ಉಡುಪಿ | ಸುಮನಸಾ ಕೊಡವೂರು ರಂಗಹಬ್ಬ ಉದ್ಘಾಟಿಸಿದ ಅರವಿಂದ ಮಾಲಗತ್ತಿ

Date:

ಭೂತಾರಾಧನೆಯ ಒಳಗೆ ಕಲೆ ಇದೆ. ಅದನ್ನು ಹೆಕ್ಕಿ ತೆಗೆದು ರಂಗಕ್ಕೆ ತರುವ ಕೆಲಸ ಆಗಬೇಕು ಎಂದು ಸೃಜನಶೀಲ ಸಾಹಿತಿ ಅರವಿಂದ ಮಾಲಗತ್ತಿ ತಿಳಿಸಿದರು.

ಅಜ್ಜರಕಾಡು ಭುಜಂಗ ಪಾರ್ಕ್ ಬಯಲು ಮಂದಿರದಲ್ಲಿ ಶನಿವಾರ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಮೃತ ಸೋಮೇಶ್ವರ ಅವರು ಭೂತಾರಾಧನೆಯ ಪಾಡ್ದನಗಳನ್ನು ಇಟ್ಟುಕೊಂಡು ರಂಗಪ್ರಯೋಗ ನಡೆಸಿದ್ದರು. ಅಂಥ ಪ್ರಯೋಗಗಳನ್ನು ಆಧುನಿಕ ರಂಗಭೂಮಿಯಲ್ಲಿ ಹೆಚ್ಚಿಗೆ ಆಗಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1004512199

ಇದು ಜೇನು ಗೂಡಿಗೆ ಕೈ ಹಾಕುವ ಕೆಲಸ ಎಂದು ಗೊತ್ತು. ಏನೋ ಮಾಡಲು ಹೋಗಿ ಏನೋ ಆಗುವ ಕಾರ್ಯ. ಸಂಪ್ರದಾಯಸ್ಥರು ಕೂಡ ಇದಕ್ಕೆ ಪ್ರೋತ್ಸಾಹವನ್ನು ನೀಡಬೇಕು. ಆಗ ಭೂತಾರಾಧನೆ ನಮ್ಮ ನಾಡಿನ, ನಮ್ಮ ದೇಶದ ಗಡಿ ದಾಟಿ ಬೆಳೆಯಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಎಲ್ಲಿ ಮನುಷ್ಯತ್ವ ಇದೆಯೋ ಅಲ್ಲಿ ಕಲಾವಿದರು ಇರುತ್ತಾರೆ. ಎಲ್ಲಿ ಸೇವೆ, ತ್ಯಾಗದ ಭಾವ ಇರುವಲ್ಲಿ ಕಲಾವಿದರು ಇರುತ್ತಾರೆ. ಅದಕ್ಕೆ ಸುಮನಸಾ ಸಂಸ್ಥೆಯೇ ಸಾಕ್ಷಿ. ಒಂದು ಮನೆಗೆ ಬೆಂಕಿ ಬಿದ್ದಾಗ ಅಲ್ಲಿ ಮನೆ ನಿರ್ಮಿಸಿ ಕೊಡಲು ಸೇರಿದವರು ಕಟ್ಟಿದ ಸಂಸ್ಥೆ ಇದು ಎಂದು ವಿವರಿಸಿದರು.

ಭಾರತೀಯ ಆಧುನಿಕ ರಂಗಭೂಮಿ ಎಂದರೆ ಉತ್ತರ ಭಾರತದ ಕಡೆಗೆ ನೋಡಲಾಗುತ್ತಿತ್ತು. ಬಿ.ವಿ. ಕಾರಂತ, ಗಿರೀಶ್ ಕಾರ್ನಾಡ್ ಮುಂತಾದವರ ಪ್ರಯೋಗ, ಕುವೆಂಪು, ತೇಜಸ್ವಿ ಮುಂತಾದವರ ಬರಹಗಳು ರಂಗಭೂಮಿಗೆ ಬಂದಿರುವುದರಿಂದ ಅನೇಕ ಪ್ರಯೋಗಗಳಾಗುತ್ತಿರುವುದರಿಂದ ಈಗ ಕರ್ನಾಟಕದ ಕಡೆಗೆ ತಿರುಗಿ ನೋಡುವಂತಾಗಿದೆ. ಮೈಸೂರು ಮತ್ತು ಅವಿಭಜಿತ ದಕ್ಷಿಣ ಕನ್ನಡವು ಆಧುನಿಕ ರಂಗಭೂಮಿಯ ರಾಜಧಾನಿಯಾಗಿದೆ ಎಂದು ಹೇಳಿದರು.

1004512318

ಸರ್ಕಾರದ ಅನುದಾನದಲ್ಲಿ ನಡೆಯುವ ರಂಗಭೂಮಿಗೆ ಹವ್ಯಾಸಿ ರಂಗ ಸಂಸ್ಥೆಗಳು ಆರೋಗ್ಯಕರ ಸ್ಪರ್ಧೆಯನ್ನು ನಿರಂತರ ಒಡ್ಡುತ್ತಾ ಇರಬೇಕು. ಆಗ ಹವ್ಯಾಸಿ ರಂಗಭೂಮಿ ಅಷ್ಟೇ ಅಲ್ಲ, ಸರ್ಕಾರಿ ರಂಗಸಂಸ್ಥೆಗಳೂ ಬೆಳೆಯಲು ಸಾಧ್ಯ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ‘ಪ್ರತಿವಾರ ಕಾರ್ಯಕ್ರಮಗಳಾಗಬೇಕು ಎಂಬ ಕನಸು ಹೊತ್ತು ವಿ.ಎಸ್. ಆಚಾರ್ಯ ಅವರು ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರ ಕಟ್ಟಿದ್ದರು. ಆದರೆ, ಸುಮನಸಾ ಮಾತ್ರ ವರ್ಷಕ್ಕೊಮ್ಮೆ ಬಳಸಿಕೊಳ್ಳುತ್ತಿದ್ದಾರೆ. ಉಳಿದವರು ಬಳಸಿಕೊಳ್ಳುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಗೀತಂ ಗಿರೀಶ್ ಅವರಿಗೆ ರಂಗಸನ್ಮಾನ ನೀಡಿ ಗೌರವಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ, ಸ್ಮರಣಿಕಾ ಉಡುಪಿ ಪ್ರವರ್ತಕ ದಿವಾಕರ ಸಾಲ್ಯಾನ್, ಸಾಯಿಬಾಬಾ ಮಂದಿರದ ಧರ್ಮದರ್ಶಿ ತೋಟದಮನೆ ದಿವಾಕರ ಶೆಟ್ಟಿ, ಸುಮನಸಾ ಕೊಡವೂರು, ಸಂಚಾಲಕ ಭಾಸ್ಕರ ಪಾಲನ್ ಉಪಸ್ಥಿತರಿದ್ದರು.

ಬಾವುಟ ಸಿಕ್ಕಿಸಿ ದೋಣಿ ಸಾಗಿಸುವ ಮೂಲಕ ಕಾರ್ಯಕ್ರಮವನ್ನು ವಿಶಿಷ್ಠವಾಗಿ ಉದ್ಘಾಟಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿದರುವಂದಿಸಿದರು. ನಾಗೇಶ್ ಪ್ರಸಾದ್ ವಂದಿಸಿದರು. ಅಕ್ಷತ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪಯಣ ಬೆಂಗಳೂರು ಇವರು ‘ತಲ್ಕಿ” ನಾಟಕ ಪ್ರದರ್ಶಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...