ಉಡುಪಿ | ‘ಕಂಚಿನಡ್ಕ’ ಟೋಲ್‌ಗೇಟ್‌ಗೆ ಸರ್ಕಾರದಿಂದ ತಾತ್ಕಾಲಿಕ ತಡೆ : ಸಚಿವ ಜಾರಕಿಹೊಳಿ ಆದೇಶ

Date:

ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರಕ್ಕೆ ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಿದೆ, ಅಲ್ಲದೇ, ಈ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಧಿಕೃತ ಆದೇಶ ಕೂಡ ಹೊರಡಿಸಿದ್ದಾರೆ.

ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಟೋಲ್ ಸಂಗ್ರಹ ಕೇಂದ್ರವನ್ನು ರದ್ದುಪಡಿಸುವ ನಿಟ್ಟಿನಲ್ಲಿ ಲೋಕೋಪಯೊಗಿ ಸಚಿವರಾದ ಸತೀಶ್ ಜಾರಕಿಹೊಳಿಯವರಿಗೆ ಕಾಪು ಕಾಂಗ್ರೆಸ್ ಪಕ್ಷದ ನಾಯಕರ ನಿಯೋಗವು ತೆರಳಿ ಮನವಿ ಸಲ್ಲಿಸಿತ್ತು.

ಈ ನಡುವೆ ಗುರುವಾರ ಉಡುಪಿಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಟೋಲ್ ಗೇಟ್ ಹೋರಾಟ ಸಮಿತಿಯ ಮುಖಂಡರು, ಆಗಸ್ಟ್ 24ರ ಶನಿವಾರ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದರು. ಈ ನಡುವೆಯೇ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಧಿಕೃತ ಆದೇಶ ಕೂಡ ಹೊರಡಿಸಿದ್ದು, ಕಾರ್ಯಾದೇಶ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಆದೇಶ 7

ಆದೇಶದಲ್ಲಿ, “ಟೋಲ್ ಗೇಟ್ ವಿಷಯವು ಸಾರ್ವಜನಿಕ ಹಿತದೃಷ್ಟಿಯಿಂದಾಗಿ ಸೂಕ್ಷ್ಮತೆಯಿಂದ ಕೂಡಿರುವುದರಿಂದ, ಚಿನಡ್ಕ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲು ಉದ್ದೇಶಿಸಿರುವ ಸುಂಕ ವಸೂಲಾತಿ ಕೇಂದ್ರದ ಬಗ್ಗೆ ಮತ್ತೊಮ್ಮೆ ಕೂಲಂಕಷವಾಗಿ ಪರಿಶೀಲಿಸಿ, ಮತ್ತೊಮ್ಮೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವರೆಗೆ ಈಗಾಗಲೇ ಕಾಮಗಾರಿ ನೀಡಲಾಗಿರುವ ಸಂಸ್ಥೆಗೆ ನೀಡಲಾಗಿರುವ ಕಾರ್ಯಾದೇಶ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದು, ಕಂಚಿನಡ್ಕ ಪ್ರದೇಶದಲ್ಲಿ ಸಂಚಾರ ವ್ಯವಸ್ಥೆಯನ್ನು ಯಥಾಸ್ಥಿತಿಯಲ್ಲಿ ಮುಂದುವರೆಸುವ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ” ಎಂದು ಲೋಕೋಪಯೋಗಿ ಸಚಿವರು ಉಲ್ಲೇಖಿಸಿದ್ದಾರೆ.

ಸರ್ವಜ್ಞ ತಂತ್ರಿ ಬೆಳ್ಮಣ್, ಟೋಲ್ ಗೇಟ್ ಹೋರಾಟ ಸಮಿತಿ

ಶನಿವಾರದ ಪ್ರತಿಭಟನೆ ನಡೆಯಲಿದೆ: ಟೋಲ್‌ಗೇಟ್‌ ಹೋರಾಟ ಸಮಿತಿ

“ಸರ್ಕಾರದ ತಾತ್ಕಾಲಿಕ ತಡೆದ ಆದೇಶದ ಹೊರತಾಗಿಯೂ ಕಂಚಿನಡ್ಕ ಟೋಲ್ ವಿರೋಧಿಸಿ ಆಗಸ್ಟ್ 24ರ ಶನಿವಾರ ಪಡುಬಿದ್ರೆ ಸಮೀಪ ಕಂಚಿನಡ್ಕದಲ್ಲಿ ನಡೆಸಲು ಉದ್ದೇಶಿಸಲಾಗಿರುವ ಬೃಹತ್ ಪ್ರತಿಭಟನೆ ನಡೆಯಲಿದೆ” ಎಂದು ಟೋಲ್ ಗೇಟ್ ಹೋರಾಟ ಸಮಿತಿಯ ಮುಖಂಡರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಕಾರ್ಕಳ – ಪಡುಬಿದ್ರೆ ಟೋಲ್ ಗೇಟ್‌ಗೆ ವಿರೋಧ: ಆ. 24ರಂದು ಬೃಹತ್ ಪ್ರತಿಭಟನೆ

“ರಾಜ್ಯ ಸರ್ಕಾರವು ತಾತ್ಕಾಲಿಕ ಆದೇಶ ನೀಡಿದೆಯಷ್ಟೇ. ಸುಂಕ ವಸೂಲಾತಿ ಕೇಂದ್ರದ ಪ್ರಸ್ತಾವನೆಯಿಂದ ಸರಕಾರ ಸಂಪೂರ್ಣವಾಗಿ ಹಿಂದೆ ಸರಿಯಬೇಕು. ಈ ರಸ್ತೆಯಲ್ಲಿ ಜನ ಸಾಮಾನ್ಯರಿಗೆ ಹೊರೆಯಾಗುವ ಟೋಲ್ ಗೇಟ್ ಪ್ರಸ್ತಾವನೆ ಶಾಶ್ವತವಾಗಿ ರದ್ದಾಗಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಇರಲಿದೆ. ನಾಳೆಯ ಪ್ರತಿಭಟನೆ ರದ್ದು ಮಾಡುವುದಿಲ್ಲ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ಶಾಂತಿಯುತವಾಗಿ ನಡೆಯಲಿರುವ ಶನಿವಾರದ ಪ್ರತಿಭಟನೆಯಲ್ಲಿ ಭಾಗವಹಿಸಬೇಕು” ಎಂದು ಟೋಲ್ ಗೇಟ್ ಹೋರಾಟ ಸಮಿತಿಯ ಹೋರಾಟಗಾರ ಸರ್ವಜ್ಞ ತಂತ್ರಿ ಬೆಳ್ಮಣ್ ತಿಳಿಸಿದ್ದಾರೆ.

ಸುಹಾಸ್ ಹೆಗ್ಡೆ ನಂದಳಿಕೆ, ಕಂಚಿನಡ್ಕ ಟೋಲ್ ಗೇಟ್ ಹೋರಾಟ ಸಮಿತಿ
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...