ಉಡುಪಿ | ರಷ್ಯಾ ಮೂಲದ ವ್ಯಕ್ತಿ ಸಾವು; ಇಂದ್ರಾಳಿಯಲ್ಲಿ ಅಂತ್ಯ ಸಂಸ್ಕಾರ

Date:

ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಸಲಾಗಿದೆ.

ವಿದೇಶಿ ಪ್ರವಾಸಿಗ ರಷ್ಯಾ ದೇಶದ ಪ್ರಜೆ ಅಲೆಗ್ಸಾಂಡರ್(73) ಮೃತ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಫೆಬ್ರವರಿ 22ರಂದು ಅವರು ಮುರಡೇಶ್ವರದ ಕಡಲ ಕಿನಾರೆಯಲ್ಲಿ ವಿಹರಿಸುತ್ತಿರುವಾಗ ಹೃದಯಾಘಾತದಿಂದ ಮೃತಪಟ್ಟದ್ದರು. ಈ ಹಿನ್ನೆಲೆಯಲ್ಲಿ ಮುರುಡೇಶ್ವರ ಪೊಲೀಸರು ಶವವನ್ನು ಮಣಿಪಾಲದ ಶೀತಲೀಕೃತ ಶವರಕ್ಷಣಾ ಘಟಕದಲ್ಲಿ ರಕ್ಷಿಸಿಟ್ಟಿದ್ದರು.

ರಷ್ಯಾದಲ್ಲಿದ್ದ ಮೃತರ ಕುಟುಂಬದವರಿಗೆ ವಿಷಯ ಮುಟ್ಟಿಸಿದ್ದರು. ಆದರೆ ಮೃತರ ಕುಟುಂಬಸ್ಥರಿಗೆ ಭಾರತಕ್ಕೆ ಬರಲು ಅಸಹಾಯಕತೆ ಎದುರಾಯಿತು. ಹಾಗಾಗಿ ಮೃತರ ಮಗಳು ಪೊಲೀಸ್ ಇಲಾಖೆಯಲ್ಲಿ ದಹನರೂಪದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ವಿನಂತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆಯಿಂದ ಮುರುಡೇಶ್ವರ ಪೋಲಿಸರು, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ಸಹಕಾರದಲ್ಲಿ ಉನ್ನತಮಟ್ಟದ ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ಅಂತ್ಯಸಂಸ್ಕಾರ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಲಿಸರು ವಿದೇಶಿ ಮೃತರಿಗೆ ಗೌರಯುತ ವಂದನೆ ಸಮರ್ಪಿಸಿದರು. ಮೃತರ ಮನೆ ಮಂದಿ ಅಂತ್ಯಸಂಸ್ಕಾರದ ದೃಶ್ಯಾವಳಿಗಳನ್ನು ವಿಡಿಯೋ ಕರೆಯ ಮೂಲಕ ವಿಕ್ಷಿಸಿಸಲು ವ್ಯವಸ್ಥೆ ಮಾಡಿದ್ದರು. ಗೌರಯುತವಾಗಿ ನಡೆದ ಅಂತ್ಯಸಂಸ್ಕಾರ ಪ್ರಕ್ರಿಯೆಯನ್ನು ವಿಡಿಯೋ ಕರೆಯಲ್ಲಿ ಕಂಡ ಕುಟುಂಬಸ್ಥರು ಕಂಬನಿ ಮಿಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಎಚ್1ಎನ್1 ವೈರಲ್ ನ್ಯುಮೋನಿಯಾ ವಿರುದ್ಧ ಮಣಿಪಾಲ್ ಆಸ್ಪತ್ರೆಯ ಹೋರಾಟ ಯಶಸ್ವಿ

ಈ ಸಂದರ್ಭ ಮುರುಡೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ಶಿವಕುಮಾರ್ ಎಸ್ ಆರ್, ಸಿಬ್ಬಂದಿಗಳಾದ ಮುರಳಿ ಎಂ ನಾಯ್ಕ್, ವಿಜಯ ನಾಯ್ಕ್, ಮಂಜು ಮಡಿವಾಳ ಇದ್ದರು.

ವಿಕಾಸ್ ಶೆಟ್ಟಿ, ಫ್ಲವರ್ ವಿಷ್ಣು ಸಹಕರಿಸಿದರು. ಎರಡು ವರ್ಷಗಳ ಹಿಂದೆ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಶ್ರೀಲಂಕಾ ಪ್ರಜೆಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ನಡೆಸಿರುವುದನ್ನು ನೆನಪಿಸಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...