ಉಡುಪಿ | ಶಾಸಕರಿಂದ ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆ, ಕಾನೂನು ಕ್ರಮ ಕೈಗೊಳ್ಳಿ – ಎಸ್ ಡಿ ಪಿ ಐ

Date:

ಮೈಸೂರು ಸಂಸ್ಥಾನದ ಇತಿಹಾಸದ ಗಂಧಗಾಳಿ ತಿಳಿಯದ ಮತ್ತು ಸದಾ ಹಿಂದುತ್ವದ ಅಮಲಿನಲ್ಲಿರುವ ಉಡುಪಿ ಶಾಸಕ ಯಶಪಾಲ್ ಸುವರ್ಣ ರವರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ದಸರಾ ಎಂಬುದು “ನಾಡ ಹಬ್ಬ” ನಾಡಿನ ಸರ್ವ ಜನಾಂಗದ ಜನರು ಅವರವರ ವಿಶಿಷ್ಟವಾದ ಆಚರಣೆಯ ಮೂಲಕ ಹಬ್ಬವನ್ನು ಸಂಭ್ರಮದಿಂದ ಆಚರಿಸುದು ವಾಡಿಕೆ. ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ರವರಿಂದ ದಸರಾ ಉದ್ಘಾಟನೆಯ ಅಹ್ವಾನವನ್ನು ವಿರೋಧಿಸಿ ಹೇಳಿಕೆ ನೀಡಿರುವುದು ಅವರ ಮುಸ್ಲಿಂ ವಿರೋಧಿ ಮನಸ್ಥಿತಿಯಾಗಿದೆ ಎಂದು ಹೇಳಿದರು.

2017ರಲ್ಲಿ ನಿತ್ಯೋತ್ಸವದ ಕವಿ ನಿಸಾರ್ ಅಹ್ಮದ್ರವರು ಸಹ ದಸರಾ ಉದ್ಘಾಟನೆ ಮಾಡಿದ್ದು ಕರ್ನಾಟಕದ ಜನತೆ ಸ್ಮರಿಸುತ್ತಿರುದು ಉಡುಪಿಯ ಶಾಸಕ ಯಶಪಾಲ್ ಸುವರ್ಣರವರು ಮರೆತಂತಿದೆ. ಯಶ್ಪಾಲ್ ಸುವರ್ಣರವರು ಮತಾಂಧತೆ, ಭ್ರಷ್ಟತೆ,ಬೆತ್ತಲೆ ಪ್ರಕರಣ ಮತ್ತು ಮಹಾಲಕ್ಷ್ಮಿ ಸೊಸೈಟಿಯ ಹಗರಣದ ಆರೋಪ ಹಾಗೂ ಪ್ರತಿಯೊಂದು ವಿಷಯದಲ್ಲೂ ಧರ್ಮವನ್ನು ಹುಡುಕುವ ಚಾಳಿಯಿಂದಾಗಿ ಉಡುಪಿಯ ಮಾನ ಹರಾಜು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊನ್ನೆ ಯುಟ್ಯೂಬರ್ ಸಮೀರ್ ವಿಷಯಕ್ಕೆ ಸಂಭಂದಿಸಿದಂತೆಯೂ ಗೂಂಡಾಗಳ ರೀತಿ ಹೇಳಿಕೆಯನ್ನು ನೀಡಿದ್ದರು. ತನ್ನ ಸ್ವ ಕ್ಷೇತ್ರಕ್ಕೆ ಹೆಚ್ಚಿನ ಅನುದಾನಕ್ಕೆ ಸರಕಾರವನ್ನು ಒತ್ತಾಯಿಸಬೇಕಾದ ಶಾಸಕರು ಧರ್ಮ ಧರ್ಮಗಳ ಮಧ್ಯ ಗೊಂದಲವನ್ನು ಸೃಷ್ಟಿಸುವ ಕೆಲಸವನ್ನು ಮಾಡುತ್ತಿರುದು ಉಡುಪಿ ಜನತೆಯ ತಲೆತಗ್ಗಿಸುವಂತೆ ಮಾಡಿದೆ. ಜಿಲ್ಲೆಯ ಸೌಹಾರ್ದತೆಗೆ ಧಕ್ಕೆ ತರುವಂತಹ ಹೇಳಿಕೆ ನಿರಂತರವಾಗಿ ನೀಡುತ್ತಿರುವ ಉಡುಪಿ ಶಾಸಕ ಯಶಪಾಲ್ ಸುವರ್ಣರ ಮೇಲೆ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...