ಬಂದೋಬಸ್ತ್ ಮಾಡುತ್ತೇವೆ. ಇತರ ಕೈದಿಗಳೊಂದಿಗೆ ಇಟ್ಟರೆ ದಾಳಿಯ ಸಾಧ್ಯತೆ ಇದ್ದ ಕಾರಣ ಭದ್ರತೆಯೊಂದಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದರು.

Praveen Kumar Chougale
ಬಂಧಿತ ಆರೋಪಿ ಪ್ರವೀಣ್‌ ಅರುಣ್ ಚೌಗುಲೆ(39)

ಈ ಬಗ್ಗೆ ಬಂದೀಖಾನೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಗಂಭೀರ ಪ್ರಕರಣವಾಗಿರುವುದರಿಂದ ಪ್ರತ್ಯೇಕ ಸೆಲ್ ಜೊತೆಗೆ ಸಿಸಿಟಿವಿ ಕೂಡ ಅಳವಡಿಸುವ ಬಗ್ಗೆಯೂ ಮಾಹಿತಿ ನೀಡಿದ್ದೇವೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹರಿಯಾಣ | 142 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಪ್ರಾಂಶುಪಾಲನ ಬಂಧನ

ಕೊಲೆಗೈಯ್ಯಲ್ಪಟ್ಟ ನಾಲ್ವರ ಪೈಕಿ ಐನಾಝ್ ಹಾಗೂ ಆರೋಪಿ ಪ್ರವೀಣ್ ಚೌಗುಲೆ ಒಂದೇ ಕಡೆ ಕೆಲಸ ಮಾಡ್ತಾ ಇದ್ದಿದ್ದರಿಂದ ಇಬ್ಬರೂ ಸ್ನೇಹಿತರಾಗಿದ್ದರು. ಕಳೆದ ಒಂದು ತಿಂಗಳಿನಿಂದ ಐನಾಝ್ ಆತನ ಜೊತೆ ಮಾತನಾಡುತ್ತಿರಲಿಲ್ಲ. ಐನಾಝ್ ತನ್ನ ನಿಯಂತ್ರಣದಲ್ಲಿರಬೇಕೆಂಬ ಪ್ರವೀಣ್ ಮನೋಭಾವವೇ ಈ ಕೊಲೆಗೆ ಕಾರಣ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕೊಲೆ ಕೃತ್ಯ ನಡೆಸಿದ ಬಳಿಕ ಆಶ್ರಯ ಕೊಟ್ಟವರಿಗೆ ಕೊಲೆ ನಡೆಸಿದ ಬಗ್ಗೆ ಮಾಹಿತಿ ಇರಲಿಲ್ಲ. ಅವರು ಆರೋಪಿ ಪ್ರವೀಣ್ ಪತ್ನಿಯ ಸಂಬಂಧಿಕರಾಗಿದ್ದರು. ಸದ್ಯ ಎಲ್ಲ ತನಿಖೆ ಮುಕ್ತಾಯಗೊಳಿಸಿದ್ದೇವೆ. ವಾರದೊಳಗೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಿದ್ದೇವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ತಿಳಿಸಿದ್ದಾರೆ.

ಕಳೆದ ನ.12ರಂದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್‌ ಅರುಣ್ ಚೌಗುಲೆ(39)ಗೆ ನ್ಯಾಯಾಲಯವು 14 ದಿನಗಳ ಕಾಲ(ಡಿ.5ರವರೆಗೆ) ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದ್ದು, ಕೈದಿ ಸಂಖ್ಯೆ 8936 ಅನ್ನು ಪ್ರವೀಣ್ ಚೌಗಲೆಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...