ಉಡುಪಿ | ಐದು ಗ್ಯಾರಂಟಿಗಳ ಜಾರಿಗೆ ಒತ್ತು ನೀಡಿದ ಬಜೆಟ್; ರೈತರು, ಅಸಂಘಟಿತ ಕಾರ್ಮಿಕರ ನಿರ್ಲಕ್ಷ್ಯ 

Date:

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅವರ 15ನೇ ಹಾಗೂ 2024-25ರ ಸಾಲಿಗೆ 1.05 ಲಕ್ಷ ಕೋಟಿ ಸಾಲದ ಹೊರೆಯನ್ನೊತ್ತ 3.71 ಲಕ್ಷ ಕೋಟಿರೂಗಳ ಬಜೆಟ್‌ನಲ್ಲಿ 5 ಗ್ಯಾರಂಟಿಗಳ ಜಾರಿಗೆ ಒತ್ತು ನೀಡಿದ ಕ್ರಮವನ್ನು ಸಿಪಿಐ(ಎಂ) ಸ್ವಾಗತಿಸುತ್ತದೆ ಎಂದು ಸಿಪಿಐಎಂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೇಳಿದರು.

ಉಡುಪಿಯಲ್ಲಿ ಪತ್ರಿಕಾ ಪ್ರಕಟಣೆ ತಿಳಿಸಿರುವ ಅವರು, “ಅಸಂಘಟಿತ ಕಾರ್ಮಿಕರುಗಳಾದ ಆಟೊ, ಬಸ್, ಲಾರಿ ಚಾಲಕರು ಮತ್ತು ಇತರ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಮೂಲಕ ಸವಲತ್ತುಗಳನ್ನು ಒದಗಿಸಲು ಹೆಚ್ಚಿನ ಪ್ರಮಾಣದ ಕ್ರಮ ಕೈಗೊಂಡಿಲ್ಲ. ಅಂಗನವಾಡಿ, ಆಶಾ, ಬಿಸಿಯೂಟ, ಹಾಸ್ಟೆಲ್, ಸಂಜೀವಿನಿ ನೌಕರರಿಗೆ, ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತರಿಯಲ್ಲಿ ಕೆಲಸ ಮಾಡುವವರಿಗೆ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ವೇತನ ಹೆಚ್ಚಳ ಮಾಡಬೇಕಾಗಿತ್ತು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಬರಗಾಲದಲ್ಲಿ ಬೇಯುತ್ತಿರುವ ಕೃಷಿಕರಿಗೆ, ಕೇಂದ್ರ ಒಕ್ಕೂಟ ಸರ್ಕಾರದ ಅಸಹಕಾರ ಮತ್ತು ತಾರತಮ್ಯ ನೀತಿಯ ನಡುವೆಯೂ ತಲಾ ₹2‌,000 ಪರಿಹಾರ, ಸಾಲದ ಬಡ್ಡಿ ಹಾಗೂ ಸುಸ್ತಿ ಬಡ್ಡಿ ಮನ್ನಾ, ಸಹಕಾರ ರಂಗದಲ್ಲಿ ಹೆಚ್ಚುವರಿ ಸಾಲ ನೀಡಲು, ಎಪಿಎಂಸಿಗಳ ಪುನರುಜ್ಜೀವನಗೊಳಿಸಲು ಕ್ರಮ, ಹಾಲು ಹಾಗೂ ರೇಷ್ಮೆ ಉತ್ಪಾದಕರಿಗೆ ಸಹಾಯಧನದ ಹೆಚ್ಚಳ, ದೇವದಾಸಿ ಮಹಿಳೆಯರು, ಮಂಗಳ ಮುಖಿಯರ ಮಾಸಿಕ ಸಹಾಯಧನದ ಹೆಚ್ಚಳ, ಅಂಗನವಾಡಿ ನೌಕರರಿಗೆ ಗ್ರಾಚ್ಯೂಟಿ ಮತ್ತು ಸ್ಮಾರ್ಟ್ ಪೋನ್ ಮುಂತಾದ ಘೋಷಣೆಯನ್ನು ಸ್ವಾಗತಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರದ ಒಕ್ಕೂಟ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎರಡೂ ಸೇರಿ, ಮುಂದಿನ ದಿನಗಳಲ್ಲಿ ಬಡ ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿ ಕ್ರಮವಹಿಸಬೇಕಿದೆ. ಕೃಷಿ ಉತ್ಪನ್ನಗಳ ಬೆಲೆಗಳ ಏರಿಳಿತ ಮಾಡುವ ಮಾರುಕಟ್ಟೆ ಶಕ್ತಿಗಳಿಂದ, ಬರ ಹಾಗೂ ಅತಿವೃಷ್ಟಿ, ಕಳಪೆ ಬೀಜ, ಕ್ರಿಮಿನಾಶಕಗಳಿಂದಾಗುವ ನಷ್ಟದಿಂದ ರೈತರನ್ನು ರಕ್ಷಿಸಲು ಕೇರಳ ಮಾದರಿಯ ಋಣಮುಕ್ತ ಕಾಯ್ದೆಗೆ ಕ್ರಮವಹಿಸಬೇಕು” ಎಂದು ಎರಡೂ ಸರ್ಕಾರಗಳನ್ನು ಒತ್ತಾಯಿಸಿದರು.

“ರಾಜ್ಯ ಹಾಗೂ ಒಕ್ಕೂಟ ಸರ್ಕಾರಗಳು ರಾಜ್ಯವನ್ನು ಆರ್ಥಿಕ ಸಂಕಷ್ಟ ಹಾಗೂ ಬಿಕ್ಕಟ್ಟಿನಿಂದ ಪಾರು ಮಾಡಲು, ಇದಕ್ಕೆ ಕಾರಣವಾದ ಜಾಗತಿಕರಣ ಹಾಗೂ ಉದಾರಿಕರಣ, ಖಾಸಗೀಕರಣದ ನೀತಿಗಳಿಂದ ಹೊರಬರಬೇಕಾಗಿದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಗದಗ | ಕಾಯಕ ದಾಸೋಹದ ಆರ್ಥಿಕ ನೀತಿಯನ್ನು ಭೋಧಿಸಿದ್ದು ಬಸವಣ್ಣ: ಸಚಿವ ಎಚ್.ಕೆ ಪಾಟೀಲ್

“ಒಕ್ಕೂಟ ಸರ್ಕಾರದ ವಿದ್ಯುತ್ ತಿದ್ದುಪಡಿ ಮಸೂದೆಯು ದೇಶದ ಮತ್ತು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿದ್ದು‌, ಅದನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲವೆಂದು ಬಜೆಟ್‌ನಲ್ಲಿ ಪ್ರಕಟಿಸಬೇಕೆಂದು ರಾಜ್ಯದ ಜನತೆ ಒತ್ತಾಯಿಸುತ್ತಿದ್ದರೂ ಜಾರಿಗೊಳಿಸಿಲ್ಲ” ಎಂದರು.

“ಐದು ಲಕ್ಷ ಕಾರ್ಮಿಕ ಕುಟುಂಬಗಳು ಜೀವನೋಪಾಯ ಮಾಡುತ್ತಿರುವ ಸುಮಾರು 80,000 ಸಣ್ಣ ಹಾಗೂ ಅತಿಸಣ್ಣ ಕೈಗಾರಿಕೆಗಳ ನಾಶವನ್ನು ತಡೆಯುವಂತೆ ಸಿಪಿಐ(ಎಂ) ರಾಜ್ಯದ ಮುಖ್ಯಮಂತ್ರಿಗಳನ್ನು ಬಲವಾಗಿ ಒತ್ತಾಯಿಸಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...