ಉಡುಪಿ | ಆಮೆಗತಿಯಲ್ಲಿ ಸಾಗುತ್ತಿದೆ ಸಂತೆಕಟ್ಟೆ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ

Date:

ಕೇಂದ್ರ ಸರ್ಕಾರದ ಅಧಿಕಾರಿಗಳ ಅವೈಜ್ಞಾನಿಕ ವರ್ತನೆಯಿಂದ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿರುವ ಸರ್ವಿಸ್ ರಸ್ತೆ, ಕಳೆದ ವರ್ಷ ಜುಲೈನಲ್ಲಿ ಕುಸಿದಿತ್ತು. ಮುಂದಿನ ದಿನಗಳಲ್ಲಿ ಈ ಪರಿಸರದ ರಾಷ್ಟ್ರೀಯ ಹೆದ್ದಾರಿಯೇ ಕಡಿತಗೊಂಡರೆ ಇದಕ್ಕೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇರ ಹೊಣೆಯಾಗುತ್ತಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂತೆಕಟ್ಟೆ ಭಾಗದಲ್ಲಿ ಸ್ಥಳೀಯರನ್ನು ಯಾವುದೇ ರೀತಿಯಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಇಲ್ಲಿನ ಧಾರಣಾ ಸಾಮರ್ಥ್ಯವನ್ನು ಪರಿಶೀಲಿಸದೆ ಅವೈಜ್ಞಾನಿಕವಾಗಿ ಬೇಕಾಬಿಟ್ಟಿ ಆಳವಾದ ಹೊಂಡವನ್ನು ತೆಗೆದ ಪರಿಣಾಮ ಇಲ್ಲಿನ ಸರ್ವಿಸ್ ರಸ್ತೆ ಕುಸಿತ ಕಂಡಿತ್ತು. ಇದೀಗ ಏಳು ತಿಂಗಳು ಕಳೆದರೂ‌ ಕೂಡ ಅಂಡಪಾಸ್ ಕಾಮಗಾರಿ ಅಮೆಗತಿಯಲ್ಲಿ ಸಾಗುತ್ತಿದೆ. ಹೈವೇ ಕಾಮಗಾರಿಯಿಂದಾಗಿ ಹೈವೇಯಲ್ಲಿ ನಿತ್ಯ ನಿರಂತರ ಟ್ರಾಫಿಕ್‌ ಸಮಸ್ಯೆ ಜನರನ್ನು ಹೈರಾಣು ಮಾಡಿದೆ. ಹೆದ್ದಾರಿ ಸಮಸ್ಯೆ ಬಗೆಹರಿಸುವ ಕಡೆಗೆ ಸಂಸದರು, ಜಿಲ್ಲಾಡಳಿತ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಜನ ಹಿಡಿಶಾಪ ಹಾಕುತ್ತಿದ್ದಾರೆ.

ಸಂತೆ ಕಟ್ಟೆಯಲ್ಲಿ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ಆರಂಭವಾಗಿ ಎರಡು ವರ್ಷ ಕಳೆದಿವೆ. ಎರಡು ವರ್ಷಗಳಿಂದ ವಾಹನಗಳು ಹೈವೇ ಬದಲಿಗೆ ಸರ್ವಿಸ್ ರಸ್ತೆಯಲ್ಲೇ ಸಾಗಬೇಕಾಗುತ್ತಿದೆ. ಸರ್ವೀಸ್ ರಸ್ತೆ ನಿತ್ಯ ವಾಹನ ದಟ್ಟಣೆ ಅಪಘಾತ ದಾರಿ ಮಾಡಿಕೊಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಹೆದ್ದಾರಿ 169ರ ಕತೆ ಒಂದೆಡೆಯಾದರೆ, ನಗರದ ಇಂದ್ರಾಳಿಯಲ್ಲಿ ರೈಲ್ವೆ ಸೇತುವೆ ಕಾಮಗಾರಿ ಹಲವು ವರ್ಷಗಳಿಂದ ಬಾಕಿ ಇದೆ. ಸಂಸದೆ ಶೋಭಾ ಕರಂದ್ಲಾಜೆ ಈಗ ಕೇಂದ್ರ ಸಚಿವೆಯೂ ಹೌದು. ಪದೆ ಪದೇ ಹೇಳಿಕೆ ನೀಡುತ್ತಾ ಕಾಲಕಳೆಯುವ ಸಚಿವರು, ಇತ್ತ ಕಡೆ ಗಮನ ಹರಿಸದೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಸಚಿವರು ಪೆಂಡಿಂಗ್ ಇರುವ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದು ಈಗಾಗಲೇ ಅವೈಜ್ಞಾನಿಕವಾಗಿ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿದ್ದು ಪ್ರತಿನಿತ್ಯ‌ ಸಾವಿರಾರು ಜನರಿಗೆ ಬಹಳಷ್ಟು ತೊಂದರೆ ಉಂಟಾಗುತ್ತಿದ್ದೆ. ಉಡುಪಿ‌ ಜಿಲ್ಲೆಯ ಹಲವು ಭಾಗಗಳಲ್ಲಿಯೂ ಕೂಡ ಇದೇ ಸಮಸ್ಯೆ ಎದುರಾಗಿದೆ ಆದಷ್ಟು ಬೇಗ ಕಾಮಗಾರಿ ಕೆಲಸ ಮುಗಿಸಿ‌ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಂಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಳ್ಳುವಂತೆ ತಿಳಿಸಿದರು.

ಈ ಬಗ್ಗೆ ಈಗಾಗಲೇ ಮಾಧ್ಯಮದ ಜೊತೆ ಮಾತನಾಡಿರುವ, ಉಡುಪಿ‌ ಜಿಲ್ಲಾಧಿಕಾರಿ ವಿದ್ಯಾಕುಮಾರಿಯವವರು ರಾ.ಹೆದ್ದಾರಿ 66ರ ಸಂತೆಕಟ್ಟೆ ಅಂಡರ್‌ಪಾಸ್‌ ರಸ್ತೆ ಕಾಮಗಾರಿ ಗುಣಮಟ್ಟದೊಂದಿಗೆ ನಡೆಯುತ್ತಿಲ್ಲ ಹಾಗೂ ಕಾಮಗಾರಿಗಳು ತೀರಾ ಮಂದಗತಿಯಲ್ಲಿ ಸಾಗುತ್ತಿವೆ ಎಂಬ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಭಿಯಂತರರು ಈ ಬಗ್ಗೆ ಎಚ್ಚರ ವಹಿಸಿ ಕಾಮಗಾರಿಗಳನ್ನು ನಿರ್ವಹಿಸಬೇಕು. ಆದಷ್ಟು ತ್ವರಿತಗತಿಯಲ್ಲಿ ಇಲ್ಲಿನ ಕೆಲಸಕಾರ್ಯಗಳನ್ನು ಮುಗಿಸಬೇಕು ಎಂದು ಸೂಚನೆಗಳನ್ನು ಈಗಾಗಲೇ ನೀಡಲಾಗಿದೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಪ್ರವಾಸಿ ತಾಣವಾದ ಉಡುಪಿ‌ ಜಿಲ್ಲೆಗೆ ಪ್ರತಿದಿನ ಸಾವಿರಾರು ಜನ ಆಗಮಿಸುತ್ತಾರೆ ಅವರಿಗೆ ತೊಂದರೆ ಆಗದಂತೆ ಮತ್ತು ಪ್ರತಿನಿತ್ಯ ತಮ್ಮ ಜೀವನವನ್ನು ಅರಸಿ ಓಡಾಡುವ ಉಡುಪಿ‌ಯ ಸಾರ್ವಜನಿಕರಿಗೂ ಅನುಕೂಲ ಆಗುವಂತೆ, ಆಮೆಗತಿಯಲ್ಲಿ ಆಗುತ್ತಿರುವ ಎಲ್ಲಾ ಕಾಮಗಾರಿಯನ್ನು ಶೀಘ್ರವಾಗಿ ಅಂತಿಮ ಹಂತಕ್ಕೆ ತರಬೇಕಾಗಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...