ಉಡುಪಿ | ಸ್ಥಳ ಪರಿಶೀಲನೆ ಮಾಡದೆ ಸಾಲ ನೀಡಿದ್ದ ಬ್ಯಾಂಕ್? ಎರಡು ಕುಟುಂಬಗಳು ಬೀದಿಪಾಲು !

Date:

ಉಡುಪಿ ಜಿಲ್ಲೆಯ ಕೋಟ ಸಮೀಪದ ಕೋಟತಟ್ಟು ಗ್ರಾಮದ ಬಾರಿಕೆರೆಯ ಮನೆಯೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಮನೆಯನ್ನು ಸೊಸೈಟಿಯವರು ಹರಾಜು ಹಾಕಿದ್ದಾಗಿ ಮನೆಯವರು ಆರೋಪಿಸಿದ್ದಾರೆ.

ಬಾರಿಕೆರೆಯ ನಾಗೇಂದ್ರ ಪುತ್ರನ್, ತಂದೆ ಕೃಷ್ಣ ಬಂಗೇರ ಮತ್ತು ತಾಯಿ ಜಲಜಾ ಮರಕಾಲ್ತಿ ಅವರ ಕುಟುಂಬಕ್ಕೆ ಸೇರಿದ ಮನೆ ಇದಾಗಿದೆ. ಮನೆಯ ಜೊತೆಗೆ ಸುಮಾರು 45 ಸೆಂಟ್ಸ್ ನಷ್ಟು ಜಾಗೆ ಇಲ್ಲಿತ್ತು. ಜು.14 ರಂದು ಸೋಮವಾರ ಬೆಳಿಗ್ಗೆ ಕುಟುಂಬದ ಮನೆಯಲ್ಲಿ ತುಳಸಿ ಪೂಜೆ ಮತ್ತು ಭಜನಾ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ವೇಳೆ ಸ್ಥಳೀಯ ಸೊಸೈಟಿಯವರು ನಮಗೆ ನೋಟೀಸನ್ನೂ ನೀಡದೆ ಏಕಾಏಕಿ ಹರಾಜು ಹಾಕಿದ್ದಾರೆ ಎಂದು ಕೃಷ್ಣ ಬಂಗೇರ ಪುತ್ರ ನಾಗೇಂದ್ರ ಪುತ್ರನ್ ಆರೋಪ ಮಾಡಿದ್ದಾರೆ.

ಈ ಬಗ್ಗೆ ಈದಿನ.ಕಾಮ್‌ ಜೊತೆ ಮಾತನಾಡಿದ ನಾಗೇಂದ್ರ ಪುತ್ರನ್‌, ಈ‌ ಮನೆಯು ಪಿತ್ರಾರ್ಜಿತ ಆಸ್ತಿಯಾಗಿದ್ದು ಕುಟುಂಬದ ವ್ಯಕ್ತಿಯೋರ್ವ ಹಲವು ವರ್ಷಗಳ ಹಿಂದೆ ಸೊಸೈಟಿಯಿಂದ ಸಾಲ ಪಡೆಯುವಾಗ ಅವನ ಮನೆ ನಂಬರ್ ನ್ನು ನೀಡಿ ಪಿತ್ರಾರ್ಜಿತ ಆಸ್ತಿ ಪತ್ರವನ್ನು ಅಡವಿಟ್ಟು ಸೊಸೈಟಿಯಿಂದ ಸಾಲ ಪಡೆದಿದ್ದಾನೆ. ಆದರೆ ಸಾಲ ನೀಡುವಾಗ ಸೊಸೈಟಿಯವರು ಸ್ಥಳ ಪರಿಶೀಲನೆ ಮಾಡದೆ ಸಾಲ ನೀಡಿದ್ದಾರೆ. ಇದರಿಂದಾಗಿ ಎರಡು ಕುಟುಂಬಗಳು ಬೀದಿಪಾಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜುಲೈ 12ರ ಶನಿವಾರದಂದು ಹರಾಜು ಪ್ರಕ್ರಿಯೆ ಇತ್ತು. ಆದರೆ ಅಂದು ಮಾಡಿರಲಿಲ್ಲ. ಇಂದು ಸೋಮವಾರ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇದ್ದಾಗ ಏಕಾಏಕಿ ಬ್ಯಾಂಕ್ ನವರು ನೊಟೀಸನ್ನೂ ನೀಡದೆ ಬಂದು ಹರಾಜು ಹಾಕಿದ್ದಾರೆ. ನ್ಯಾಯಾಲಯದ ಮೇಲೆ ನಮಗೆ ಗೌರವ ಇದೆ. ಆದರೆ ಬ್ಯಾಂಕ್ ನವರ ಕ್ರಮದ ಬಗ್ಗೆ ನಾವು ಕಾನೂನು ಹೋರಾಟ ನಡೆಸುತ್ತೇವೆ. ಇದರ ಹಿಂದೆ ರಾಜಕೀಯ ಮುಖಂಡರ ಹಿತಾಸಕ್ತಿಗಳಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

1006210917

ಈ ದಿನ.ಕಾಮ್‌ ಜೊತೆ ಮಾತನಾಡಿದ ಕೃಷ್ಣ ಬಂಗೇರ, ನಾವು ಬಹಳಷ್ಟು ವರ್ಷಗಳಿಂದ ಇಲ್ಲಿ ವಾಸ ಮಾಡುತ್ತಿದ್ದೇವೆ. ಇವತ್ತು ಈ ರೀತಿ ನಮಗೆ ಸಮಸ್ಯೆಯಾಗಿದೆ .ನಾವಿನ್ನು ಎಲ್ಲಿಗೆ ಹೋಗುವುದು? ನಮಗೆ ಬೇರೆ ಜಾಗ ಇಲ್ಲ. ನಮಗೆ ಅನ್ಯಾಯ ಆಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಒಟ್ಟಿನಲ್ಲಿ ಯಾರೋ ಮಾಡಿದ ತಪ್ಪಿಗೆ ಇನ್ಯಾರಿಗೋ ಶಿಕ್ಷಿ ಅನುಭವಿಸುವ ಪರಿಸ್ಥತಿ ಎದುರಾಗಿದೆ. ಹಲವಾರು ವರ್ಷಗಳಿದಂದ ಹಲವು ಕನಸುಗಳನ್ನು ಹೊತ್ತು ಜೀವನ ಸಾಗಿಸುತ್ತಿದ್ದ ಕುಟುಂಬ ಬೀದಿಪಾಲಾಗುತ್ತಿದೆ. ಇಷ್ಟು ದಿನಗಳಿಲ್ಲದ ಸಮಸ್ಯೆ ಒಮ್ಮೆಲೆ ಬಂದಿದೆ ಎಂದರೆ ಇದರ ಹಿಂದೆ ರಾಜಕೀಯ ಪ್ರೇರಿತ ಶಕ್ತಿಗಳು ಸಹ ಒತ್ತಡಗಳನ್ನು ಹೇರಿದ್ದಾರೆ ಎಂದು ನಾಗೇಂದ್ರ ಪುತ್ರನ್‌ ರವರು ಹೇಳಿದ್ದಾರೆ.

1006210918 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...