ಉಡುಪಿ | ಬಾಕಿ ತುಟ್ಟಿಭತ್ಯೆ ನೀಡಲು ಒತ್ತಾಯಿಸಿ ಬೀಡಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ

Date:

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 6 ಲಕ್ಷಕ್ಕೂ ಅಧಿಕ ಬೀಡಿ ಕಾರ್ಮಿಕರು ಜೀವನ ನಡೆಸುತ್ತಿದ್ದಾರೆ. ಆದರೆ ತಾವು ಎದುರಿಸುತ್ತಿರುವ ನೈಜ ಸಮಸ್ಯೆಗಳಿಗೆ ಶಾಸಕರು ಹಾಗೂ ಸಂಸದರು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಬೀಡಿ ಕಾರ್ಮಿಕರ ಸಂಘವು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್, “ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ 6 ಲಕ್ಷಕ್ಕೂ ಮಿಕ್ಕಿ ಬೀಡಿ ಕಾರ್ಮಿಕರು ಇವತ್ತು ಬೀಡಿ ಕಟ್ಟಿ ತಮ್ಮ ಜೀವನ ನಡೆಸುತ್ತಿದ್ದಾರೆ. ಇವತ್ತಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಧಾರದಲ್ಲಿ ಸರಕಾರವು ಪ್ರತಿವರ್ಷ ಬೀಡಿ ಕಾರ್ಮಿಕರ ತುಟ್ಟಿಭತ್ಯೆ ಹೆಚ್ಚಳ ಮಾಡಿ ಕಾರ್ಮಿಕರು ಬದುಕಲು ಸಹಾಯವಾಗಲು ಏರಿಳಿತ ತುಟ್ಟಿಭತ್ಯೆ ಎಂಬುವುದು ಕಾನೂನು ಬದ್ಧ ಸವಲತ್ತು. ಆ ಪ್ರಕಾರ 2024 ಎಪ್ರಿಲ್ ತಿಂಗಳಿಂದ ಔದ್ಯಮಿಕ ಕಾರ್ಮಿಕರ ಗ್ರಾಹಕ ಬೆಲೆ ಸೂಚ್ಯಂಕ 568 ಪಾಯಿಂಟ್ ಆಗಿರುತ್ತದೆ. ಅದರಂತೆ 1000 ಬೀಡಿಗೆ ರೂ 22.72 ರಂತೆ ಬೀಡಿ ಕಾರ್ಮಿಕರಿಗೆ ನೀಡಬೇಕು” ಎಂದು ಒತ್ತಾಯಿಸಿದರು.

“ಬೀಡಿ ಕಂಪನಿಯ ಮಾಲೀಕರು ತುಟ್ಟಿಭತ್ಯೆ ನೀಡದೆ ಕಾರ್ಮಿಕರಿಗೆ ವಂಚನೆ ಮಾಡಿದ್ದಾರೆ. ಮಂಗಳೂರು ಸಹಾಯಕ ಕಾರ್ಮಿಕ ಅಧಿಕಾರಿಯವರು ಎರಡು ಬಾರಿ ಕಂಪನಿಯ ಮಾಲೀಕರನ್ನು ಮಾತುಕತೆ ಕರೆದರೂ ತಪ್ಪಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ಅಧಿಕಾರಿಯವರ ಮಾತಿಗೂ ಕಿಂಚಿತ್ತೂ ಬೆಲೆ ಕೊಡದೆ ಸತಾಯಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀಡಿ

“ಭಾರತ್ ಬೀಡಿ, ಗಣೇಶ್ ಬೀಡಿ, ಟೆಲಿಫೋನ್ ಬೀಡಿ, ಇನ್ನೂ ಅನೇಕ ದೊಡ್ಡ ಕಂಪನಿಯ ಮಾಲೀಕರ ಪರವಾಗಿ ಇವತ್ತು ನಮ್ಮ ಶಾಸಕರು, ಸಂಸದರು ನಿಂತಿರುವ ಹಾಗೆ ಕಾಣುತ್ತದೆ. ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯ 13 ಜನ ಶಾಸಕರು, 2 ಜನ ಸಂಸದರು 6 ಲಕ್ಷಕ್ಕೂ ಮಿಕ್ಕಿ ಇರುವ ಬಡ ಬೀಡಿ ಕಾರ್ಮಿಕರ ಬಗ್ಗೆ ವಿಧಾನಸಭೆಯಲ್ಲಿ ಅಥವಾ ಲೋಕಸಭೆಯಲ್ಲಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ಚುನಾವಣೆ ಬರುವಾಗ ಲಕ್ಷಾಂತರ ಬೀಡಿ ಕಾರ್ಮಿಕರ ಕುಟುಂಬದ ಮತಗಳು ಬೇಕು” ಎಂದು ಆಕ್ರೋಶ ಹೊರಹಾಕಿದರು.

“ಚುನಾವಣಾ ಸಮಯದಲ್ಲಿ ಬೀಡಿ ಮಾಲಕರು ಬೇರೆ ಬೇರೆ ಪಕ್ಷಕ್ಕೆ ಹಣವನ್ನು ನೀಡುತ್ತಾರೆ ಆದರೆ ಕಾರ್ಮಿಕರು ಕಷ್ಟಪಟ್ಟು ದುಡಿದ ಹಣವನ್ನು ನೀಡಲು ಹಿಂದೇಟು ಹಾಕುವ ಮಾಲಕರ ವಿರುದ್ಧ ಸರಕಾರವು ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇತ್ತೀಚೆಗೆ ಹಲವು ಬಾರಿ ಮಂಗಳೂರು ಕಂಪನಿಯ ಪ್ರಧಾನ ಕಛೇರಿ ಮುಂದೆ ,ಹಾಗೂ ಮಂಗಳೂರು ಸಹಾಯಕ ಅಧಿಕಾರಿ ಕಛೇರಿ ಮಂದೆ ಪ್ರತಿಭಟನೆ ನಡೆಸಿದ ನಂತರ 11.40 ಪೈಸೆ ಮಾಲಕರು ಕಾರ್ಮಿಕರಿಗೆ ನೀಡಿರುತ್ತಾರೆ. ಆದರೆ, ಇದನ್ನು ಒಪ್ಪಲು ಸಾಧ್ಯವಿಲ್ಲ. ಕಾರ್ಮಿಕರಿಗೆ ಕಾನೂನು ಬದ್ಧವಾಗಿ ಸಿಗುವ 22.72 ಪೈಸೆ ಕೊಡಬೇಕು. ಹಿಂದಿನ 3 ವರ್ಷದ ಬಾಕಿ ಇರುವ ತುಟ್ಟಿಭತ್ಯೆ 12.75 ಪೈಸೆ, ಕನಿಷ್ಠ ವೇತನ ಕೂಡಲೇ ಕಾರ್ಮಿಕರಿಗೆ ನೀಡಬೇಕು” ಎಂದು ಒತ್ತಾಯಿಸಿದರು.

ಕಾರ್ಕಳ ಕಾರ್ಮಿಕ ಅಧಿಕಾರಿ ಮುಖಾಂತರ ಮಂಗಳೂರು ಸಹಾಯಕ ಕಾರ್ಮಿಕ ಅಧಿಕಾರಿಯ ಕಚೇರಿಯವರೆಗೆ ಮೆರವಣಿಗೆ ಮೂಲಕ ಮನವಿ ನೀಡಲಾಯಿತು. ಮುಂದಿನ ದಿನಗಳಲ್ಲಿ ಕಾರ್ಮಿಕ ಸಮಸ್ಯೆಗಳನ್ನು ಬಗೆಹರಿಸದೆ ಇದ್ದರೆ ಜನಪ್ರತಿನಿಧಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಬೀಡಿ ಕಾರ್ಮಿಕರ ಸಂಘದ ಮುಖಂಡರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷರಾದ ಸುನೀತಾ ಶೆಟ್ಟಿ, ಕೋಶಾಧಿಕಾರಿ ಸುಮತಿ, ಕುಂದಾಪುರ ಬೀಡಿ ಕೆಲಸಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಬಲ್ಕೀಸ್, ಉಡುಪಿ ಬೀಡಿ ಮತ್ತು ಟೋಬ್ಯಾಕೊ ಲೇಬರ್ ಯೂನಿಯನ್‌ನ ಉನಳಿನಿ. ಎಸ್ , ಸಿಐಟಿಯು ಕಾರ್ಕಳ ತಾಲೂಕು ಮುಖಂಡರಾದ ನಾಗೇಶ್, ಸಿಐಟಿಯು ಉಡುಪಿ ಮುಖಂಡರಾದ ಮೋಹನ್, ರೀತೇಶ್, ಕಾರ್ಕಳ ಬೀಡಿ ಕಂಟ್ರಾಕ್ಟರ್ ಮುಸ್ತಾಫ ಹಾಗೂ ಬೀಡಿ ಮುಖಂಡರಾದ ವಿಲಾಸಿನಿ, ಶಕುಂತಲಾ, ಸುಮಿತ್ರಾ, ಜಯಂತಿ, ಲಕ್ಷೀ, ಜಾನವಿ, ವಸಂತಿ ಶೆಟ್ಟಿ, ಲತಾ,ಮಾಲತಿ, ಜಯಂತಿ, ವನಿತ, ಕವಿತ, ಪ್ರಮೀಳಾ, ಉಷಾ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...