ಉಡುಪಿ | ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷೆ ಶೇ.87.93 ಪೂರ್ಣ

Date:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವಿಸ್ತರಿತ ಗಣತಿಯಲ್ಲಿ ಸೋಮವಾರ ಸಂಜೆವರೆಗೆ ಉಡುಪಿ ಜಿಲ್ಲೆಯಲ್ಲಿ ಶೇ.87.93ರಷ್ಟು ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ರಾಜ್ಯದ ಮಟ್ಟದಲ್ಲಿ ಶೇ.90.23ರಷ್ಟು ಸರ್ವೆ ಮುಗಿದಿರುವ ಮಾಹಿತಿ ಲಭ್ಯವಾಗಿದೆ.

ಉಡುಪಿ ಜಿಲ್ಲೆಯಲ್ಲಿ ಒಟ್ಟು 3,62,093 ಮನೆಗಳ ಗಣತಿ ನಡೆಯಬೇಕಿದ್ದು, ಇದುವರೆಗೆ 2,54,463 ಮನೆಗಳ ಸಮೀಕ್ಷೆ ಮುಗಿದಿದೆ. ಜಿಲ್ಲೆಯ ಏಳು ತಾಲೂಕುಗಳಲ್ಲಿ ಸೋಮವಾರದಂದು 2,786 ಮನೆಗಳ ಸರ್ವೆ ಕಾರ್ಯ ಮುಗಿದಿದೆ. 63,923 ಮನೆಗಳ ಯುಎಚ್‌ಐಡಿ (ಪ್ರತಿ ಮನೆಗೆ ನೀಡುವ ವಿಶಿಷ್ಟ ಗುರುತು) ಮನೆಯಲ್ಲಿ ಯಾರೂ ಇಲ್ಲದಿರುವುದು ಹಾಗೂ ಇತರ ತಾಂತ್ರಿಕ ಕಾರಣಗಳಿಂದ ಕೊನೆಗೊಳಿಸಲಾಗಿದೆ.

ಜಿಲ್ಲೆಯಲ್ಲಿ ಉಡುಪಿಯನ್ನು ಹೊರತುಪಡಿಸಿ ಉಳಿದ ತಾಲೂಕುಗಳಲ್ಲಿ ಗಣತಿ ಶೇ.80 ಕ್ಕಿಂತ ಮೇಲು ಮುಗಿದಿದೆ. ಉಡುಪಿ ತಾಲೂಕಿನಲ್ಲಿ ಮಾತ್ರ ಸರ್ವೆ ನಿಧಾನಗತಿಯಲ್ಲಿದ್ದು, ಶೇ.74.36ರಷ್ಟು ಮಾತ್ರ ಪೂರ್ಣಗೊಂಡಿದೆ. ಉಡುಪಿ ತಾಲೂಕಿನಲ್ಲೇ ಅತ್ಯಧಿಕ 21,620 ಮನೆಗಳ ಯುಎಚ್‌ಐಡಿ ಮುಕ್ತಾಯಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೈಂದೂರಿನಲ್ಲಿ ಗುರಿಯಾದ 26,623 ಮನೆಗಳಲ್ಲಿ 25,111 ಮನೆಗಳ ಸರ್ವೆ ಮುಗಿದು ಶೇ.108 ಸಾಧನೆಯಾಗಿದೆ. ಇಲ್ಲಿ 3,084 ಮನೆಗಳ ಯುಎಚ್‌ಐಡಿ ಮುಚ್ಚಲಾಗಿದೆ. ಹೆಬ್ರಿಯಲ್ಲಿ 13,422 ಮನೆಗಳ ಗುರಿಯಲ್ಲಿ 11,585 ಮನೆಗಳ ಸಮೀಕ್ಷೆ ಪೂರ್ಣಗೊಂಡು ಶೇ.105.23 ಸಾಧನೆಯಾಗಿದೆ. ಇಲ್ಲೂ 2,539 ಮನೆಗಳ ಯುಎಚ್‌ಐಡಿ ಮುಕ್ತಾಯಗೊಂಡಿದೆ.

ಬ್ರಹ್ಮಾವರ ತಾಲೂಕಿನಲ್ಲಿ ಶೇ.97, ಕುಂದಾಪುರದಲ್ಲಿ ಶೇ.95, ಕಾರ್ಕಳದಲ್ಲಿ ಶೇ.85 ಹಾಗೂ ಕಾಪುವಿನಲ್ಲಿ ಶೇ.81ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ಈ ಸಮೀಕ್ಷೆ ಅಕ್ಟೋಬರ್‌ 18ರಂದು ಕೊನೆಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...