ಉಡುಪಿ‌ | ಮಾ.8ರಂದು ಎಸ್‌ಡಿಪಿಐನಿಂದ ʼಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶʼ

Date:

ಪ್ರಜಾಪಭುತ್ವದ ಮೇಲೆ ಫ್ಯಾಸಿಸ್ಟ್‌ ಶಕ್ತಿಗಳು ನಡೆಸುತ್ತಿರುವ ಪ್ರಹಾರದ ವಿರುದ್ಧ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಮಾರ್ಚ್‌ 8ರಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಉಸ್ತುವಾರಿ ರಿಯಾಝ್‌ ಕಡಂಬು ಹೇಳಿದರು.

ಉಡುಪಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತಮಾಡಿದ ರಿಯಾಝ್, “ನಗರದ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾ ಭವನ ಹೊರಾಂಗಣದಲ್ಲಿ ಸಮಾವೇಶ ನಡೆಯಲಿದೆ” ಎಂದು ತಿಳಿಸಿದರು.

“ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎನ್ನುವ ನಂಬಿಕೆಯಲ್ಲಿ ಪ್ರಜೆಗಳು ಜೀವಿಸುತ್ತಿರುತ್ತಾರೆ. ಆ ಸಂವಿಧಾನವೇ ಅಪಾಯಕ್ಕೆ ಸಿಲುಕಿದರೆ ಪ್ರಜಾಪ್ರಭುತ್ವ ಉಳಿಯುವುದಾದರೂ ಹೇಗೆ? ಅಂತಹ ವಿಷಮ ಸನ್ನಿವೇಶದಲ್ಲಿ ನಾವೆಲ್ಲ ಬದುಕುತ್ತಿದ್ದೇವೆ. ಇದರ ಬಗ್ಗೆ ಜಾಗೃತಿ ಮೂಡಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಎಂದು ಬೀಗುವ ನಾವು ಎಂತಹ ಸನ್ನಿವೇಶದಲ್ಲಿದ್ದೇವೆಂದರೆ ಸುಪ್ರೀಂ ಕೋರ್ಟ್‌ ತನ್ನ ಕೆಲಸ ಪಕ್ಕಕ್ಕಿಟ್ಟು ಮತ ಎಣಿಕೆ ಕಾರ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಚಂಡೀಗಡ ಮೇಯರ್‌ ಚುನಾವಣೆಯಲ್ಲಿ ಫ್ಯಾಸಿಸ್ಟ್‌ ಬಿಜೆಪಿ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಲು ಚುನಾವಣಾ ಅಧಿಕಾರಿಯನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದ ಪರಿಣಾಮ ಇದು. ನಮ್ಮ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳಲು ಇದೊಂದೇ ಪ್ರಕರಣವಲ್ಲ, ನೂರಾರು ಉದಾಹರಣೆಗಳಿವೆ” ಎಂದು ಹೇಳಿದರು.

“ಮೋದಿ ಸರ್ಕಾರ ರೈತ ಚಳುವಳಿಯನ್ನು ಹತ್ತಿಕ್ಕುತ್ತಿರುವ ಕ್ರೌರ್ಯಭರಿತ ರೀತಿ, ಸರ್ವೋಚ್ಚ ನ್ಯಾಯಾಲಯ ಅಸಂವಿಧಾನಿಕವೆಂದು ಜರಿದ ಚುನಾವಣಾ ಬಾಂಡ್‌ಗಳ ಮೂಲಕ ಸಾವಿರಾರು ಕೋಟಿ ದೇಣಿಗೆ ಪಡೆದಿರುವುದು, ವಿರೋಧ ಪಕ್ಷದ ಮುಖ್ಯಮಂತ್ರಿಗಳನ್ನು ಜೈಲಿಗೆ ಅಟ್ಟುತ್ತಿರುವುದು, ಪುಲ್ವಾಮ ದಾಳಿ ಹಾಗೂ ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಸತ್ಯ ನುಡಿದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಸಿಂಗ್‌ ಅವರ ಮೇಲೆ ತನಿಖಾ ಸಂಸ್ಥೆಗಳ ದಾಳಿ, ಅಲ್ಪಸಂಖ್ಯಾತರ ಪ್ರಾರ್ಥನಾ ಮಂದಿರಗಳ ಮೇಲೆ ಬುಲ್ಡೋಜರ್‌ ಹರಿಸುವ ಕ್ರೌರ್ಯ, ದಲಿತರು ಮತ್ತು ಆದಿವಾಸಿಗಳ ಮೇಲೆ ಹದ್ದು ಮೀರಿದ ದೌರ್ಜನ್ಯ, ವಿಪಕ್ಷಗಳ ಸರ್ಕಾರಗಳನ್ನು ಕೆಡೆವುವುದು, ಶಿಕ್ಷಣದ ಕೇಸರೀಕರಣ, ಒಂದೇ ಎರಡೇ ಪಟ್ಟಿ ಮಾಡುತ್ತಲೇ ಹೋಗಬಹುದು” ಎಂದು ರಿಯಾಝ್‌ ವಿವರಿಸಿದರು.

“ದೇಶದ ಪ್ರಜೆಗಳಾಗಿ ನಾವು ಇಂತಹ ಸಂದರ್ಭದಲ್ಲಿ ನಿಭಾಯಿಸಬೇಕಾದ ಅತಿಮುಖ್ಯ ಜವಾಬ್ದಾರಿ ಎಂದರೆ ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಮುಂದಾಗುವುದು. ಅದರ ಮೇಲೆ ನಡೆಯುತ್ತಿರುವ ಪ್ರಹಾರದ ವಿರುದ್ಧ ಸಂವಿಧಾನದ ಅಡಿಯಲ್ಲಿ ಸೆಡ್ಡುಹೊಡೆದು ನಿಂತು ಪ್ರತಿರೋಧ ಒಡ್ಡುವುದು. ಆ ಪ್ರತಿರೋಧದ ಭಾಗವಾಗಿ ಎಸ್‌ಡಿಪಿಐ ಪಕ್ಷ ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶ ಹಮ್ಮಿಕೊಂಡಿದೆ. ಬನ್ನಿ, ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಿಕೊಳ್ಳಲು ಒಗ್ಗಟ್ಟಾಗಿ ನಿಲ್ಲೋಣ. ಆ ಮೂಲಕ ನಮ್ಮ ದೇಶವನ್ನು ಉಳಿಸಿಕೊಳ್ಳೋಣ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ‌ತುಮಕೂರು | ಜಯನಗರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಉಡುಪಿ‌ ಜಿಲ್ಲಾಧ್ಯಕ್ಷ ಶಾಹಿದ್ ಅಲಿ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವಾ, ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹನೀಫ್ ಮೂಲೂರು ಮತ್ತು ಉಡುಪಿ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ಅಝೀಝ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...