ಉಡುಪಿ | ಮಾಡಿದ ಆರೋಪಕ್ಕೆ ನಾವು ಬದ್ದ ನೀವು ಸವಾಲನ್ನು ಸ್ವೀಕರಿಸುವಿರೇ?

Date:

ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ 2023 ರ ವಿಧಾನ ಸಭಾ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ನಡೆದ ಒಂದು ವ್ಯವಸ್ಥಿತವಾದ ಪೂರ್ವಯೋಜಿತವಾದ ವಂಚನೆ, ಪರಶುರಾಮ ಕಂಚಿನ ಪ್ರತಿಮೆ ನಿರ್ಮಾಣ ಮಾಡಿದ್ದೇನೆಂದು ಕಳೆದ ಎರಡು ವರ್ಷಗಳಿಂದ ನಿರಂತರ ಸುಳ್ಳು ಹೇಳಿ ಜನತೆಗೆ ಎಸಗಿದ ಧಾರ್ಮಿಕ ನಂಬಿಕೆ ದ್ರೋಹ ಮತ್ತು ಎಲ್ಲಕ್ಕಿಂತಲೂ ಮಿಗಿಲಾಗಿ ರಾಜ್ಯದ ಅಂದಿನ ಮುಖ್ಯಮಂತ್ರಿಯಾಗಿದ್ದ ಬೊಮ್ಮಯಿಯವರನ್ನು ಮತ್ತು ತನ್ನ ಸಚಿವ ಸಂಪುಟದ ಸಚಿವರನ್ನು ಕರೆಸಿ ಅವರಿಂದ ನಕಲಿ ಪ್ರತಿಮೆಯನ್ನು ಉದ್ಘಾಟಿಸಿ ತನ್ನದೇ ಸರಕಾರಕ್ಕೆ ದ್ರೋಹ ಎಸಗಿದ ರಾಜದ್ರೋಹ” ಪ್ರಕರಣವೂ ಆಗಿದೆ. ಆದ್ದರಿಂದ ಶಾಸಕರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಶುಭದ ರಾವ್ ಹೇಳಿದರು.

ಅವರು ಇಂದು ಉಡುಪಿಯ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸಿಗರು ಪೈಬ‌ರ್ ಪ್ರತಿಮೆ ಎಂದು ನಮ್ಮ ಮೇಲೆ ಮಾಡಿರುವ ಆರೋಪದಲ್ಲಿ ಹುರುಳಿಲ್ಲ, ಕಾಂಗ್ರೆಸ್‌ ಆರೋಪ ನಿರಾಧಾರ, ನಾವು ಇದರಲ್ಲಿ ಗೆದ್ದಿದ್ದೇವೆ ಎನ್ನುವ ಮೂರ್ಖತನದ ಮಾತುಗಳನ್ನು ಅವರು ಈಗ ಹೇಳಿಕೊಳ್ಳುತ್ತಿದ್ದಾರೆ. ಆದರೆ ವಾಸ್ತವ ಏನೆಂದರೆ ಇಲ್ಲಿ ಮುಖ್ಯವಾದ ಆರೋಪ ಮತ್ತು ದೂರು ದಾಖಲಾಗಿರುವುದು ಪ್ರತಿಮೆಯನ್ನು ಕಂಚಿನಿಂದ ಮಾಡಿದ್ದಾರೆಯೇ ಅಥವಾ ಇಲ್ಲವೇ ಎನ್ನುವ ಬಗ್ಗೆಯಲ್ಲವೇ?

ಮಾಡಿದ ಆರೋಪಕ್ಕೆ ನಾವು ಬದ್ದ ನೀವು ಸವಾಲನ್ನು ಸ್ವೀಕರಿಸುವಿರೇ? ಉಮಿಕಲ್ ಬೆಟ್ಟದ ಮೇಲೆ ನಾವು ಭೇಟಿ ನೀಡಿದಾಗ ಪ್ರತಿಮೆಯ ಸೊಂಟದ ಕೆಳಗಿನ ಭಾಗದ ಸುತ್ತಲೂ ಗ್ಲಾಸ್ ಪೈಬ‌ರ್ ಲೇಪಿತ ಅಂಶಗಳು ಕಂಡುಬಂದಿತ್ತು ಮತ್ತು ಸುತ್ತಲೂ ಅದರ ತುಂಡುಗಳು ಬಿದ್ದುಕೊಂಡಿದ್ದವು. ಆ ಕಾರಣಕ್ಕಾಗಿ ನಾವು ಈ ಪ್ರತಿಮೆಯನ್ನು ಪೈಬರನ್ನೂ ಬಳಸಿ ಮಾಡಿರಬಹುದು ಎಂದು ಆರೋಪವನ್ನು ಮಾಡಿದೆವು. ಮತ್ತು ನಾವು ಅಂದು ಮಾಡಿದ ಆರೋಪಕ್ಕೆ ಈಗಲೂ ಬದ್ಧರಾಗಿದ್ದೇವೆ. ಬೆಟ್ಟದ ಮೇಲೆ ಅರ್ಧ ಭಾಗ ಪೈಬರ್ ನಿಂದಲೇ ಲೇಪಿತವಾಗಿದೆ. ಅದನ್ನು ಯಾರು ಬೇಕಿದ್ದರೂ ಹೋಗಿ ಪರೀಕ್ಷೆ ಮಾಡಬಹುದು. ಆದರೆ ಪ್ರತಿಮೆಯಲ್ಲಿ ಕಂಚನ್ನು ತೋರಿಸಲು ನಿಮ್ಮಿಂದ ಸಾಧ್ಯವೇ ಎನ್ನುವ ಸವಾಲು ಹಾಕುತ್ತೇವೆ. ಪರಶುರಾಮನ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗಿಲ್ಲ ಎನ್ನುವ ನಮ್ಮ ಆರೋಪ ಇಂದು ಸತ್ಯವಾಗಿದೆ, ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡೆರಡು ಪ್ರತಿಮೆಯ ಉದ್ದೇಶ ಏನು? ಪ್ರತಿಮೆಯ ಶಿಲ್ಪಿಯ ಬೆಂಗಳೂರಿನ ಗೋಡಾನಿನಿಂದ ಪೋಲಿಸರು ವಶಕ್ಕೆ ಪಡೆದ ಪ್ರತಿಮೆಯ ಭಾಗ ಹಿತ್ತಾಳ ಆಗಿದೆಯೆಂದು FSIL ತನಿಖೆಯಿಂದ ಸಾಬೀತಾಗಿದೆ ಅದರಲ್ಲಿ ಪ್ರತಿಮೆಯ ಮುಖ, ಎದೆ, ಎರಡು ಕಾಲುಗಳು ಮತ್ತು ಪಾದ ಭಾಗಗಳು ಬೇರೆ ಬೇರೆಯಾಗಿಯೇ ಇವೆ.ಹಾಗಾದರೆ ಬೆಟ್ಟದ ಮೇಲಿರುವ ಭಾಗ ಯಾವುದು? ಬೆಟ್ಟದ ಮೇಲೆಯೂ ಪ್ರತಿಮೆಯ ಸೊಂಟದ ಕೆಳಗಿನ ಎಲ್ಲಾ ಭಾಗಗಳು ಇದ್ದು ಎರಡು ಪ್ರತಿಮೆ ನಿರ್ಮಾಣ ಯಾಕಾಗಿ ಮಾಡಲಾಯಿತು ಎನ್ನುವ ಇಂದಿನ ಪ್ರಶ್ನೆಗೆ ಶಾಸಕರು ಉತ್ತರಿಸಬೇಕಾಗುತ್ತದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...