ಉಡುಪಿ | ಕೋಮುವಾದಿಗಳಿಗೆ ಕರವಾಳಿ, ಕೋಮು ಹಿಂಸೆಯನ್ನು ಚಾಲನೆಯಲ್ಲಿ ಇಟ್ಟುಕೊಳ್ಳುವ ಇಂಡಸ್ಟ್ರೀ – ಪ್ರೊ. ಫಣಿರಾಜ್

Date:

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ, ಸಹಬಾಳ್ವೆ ಮತ್ತು ಮಾನವ ಬಂಧುತ್ವ ಉಡುಪಿ ವಲಯ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಇಂದು ಸಾಮರಸ್ಯ ನಡಿಗೆ -ಸೌಹಾರ್ದ ಸಭೆ ಬ್ರಹ್ಮಾವರ ಸಮೀಪದ ನೀಲಾವರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆಗೂ ಮೊದಲು ಬ್ರಹ್ಮವಾರದ ಕುಂಜಾಲು ಕೇಳಪೇಟೆಯಿಂದ ನೀಲಾವರ ಕ್ರಾಸ್‌ವರೆಗೆ ಸಾಮರಸ್ಯ ನಡಿಗೆ ಜಾಥ ನಡೆಯಿತು.

1006096365

ಸೌಹಾರ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಹಬಾಳ್ವೆ ಉಡುಪಿ ಸಂಚಾಲಕರದ ಪ್ರೊ.ಫಣಿರಾಜ್, ಸಂಘಪರಿವಾರ ಹಾಗೂ ಬಿಜೆಪಿಗೆ ಕರಾವಳಿ ಜಿಲ್ಲೆಗಳು ಹಿಂದುತ್ವದ ಪ್ರಯೋಗಾಲಯಗಳಾಗಿವೆ. ಕೋಮು ಹಿಂಸೆಯನ್ನು ನಿರಂತರವಾಗಿ ಚಾಲನೆಯಲ್ಲಿ ಇಟ್ಟುಕೊಳ್ಳುವ ಇಂಡಸ್ಟ್ರೀ ಆಗಿದೆ. ಇದಕ್ಕೆ ಹಣ ಹೂಡಿಕೆ ಮಾಡುತ್ತಾರೆ ಮತ್ತು ಅದರ ಲಾಭದ ನಿರೀಕ್ಷೆಯಲ್ಲೂ ಇರುತ್ತಾರೆ ಎಂದು ಹೇಳಿದರು. ಮುಂದುವರೆದು ಮಾತನಾಡಿದ ಅವರು ಸಮಾಜದಲ್ಲಿ ಉದ್ರೇಕ ಎಬ್ಬಿಸಿ ಕೋಮು ಹಿಂಸೆಯನ್ನು ಜ್ವಲಂತವಾಗಿರಿಸುವ ಪ್ರಯತ್ನ ನಡೆಯುತ್ತಿದೆ. ಇದು 2000ರಿಂದ ಉಡುಪಿ ಜಿಲ್ಲೆಯಲ್ಲಿ ಮುಂದು ವರೆಯುತ್ತಿದೆ. ಇವರೇ ದಾಳಿ ಮಾಡಿ, ಇವರೇ ಬೀದಿಗೆ ಬಂದು ಪ್ರತಿಭಟನೆ ನಡೆಸುತ್ತಾರೆ ಎಂದ ಅವರು, ಕರಾವಳಿಯ ಹಿಂದುಳಿದ ಜಾತಿಯ ಯುವಕರನ್ನು ಸಂಘಪರಿವಾರ ಹಿಂಸೆಗೆ ಇಳಿಸುತ್ತದೆ ಮತ್ತು ಜೈಲುಪಾಲಾಗಿಸುತ್ತದೆ. ಮತ್ತೆ ಅವರಿಗೂ ಅವರ ಕುಟುಂಬಕ್ಕೂ ಹಣ ನೀಡುತ್ತದೆ. ಅವರ ಕೇಸ್ ನಡೆಸಲು ಕ್ರಿಮಿನಲ್ ವಕೀಲರನ್ನು ನಿಯೋಜಿಸಲಾಗುತ್ತದೆ. ಹೀಗೆ ಇದೊಂದು ಉದ್ಯಮವಾಗಿ ಬಿಟ್ಟಿದೆ ಎಂದು ಹೇಳಿದರು.

1006096363

ಮುಖ್ಯ ಅತಿಥಿಯಾಗಿ ಆಗಮಿಸಿದ ಚಿಂತಕ ಎಂ.ಜಿ.ಹೆಗ್ಡೆ ಮಾತನಾಡಿ, ಶಾಲಾ ವಾರ್ಷಿಕೋತ್ಸವ, ಸಾಹಿತ್ಯ, ದೇವಸ್ಥಾನದ ಕಾರ್ಯಕ್ರಮ ಗಳಲ್ಲಿಯೂ ಧ್ವೇಷ ಭಾಷಣ ಮಾಡುವುದು ಸಾಮಾನ್ಯವಾಗಿದೆ ಮತ್ತು ಭಾಷಣದ ವ್ಯಾಖ್ಯಾನ ಕೂಡ ಆಗಿದೆ. ಧರ್ಮವನ್ನು ನಿಜವಾಗಿ ಅರ್ಥಮಾಡಿಕೊಂಡು ಪಾಲನೆ ಮಾಡುವವರಿಗೆ ಬೇರೆ ಧರ್ಮದವರನ್ನು ನೋಡಿದಾಗ ಅಸಹನೆ ಹುಟ್ಟಲು ಸಾಧ್ಯವೇ ಇಲ್ಲ ಎಂದು ಹೇಳಿದರು. ಧರ್ಮದ ಅರ್ಥ ಗೊತ್ತಿಲ್ಲದ ಹಿಂದು ಚಳವಳಿಗಳು ಹುಟ್ಟಿರುವುದೇ ಇದಕ್ಕೆಲ್ಲ ಕಾರಣವಾಗಿದೆ. ಧರ್ಮಗಳಲ್ಲಿ ವೇದಾಂತ ಯಾರಿಗೂ ಬೇಡವಾಗಿದೆ. ಅದರಲ್ಲಿ ಅಸಮಾನತೆ, ಹಿಂಸೆ ಅಸ್ಪಸೃಶ್ಯ ಅಸಹನೆ ಯಾವುದು ಇಲ್ಲ. ಆದರೆ ನಾವು ಆ ವೇದಾಂತವನ್ನು ಬಿಟ್ಟು ಜಗಳ ಕಾರಣವಾಗುವ ಆಚರಣೆಗಳನ್ನೇ ಧರ್ಮ ಎಂಂದು ನಂಬಿಕೊಂಡಿದ್ದೇವೆ. ಆಚರಣೆಗಳು ಮತಗಳ ಒಂದು ಭಾಗವಾಗಿವೇ ಹೊರತು ಅದುವೇ ಧರ್ಮ ಅಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆಯನ್ನು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಹಿಸಿದ್ದರು. ವೇದಿಕೆಯಲ್ಲಿ ದಸಂಸ ಮುಖಂಡರಾದ ಶ್ಯಾಮ್‌ರಾಜ್ ಬಿರ್ತಿ, ಸುಂದರ್ ಮಾಸ್ತರ್, ಸ್ಟಿವನ್ ವಿಕ್ಟರ್ ಲೂವೀಸ್, ಧರ್ಮಗುರು ಮುಹಮ್ಮದ್ ರಶೀದ್ ಕಣ್ಣಂಗಾರ್, ಕಾಂಗ್ರೆಸ್ ಮುಖಂಡರಾದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ಪ್ರಸಾದ್‌ರಾಜ್ ಕಾಂಚನ್, ರಾಘವೇಂದ್ರ ಶೆಟ್ಟಿ ಕರ್ಜೆ, ಜ್ಯೋತಿ ಹೆಬ್ಬಾರ್, ಶರ್ಫುದ್ದೀನ್ ಶೇಖ್ ಭಾಗವಹಿಸಿದ್ದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ವಂದಿಸಿದರು. ಸತೀಶ್ ಕೊಡವೂರು ಕಾರ್ಯ ಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...