ಉಡುಪಿ | ಮದ್ಯ, ಮಾದಕ ದ್ರವ್ಯಗಳಿಂದ ದೂರವಿರಿ: ಅಹ್ಮದ್ ಶರೀಫ್ ಸಅದಿ ಯುವಕರಿಗೆ ಕರೆ

Date:

ತಂಬಾಕು, ಮದ್ಯ, ಮಾದಕ ದ್ರವ್ಯ ನಿಮ್ಮಲ್ಲಿರುವ ಮನುಷ್ಯತ್ವ, ದೇಹದ ಸಮತೋಲನ ಹಾಗೂ ಮನಸ್ಸಿನ ಸದ್ಭಾವನೆಯನ್ನು ಕೊಂದು, ಮನುಷ್ಯನನ್ನು ವಿಕೃತಗೊಳಿಸುತ್ತದೆ. ಇವುಗಳಿಂದ ದೂರವಿರಿ ಎಂದು ಸರ್ ಹಿಂದ್ ಇಸ್ಲಾಮಿಕ್ ಅಕಾಡೆಮಿ, ತ್ವೈಭಾ ಗಾರ್ಡನ್ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಅಹ್ಮದ್ ಶರೀಫ್ ಸಅದಿ ಕರೆ ನೀಡಿದರು.

ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಬಿ ಆರ್ ಕೆ ವೃತ್ತದಲ್ಲಿ ಪ್ರವಾದಿ ಮುಹಮ್ಮದ್(ಸ) ಜನ್ಮದಿನದ ಅಂಗವಾಗಿ ಹಯಾತುಲ್ ಇಸ್ಲಾಂ ಅಸೋಸಿಯೇಷನ್, ಬಂಗ್ಲೆಗುಡ್ಡೆ, ಸಲ್ಮಾನ್ ಜುಮ್ಮಾ ಮಸ್ಜಿದ್, ಸರ್ ಹಿಂದ್ ಅಕಾಡೆಮಿ, ತ್ವೈಭಾ ಗಾರ್ಡನ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಬೃಹತ್ ಮೀಲಾದ್ ಸಂದೇಶ ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದರು.

ಎಲ್ಲ ಧರ್ಮ ಗ್ರಂಥಗಳು ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದೆ. ಇಸ್ಲಾಂ ಶಾಂತಿ, ಸೌಹಾರ್ದತೆ ಸಹೋದರತೆಯ ಸಂಕೇತವಾಗಿದೆ. ಭಯೋತ್ಪಾದನೆ, ಭೀಕರವಾದ, ಅಶಾಂತಿ, ಅಸ್ಪ್ರಶ್ಯತೆ, ಅನೀತಿ, ಅನಾಚಾರ, ಅತ್ಯಾಚಾರ, ಅಕ್ರಮಗಳನ್ನು ಇಸ್ಲಾಂ ಯಾವತ್ತೂ ಒಪ್ಪುದಿಲ್ಲ. ಅದು ಇಸ್ಲಾಂ ಸಂಸ್ಕೃತಿಯಲ್ಲ ಎಂದ ಅವರು, ಕುರ್‌ಆನ್ ಮತ್ತು ಪ್ರವಾದಿಯವರ ಇಸ್ಲಾಮಿನ ಸಂದೇಶಗಳ ಮೂಲಕ ಸಮಾಜದಲ್ಲಿ ಅನ್ಯ ಧರ್ಮೀಯರೊಂದಿಗೂ ಶಾಂತಿ ಸೌಹಾರ್ದತೆಯಿಂದ ಬಾಳುವಂತೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸರ್ ಹಿಂದ್ ಅಕಾಡೆಮಿ, ತ್ವೈಭಾ ಗಾರ್ಡನ್ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶರೀಫ್, ಕರ್ನಾಟಕ ಮುಸ್ಲಿಂ ಜಮಾತ್ ಕಾರ್ಕಳ ತಾಲೂಕು ಅಧ್ಯಕ್ಷ ನಾಸಿರ್ ಶೇಖ್ ಬೈಲೂರು, ಜಲ್ವ ಏ ನೂರ್ ನ ಮೌಲಾನ ಸಹೀದ್ ರಝಾ, ಹಯಾತುಲ್ ಇಸ್ಲಾಂ ಅಸೋಸಿಯೇಷನ್, ಬಂಗ್ಲೆಗುಡ್ಡೆ ನ ಪ್ರಮುಖರಾದ ರಜ್ಜಬ್ ಎ ಕೆ, ಮಾಜಿ ಅಧ್ಯಕ್ಷರುಗಳಾದ ಬಷೀರ್ ಸಾಣೂರು, ಹನೀಫ್ ಬೆಲ್ಲೂರ್, ರಜಬ್ ಪರನಿರ್, ಮಾಜಿ ಉಪಾಧ್ಯಕ್ಷ ಕೆ ನೂರುದ್ದೀನ್, ಅಬ್ದುಲ್ ರಹಿಮಾನ್, ಸೇವಾದಳದ ಅಧ್ಯಕ್ಷ ಅಬ್ದುಲ್ಲಾ ಶೇಖ್, ಝೈನುಲ್ ಅಭಿದ್ ಸಖಾಫಿ ಮಾಗುಂಡಿ, ಅಬ್ದುಲ್ ಖಾದರ್ ಮದನಿ ಅಳಕೆ, ಮೆಹಮೂದ್ ಜುಹಾರಿ ಚೆರ್ಕಳ, ಅಷ್ಪಾಕ್ ಅಹಮದ್ ಸಖಾಫಿ, ಶಮೀಮ್ ಸಹದಿ ಸುರತ್ಕಲ್, ಇಸ್ಮಾಯಿಲ್ ಮಾಸ್ಟರ್ ಕೊಣಾಜೆ ಎಸ್ ವೈ ಎಸ್ ಮುಖಂಡರುಗಳಾದ ದಾವೂದ್ ಪರನಿರ್, ರಫೀಕ್ , ಮುಬೀನ್, ಎಸ್ ಎಸ್ ಎಫ್ ಮುಖಂಡರುಗಳಾದ ಅಲ್ತಾಫ್ ಪರನಿರ್, ನವಾಝ್ ಶರೀಫ್ , ಫಯಾಝ್ ಪರನಿರ್, ಮಯ್ಯದಿ, ಕೆ ಹಸನ್ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಕೊಪ್ಪಳ | ಅಂತರ್ಜಾತಿ ವಿವಾಹವಾಗಿ ಕೊಲೆಗೀಡಾಗಿದ್ದ ಯುವತಿಯ ಮನೆಗೆ ಸಚಿವ ತಂಗಡಗಿ, ಸಂಸದ ಹಿಟ್ನಾಳ್ ಭೇಟಿ

ಬಂಗ್ಲೆಗುಡ್ಡೆ ಸಲ್ಮಾನ್ ಜುಮ್ಮಾ ಮಸೀದಿ ವಠಾರದಲ್ಲಿ ನಡೆದಂತಹ ಧ್ವಜಾರೋಹಣ ಕಾರ್ಯಕ್ರಮವನ್ನು ಹಿರಿಯ ಧಾರ್ಮಿಕ ವಿದ್ವಾಂಸ ಇಬ್ರಾಹಿಮ್ ಫೈಝಿ ಪುಲಿಕ್ಕೂರು ಉಸ್ತಾದ್ ನೆರವೇರಿಸಿದರು. ಅಲವಿ ಫಜಲಿಲ್ ಅಲ್ ಜೆಫ್ರಿ ತoಘಳ್ ಮಿಲಾದ್ ಸಂದೇಶ ಮೆರವಣಿಗೆಗೆ ಚಾಲನೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...