ಉಡುಪಿ | ವಿದ್ಯಾರ್ಥಿ ಶ್ರೀಶಾನ್ ಶೆಟ್ಟಿ ಅಸಹಜ ಸಾವು ಪ್ರಕರಣ, ಪೊಲೀಸರಿಂದ ತನಿಖೆ ಮುಂದುವರಿಕೆ !

Date:

ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಕುಕ್ಕುಂಜಾರು ನಿವಾಸಿ ಕರುಣಾಕರ ಶೆಟ್ಟಿಯವರ ಮಗ ಶ್ರೀಶಾನ್ ಕೆ. ಶೆಟ್ಟಿ (16) ಕಾಣೆಯಾಗಿರುವ ಕುರಿತು ಉಡುಪಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಬಳಿಕ ಹುಡುಕಾಟದ ವೇಳೆ ಯುವಕನ ಮೃತದೇಹ ಪತ್ತೆಯಾದ ಘಟನೆ ಬಗ್ಗೆ ವರದಿಯಾಗಿತ್ತು.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಶ್ರೀಶಾನ್ ಕೆ. ಶೆಟ್ಟಿ ಹಿರಿಯಡಕ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ನವೆಂಬರ್‌ 9 ರಂದು ಮಧ್ಯಾಹ್ನ 12.15 ಗಂಟೆಗೆ ತನ್ನ ತಂದೆಯೊಂದಿಗೆ ದ್ವಿಚಕ್ರ ವಾಹನ (ಕೆಎ20 ಹೆಚ್‌ಡಿ 4227) ನಲ್ಲಿ ಪೆರ್ಡೂರಿಗೆ ತೆರಳಿದ್ದನು. ಅಲ್ಲಿ ತಂದೆಯನ್ನು ಬಿಟ್ಟು ಅಜ್ಜಿ ಮನೆಯಾದ ಅಲಂಗಾರಿಗೆ ಹೋಗಿದ್ದ. ಅಜ್ಜಿ ಮೊಬೈಲ್‌ನಿಂದ ತಂದೆಗೆ ಕರೆ ಮಾಡಿ, “ನಾನು ಅಜ್ಜಿ ಮನೆಯ ಬಳಿ ಇರುವ ನದಿಗೆ ಆಟವಾಡಲು ಹೋಗುತ್ತಿದ್ದೇನೆ” ಎಂದು ತಿಳಿಸಿದ್ದ.

ಆದರೆ ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಮರಳದ ಕಾರಣ ಕರುಣಾಕರ ಶೆಟ್ಟಿಯವರು ಅಜ್ಜಿಗೆ ಕರೆಮಾಡಿ ವಿಚಾರಿಸಿದಾಗ, “ಶ್ರೀಶಾನ್ ಮನೆಗೆ ಬಂದಿಲ್ಲ” ಎಂಬ ಉತ್ತರ ಸಿಕ್ಕಿತು. ತಕ್ಷಣ ಕುಟುಂಬಸ್ಥರು ಹಾಗೂ ಸ್ಥಳೀಯರು ಅಲಂಗಾರು, ಪೆರ್ಡೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದರೂ ಶ್ರೀಶಾನ್ ಪತ್ತೆಯಾಗಲಿಲ್ಲ. ಘಟನೆಯ ಬಗ್ಗೆ ಚಿಂತೆಗೊಂಡ ತಂದೆಯಾದ ಕರುಣಾಕರ ಶೆಟ್ಟಿಯವರು ಉಡುಪಿ ಠಾಣೆಗೆ ಬಂದು ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ, ಕಾಣೆಯಾದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರನೇ ದಿನ ನವೆಂಬರ್‌ 10ರಂದು ಸಂಜೆ 4 ಗಂಟೆ ಸಮಯಕ್ಕೆ ಕುಕ್ಕುಂಡಿ ಹೊಳೆಬಾಗಿಲು ಮಡಿಸಾಲು ಹೊಳೆಯಲ್ಲಿ ಶ್ರೀಶಾನ್‌ನ ಮೃತದೇಹ ಪತ್ತೆಯಾಯಿತು. ಈ ಕುರಿತು ಮೃತನ ತಂದೆಯಿಂದ ಮತ್ತೊಂದು ದೂರು ಸ್ವೀಕರಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಮೃತದೇಹವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕಳುಹಿಸಿ ಶವಪರೀಕ್ಷೆ ನಡೆಸಲಾಗಿದೆ. ಶವಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಘಟನಾ ಸ್ಥಳಕ್ಕೆ ಠಾಣಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು.

ಪೊಲೀಸರು ತನಿಖೆ ವೇಳೆ ಶ್ರೀಶಾನ್‌ನ ಸ್ನೇಹಿತನಾದ ಪೆರ್ಡೂರಿನ ನವೀನ್ ಎಂಬ ಯುವಕನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ. ನವೀನ್ ನೀಡಿದ ಹೇಳಿಕೆ ಪ್ರಕಾರ, ಶ್ರೀಶಾನ್ ಮಧ್ಯಾಹ್ನ 12 ಗಂಟೆ ಸುಮಾರಿಗೆ ನನ್ನ ಬಳಿ ಬಂದು ‘ಸೇತುವೆಗೆ ಹೋಗೋಣ’ ಎಂದು ಹೇಳಿದ್ದು. ನನ್ನ ಬೈಕ್‌ನಲ್ಲಿ ಪೆಟ್ರೋಲ್‌ ಕಡಿಮೆ ಇದ್ದುದರಿಂದ ಹೋಗಲಾರೆ ಎಂದು ಹೇಳಿದಾಗ, ಆತ ತನ್ನ ಸ್ಕೂಟರ್ ತೆಗೆದುಕೊಂಡು ಬಂದು ನಾವಿಬ್ಬರೂ ಕುಕ್ಕುಂಡಿ ಹೊಳೆಯ ಕಡೆಗೆ ಹೋಗಿದೆವು. ಹೊಳೆಯ ಬಳಿಯಲ್ಲಿ ಸ್ಕೂಟರ್ ಹೋಗದ ಕಾರಣ ಹಾಡಿಯಲ್ಲೇ ನಿಲ್ಲಿಸಿ ಕಾಲ್ನಡಿಗೆಯಲ್ಲಿ ಹೊಳೆಯ ಕಡೆ ಇಳಿದೆವು. ಶ್ರೀಶಾನ್ ತನ್ನ ಶರ್ಟ್‌, ಬರ್ಮುಡ ಮತ್ತು ಚಪ್ಪಲಿಯನ್ನು ಸ್ಕೂಟರ್‌ನ ಬಳಿಯೇ ಬಿಚ್ಚಿಟ್ಟು ನೀರಿನಲ್ಲಿ ಇಳಿದನು. ನಾನು ದಡದಲ್ಲಿ ನಿಂತಿದ್ದೆ. ಆತ ನೀರಿನಲ್ಲಿ ಮುಂದೆ ಸಾಗುತ್ತಿದ್ದಾಗ ಕಾಲು ಜಾರಿತು. ನಾನು ಹಿಡಿಯಲು ಪ್ರಯತ್ನಿಸುವಷ್ಟರಲ್ಲಿ ಆತ ಹೊಳೆಯ ಆಳವಾದ ಭಾಗದಲ್ಲಿ ಮುಳುಗಿಹೋದ. ನಾನು 10 ನಿಮಿಷ ಹೊಳೆಯೊಳಗೆ ಹುಡುಕಿದರೂ ಪತ್ತೆಯಾಗಲಿಲ್ಲ. ಆತ ಮುಳುಗಿಹೋದನೆಂದು ಭಯಗೊಂಡು ಶರ್ಟ್‌ ಮತ್ತು ಬರ್ಮುಡವನ್ನು ಸ್ಕೂಟರ್‌ನ ಡಿಕ್ಕಿಯಲ್ಲಿ ಇಟ್ಟು, ಸ್ಕೂಟರ್‌ನ್ನು ಹಾಡಿಯಲ್ಲೇ ಬಿಟ್ಟು ಮನೆಗೆ ಹೋದೆ. ಮನೆಯವರಿಗೆ ಈ ಬಗ್ಗೆ ಹೇಳಿದರೆ ಅವರು ನನ್ನ ಮೇಲೆ ಕೇಸ್‌ ಮಾಡಬಹುದು ಎಂಬ ಭಯದಿಂದ ಮೌನವಾಗಿದ್ದೆ,” ಎಂದು ನವೀನ್ ಪೊಲೀಸರಿಗೆ ಹೇಳಿದ್ದಾನೆ.

ತನಿಖಾಧಿಕಾರಿಗಳು ನವೀನ್‌ನ ಹೇಳಿಕೆಯನ್ನು ದಾಖಲಿಸಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಶ್ರೀಶಾನ್ ಅನಾಹುತದಿಂದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಸಾಧ್ಯತೆಗಳು ಹೆಚ್ಚು ಎಂದು ಅಂದಾಜಿಸಲಾಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಮರಣ ವರದಿ ಹಾಗೂ ಎಫ್‌ಎಸ್‌ಎಲ್ ವರದಿ ಬಂದ ನಂತರ ಘಟನೆಯ ನೈಜನೆ ತಿಳಿದುಬರಲಿದ್ದು, ಯಾವುದೇ ಅನುಮಾನಾಸ್ಪದ ಸಂಗತಿಗಳು ಕಂಡುಬಂದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹಾಗೂ ಅಸತ್ಯ ವದಂತಿಗಳು ಹರಡುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು, ಯಾವುದೇ ಊಹಾಪೋಹಗಳನ್ನು ನಂಬದಂತೆ ಹಾಗೂ ಸುಳ್ಳು ಸುದ್ದಿಗಳನ್ನು ಹಬ್ಬಿಸದಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...