ಉಡುಪಿ | ಭಾರತ ಜ್ಞಾನ-ವಿಜ್ಞಾನ ಸಮಿತಿಯಿಂದ ಅ.18,19ರಂದು ‘ಟೀಚರ್ ಶೈಕ್ಷಣಿಕ ಹಬ್ಬ’

Date:

ಭಾರತೀಯ ಜ್ಞಾನ, ವಿಜ್ಞಾನ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ಟೀಚರ್ ಶೈಕ್ಷಣಿಕ ಹಬ್ಬವನ್ನು ಅ.18 ಮತ್ತು 19ರಂದು ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಭಾರತ ಜ್ಞಾನ – ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಪಿ.ವಿ ಭಂಡಾರಿ ಹೇಳಿದರು.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಬಿಕ್ಕಟ್ಟುಗಳೊಡನೆ ವರ್ತಮಾನದ ಮುಖಾಮುಖಿ ಎಂಬ ಹೆಸರಿನಲ್ಲಿ ನಡೆಯುವ ವಿವಿಧ ಗೋಷ್ಠಿಗಳಲ್ಲಿ ಶೈಕ್ಷಣಿಕ ನೀತಿಗಳು, ಅವುಗಳ ಅನುಷ್ಠಾನದಲ್ಲಿ ಎದುರಾಗಿರುವ ಸವಾಲುಗ ಳ ಕುರಿತು ಚರ್ಚೆ, ಉಪನ್ಯಾಸ, ಸಂವಾದಗಳು ನಡೆಯಲಿವೆ ಎಂದರು.

ಈ ಹಬ್ಬದಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳ 250ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅ.18 ರಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ಹೈದರಾಬಾದಿನ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪೊ.ರಾಮಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಿತಿ ಕೋಶಾಧಿಕಾರಿ ಪ್ರೊ. ಕಮಲ್ ಲೊಡಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ.ಬಿ ಕಾವೇರಿ, ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ಪಾಲ್ಗೊಳ್ಳಲಿದ್ದಾರೆ. ಅ.19 ರಂದು ಮಧ್ಯಾಹ್ನ 2.30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ವಿವರಿಸಿದರು.

ಇದನ್ನು ಓದಿದ್ದೀರಾ? ಗದಗ | ಒಂದೇ ಗೋದಾಮಿನಲ್ಲಿ ಪಡಿತರ ಅಕ್ಕಿ, ರಸಗೊಬ್ಬರ, ಕ್ರಿಮಿನಾಶಕ, ಸಿಮೆಂಟ್ ದಾಸ್ತಾನು: ಆತಂಕದಲ್ಲಿ ಗ್ರಾಮಸ್ಥರು

ಅ.18 ರಂದು ಸಂಜೆ 6.30 ಕ್ಕೆ ಯತೀಶ್ ಕೊಳ್ಳೆಗಾಲ ನಿರ್ದೇಶನದ ಅರಿವು ರಂಗಪಯಣ ತಂಡದಿಂದ ನಾಟಕ ಪ್ರದರ್ಶನ ನಡೆಯಲಿದೆ. ಕೋವಿಡ್ ನಂತರ ಮೊದಲ ಬಾರಿಗೆ ಟೀಚರ್ ಶೈಕ್ಷಣಿಕ ಹಬ್ಬ ನಡೆಯುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉದಯ್ ಗಾಂವಕರ್, ಸಂತೋಷ್ ನಾಯಕ್ ಪಟ್ಲ, ಶುಭಂಕರ್ ಚಕ್ರವರ್ತಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...