ಉಡುಪಿ ಕೊಲೆ ಪ್ರಕರಣ | ಆರೋಪಿ ಪ್ರವೀಣ್ ಕೃತ್ಯಕ್ಕೆ ಬಳಸಿದ್ದ ಚೂರಿ ಪತ್ತೆ ಹಚ್ಚಿದ ಪೊಲೀಸರು

Date:

ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿದ್ದ ಉಡುಪಿಯ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಮುನ್ನಡೆ ದೊರಕಿದೆ.

ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು ವಶಪಡಿಸಿಕೊಳ್ಳುವಲ್ಲಿ ಉಡುಪಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ನ.15ರಂದು ಬೆಳಗಾವಿಯ ಕುಡಚಿಯಲ್ಲಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬಂಧಿಸಿ, ನ.16ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ನ.28ರವರೆಗೆ ಅಂದರೆ 14 ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಿತ್ತು. ಹೀಗಾಗಿ, ಪ್ರಕರಣದ ಬಗ್ಗೆ ಆರೋಪಿಯ ಅಪರಾಧವನ್ನು ಸಾಬೀತುಪಡಿಸಲು ತನಿಖಾಧಿಕಾರಿಗಳ ತಂಡ ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದೆ. ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಉಡುಪಿ ಪೊಲೀಸರು, ಕೃತ್ಯಕ್ಕೆ ಬಳಸಿದ ಆಯುಧಕ್ಕಾಗಿ ಶೋಧ ಕಾರ್ಯ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

udupi sp arun

 

ವಿಚಾರಣೆಯ ವೇಳೆ ಪ್ರವೀಣ್ ಸಮರ್ಪಕ ಮಾಹಿತಿ ನೀಡದೆ, ಪೊಲೀಸರನ್ನೇ ಸತಾಯಿಸುತ್ತಿದ್ದ. ಈ ಮೊದಲು ಕೃತ್ಯಕ್ಕೆ ಎಸಗಿ ಉಡುಪಿಯಿಂದ ಮಂಗಳೂರಿಗೆ ಹೋಗುವಾಗ ದಾರಿ ಮಧ್ಯೆ ಸೇತುವೆಯಿಂದ ನದಿಗೆ ಚೂರಿಯನ್ನು ಎಸೆದಿದ್ದೆ ಎಂದು ಹೇಳಿದ್ದ. ಆ ಬಳಿಕ ಅದನ್ನು ತನ್ನ ಮಂಗಳೂರಿನ ಮನೆಯ ಬಳಿ ವಿಲೇವಾರಿ ಮಾಡಿದ್ದೆ ಎಂದೆಲ್ಲ ಸಬೂಬು ಹೇಳಿ, ದಾರಿ ತಪ್ಪಿಸಲು ಯತ್ನಿಸಿದ್ದನು.

Praveen Arun chougale case udupi
ಬಂಧಿತ ಆರೋಪಿ ಪ್ರವೀಣ್ ಚೌಗಲೆ(39)

ಈಗ ಕೊನೆಗೂ ಪೊಲೀಸರು ಯಶಸ್ವಿಯಾಗಿರುವ ಪೊಲೀಸರು, ಮಂಗಳೂರಿನಲ್ಲಿರುವ ಮನೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಆಯುಧಕ್ಕಾಗಿ ತೀವ್ರ ಶೋಧ ನಡೆಸಿದಾಗ, ಆತನ ಬಿಜೈ ಎಂಬ ಪ್ರದೇಶದಲ್ಲಿರುವ ಫ್ಲ್ಯಾಟ್‌ನಲ್ಲಿ ಕೃತ್ಯಕ್ಕೆ ಬಳಸಿದ್ದ ಚೂರಿ ಪತ್ತೆಯಾಗಿದೆ. ಅದಲ್ಲದೆ ಕೃತ್ಯದ ವೇಳೆ ಗುರುತು ಸಿಗದಂತೆ ಬಳಸಿದ್ದ ಬಿಳಿ ಬಣ್ಣದ ಮಾಸ್ಕ್, ರಕ್ತಸಿಕ್ಕ ಬಟ್ಟೆ, ಕೃತ್ಯಕ್ಕೆ ಬಳಸಿದ ಕಾರು ಸೇರಿದಂತೆ ಎಲ್ಲ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಮುನ್ನಡೆ ದೊರಕಿದಂತಾಗಿದೆ.

Udupi Murder Case
ಕೊಲೆಗೀಡಾದ ತಾಯಿ ಮತ್ತು ಮೂವರು ಮಕ್ಕಳು

‘ಕಳೆದ ನ.12ರಂದು ನಡೆದ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಯಿಂದ ಕೃತ್ಯಕ್ಕೆ ಬಳಸಿದ್ದ ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ ಪ್ರಕರಣ | ’15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ’ ಎಂದು ವಿಕೃತಿ ಮೆರೆದವನ ಮೇಲೆ ಎಫ್‌ಐಆರ್

‘ಪ್ರಕರಣದ ತನಿಖೆ ಮುಂದುವರೆದಿದೆ. ಶುಕ್ರವಾರ ಮತ್ತು ಶನಿವಾರ ಆತನ ಮನೆಯಿಂದ ಕೃತ್ಯಕ್ಕೆ ಬಳಸಿದ ಚೂರಿ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಮಾಹಿತಿಯನ್ನು ತನಿಖೆ ಸಂಪೂರ್ಣಗೊಂಡ ಬಳಿಕ ನೀಡಲಾಗುವುದು’ ಎಂದು ಉಡುಪಿ ಎಸ್‌ಪಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...