ಉಡುಪಿ | ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆ, ನಗರದಾದ್ಯಂತ ಕಟ್ಟು ನಿಟ್ಟಿನ ಭದ್ರತಾ ಕ್ರಮ

Date:

ನವೆಂಬರ್‌ 28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನಲೆಯಲ್ಲಿ ನಗರದಾದ್ಯಂತ ಅಪಾರ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದಿ ಉಡುಪಿಯ ಹೆಲಿಪ್ಯಾಡ್‌ನಿಂದ ಲ್ಯಾಂಡ್‌ ಆದ ನಂತರ ಬನ್ನಂಜೆ ಸರ್ಕಲ್‌ನಿಂದ ಕಲ್ಸಂಗ ಸರ್ಕಲ್‌ ವರೆಗೆ ರೋಡ್‌ ಶೋ ಆಯೋಜನೆಯಾಗಿದ್ದು, ನಂತರ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಹಾಗೂ ಗೀತಾ ಮಂದಿರದಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ. ಇದರ ಬಳಿಕ ಮಠದ ಎದುರಿನ ಪಾರ್ಕಿಂಗ್‌ ಪ್ರದೇಶದಲ್ಲಿ ಪ್ರಧಾನಿಯವರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿಯ ಭೇಟಿ ಹಿನ್ನೆಲೆಯಲ್ಲಿ ಸುಮಾರು 3000ಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿ–ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇವರಲ್ಲಿ 10 ಮಂದಿ ಪೊಲೀಸ್‌ ಆಯುಕ್ತರು ಸೇರಿದಂತೆ ಎಂಟಕ್ಕೂ ಹೆಚ್ಚು ಜಿಲ್ಲೆಗಳಿಂದ ಪೊಲೀಸ್‌ ಸಿಬ್ಬಂದಿಗಳನ್ನು ಕರೆಸಲಾಗಿದೆ.

ಭದ್ರತಾ ವ್ಯವಸ್ಥೆಗೆ ಎಸ್‌ಪಿಜಿ ತಂಡ ನೇತೃತ್ವವಹಿಸಿದ್ದು, ತಂಡ ಈಗಾಗಲೇ ಉಡುಪಿಗೆ ಆಗಮಿಸಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್‌ ಸಿಬ್ಬಂದಿಯೂ ಅವರೊಂದಿಗೆ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟು ಬಂದೋಬಸ್ತ್‌ ವ್ಯವಸ್ಥೆಯನ್ನು ಎಡಿಜಿಪಿ ಜಿತೇಂಧ್ರ ಕುಮಾರ್‌ ಅವರ ಮೇಲ್ವಿಚಾರಣೆಯಲ್ಲಿ, ಐಜಿ ಸಂದೀಪ್‌ ಪಟೀಲ್‌ ಮತ್ತು ಐಜಿ ಚಂದ್ರಗುಪ್ತ ಅವರ ನೇತೃತ್ವದಲ್ಲಿ ಜಾರಿಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...