ಉಡುಪಿ | ಶಾಂತಿಯುತ ಹೊಸ ವರ್ಷಾಚರಣೆಗೆ ವಾತಾವರಣ ಖಾತ್ರಿಪಡಿಸಲಿ- ಸಹಬಾಳ್ವೆ ಆಗ್ರಹ

Date:

ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಬಾಳ್ವೆ ವೇದಿಕೆ ಶಾಂತಿಯುತ ಹೊಸ ವರ್ಷಾಚರಣೆಯ ವಾತಾವರಣವನ್ನು ಖಾತ್ರಿಪಡಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ.

ಡಿಸೆಂಬರ್ 25ರಂದು ಕ್ರಿಸ್ತ ಜಯಂತಿಯ ಆಚರಣೆಗಳು ಸಮಾಪ್ತಗೊಂಡಿದ್ದು, ಜನವರಿ 1ರ ಹೊಸ ವರ್ಷಾಚರಣೆಗೆ ಕ್ರೈಸ್ತ ಸಮುದಾಯ ಸಿದ್ಧತೆ ನಡೆಸುತ್ತಿರುವ ನಡುವೆ, ದೇಶದ ವಿವಿಧ ಭಾಗಗಳಲ್ಲಿ ಭಯಭೀತಿಯ ವಾತಾವರಣ ನಿರ್ಮಾಣವಾಗಿದೆ ಎಂದು ವೇದಿಕೆ ಆತಂಕ ವ್ಯಕ್ತಪಡಿಸಿದೆ. ಕೇರಳ, ದೆಹಲಿ, ಅಸ್ಸಾಂ, ಒಡಿಶಾ, ಉತ್ತರ ಪ್ರದೇಶ ಹಾಗೂ ಛತ್ತೀಸ್ಗಡ ರಾಜ್ಯಗಳಲ್ಲಿ ಕ್ರಿಸ್ತ ಜಯಂತಿ ಆಚರಣೆ ವೇಳೆ ಬಲಪಂಥೀಯ ಸಂಘಟನೆಗಳಿಂದ ಪುಡಾಂಟಿಕೆ ಹಾಗೂ ಹಲ್ಲೆ ನಡೆದಿರುವ ಘಟನೆಗಳು ವರದಿಯಾಗಿವೆ ಎಂದು ತಿಳಿಸಿದೆ.

ಒಂದು ಕಡೆ ದೇಶದ ಪ್ರಧಾನಮಂತ್ರಿಗಳು ಹಬ್ಬದ ಆಚರಣೆಗಳಲ್ಲಿ ಭಾಗವಹಿಸಿ ಶಾಂತಿಯ ಸಂದೇಶ ಸಾರುತ್ತಿರುವಾಗ, ಮತ್ತೊಂದು ಕಡೆ ಸಂಘಪರಿವಾರಕ್ಕೆ ಸೇರಿದ ಕೆಲವು ಸಂಘಟನೆಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವುದು ದುರದೃಷ್ಟಕರ ಎಂದು ಸಹಬಾಳ್ವೆ ಅಭಿಪ್ರಾಯಪಟ್ಟಿದೆ. ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಲ್ಲಿ ಕಾನೂನು ಪಾಲಕರು ವಿಳಂಬ ಧೋರಣೆ ಅನುಸರಿಸುತ್ತಿರುವುದು ಗಂಭೀರ ವಿಚಾರವಾಗಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆಳವಣಿಗೆಗಳು ದೇಶದ ವೈವಿಧ್ಯಮಯ ಧಾರ್ಮಿಕ ಆಚರಣೆಗಳ ಹಕ್ಕುಗಳನ್ನು ರಕ್ಷಿಸುವಲ್ಲಿ ಪ್ರಭುತ್ವದ ನಿರ್ಲಕ್ಷ್ಯವನ್ನು ತೋರಿಸುತ್ತಿವೆ ಎಂದು ಸಹಬಾಳ್ವೆ ಟೀಕಿಸಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಬೆಳೆಸುವ ಉದ್ದೇಶ ಹೊಂದಿರುವ ವೇದಿಕೆ, ಈ ಮತೀಯ ಹಲ್ಲೆಗಳನ್ನು ತೀವ್ರವಾಗಿ ಖಂಡಿಸಿದೆ.

ಎಲ್ಲ ನಾಗರಿಕರೂ ಭಯವಿಲ್ಲದೆ, ಶಾಂತಿಯುತವಾಗಿ ಹೊಸ ವರ್ಷವನ್ನು ಆಚರಿಸಬಹುದಾದ ವಾತಾವರಣ ನಿರ್ಮಿಸುವುದು ಸರಕಾರಗಳ ಸಂವಿಧಾನಿಕ ಕರ್ತವ್ಯವಾಗಿದೆ. ತೋರಿಕೆಯ ಸಂದೇಶಗಳಿಗೆ ಸೀಮಿತವಾಗದೆ, ನೈಜ ಕ್ರಮಗಳ ಮೂಲಕ ಶಾಂತಿ-ಸೌಹಾರ್ದವನ್ನು ಕಾಯ್ದುಕೊಳ್ಳಬೇಕು ಎಂದು ಸಹಬಾಳ್ವೆ ಸರಕಾರಗಳಿಗೆ ಆಗ್ರಹಿಸಿದೆ.

ಈ ಕುರಿತು ಸಹಬಾಳ್ವೆ ವೇದಿಕೆಯ ಪ್ರಧಾನ ಸಂಚಾಲಕ ಕೆ. ಫಣಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...