ಉಡುಪಿ | ಕನ್ನಡ ಮಾಧ್ಯಮದಲ್ಲಿ ಓದಿದವರು ಸರ್ವಾಂತರ್ಯಾಮಿಗಳಾಗಿದ್ದಾರೆ: ಡಾ ಅಶೋಕ್

Date:

ಕನ್ನಡ ಮಾಧ್ಯಮದಲ್ಲಿ ಓದುತ್ತಿರುವವರು ಕನ್ನಡ ಮಾಧ್ಯಮದವರು ಎನ್ನಲು ಯಾವುದೇ ಅಳುಕು ಬೇಡ. ಕನ್ನಡ ಮಾಧ್ಯಮದಲ್ಲಿ ಓದಿದವರು ಇಂದು ಸರ್ವಾಂತರ್ಯಾಮಿಯಾಗಿದ್ದಾರೆ ಎಂದು
ಉಡುಪಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ ಅಶೋಕ್ ಹೇಳಿದರು.

ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಯಶೋಮಾಧ್ಯಮ 2024ರ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ರಾಜ್ಯದ, ದೇಶದ ಮಾತ್ರವಲ್ಲ ಹೊರ ದೇಶಗಳಲ್ಲಿಯೂ ಉನ್ನತ ಹುದ್ದೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು ಕೆಲಸ ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“116 ವರ್ಷಗಳ ಇತಿಹಾಸವಿರುವ ಈ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತುಂಬಾ ಪುಣ್ಯವಂತರಾಗಿದ್ದಾರೆ. ಶಿಕ್ಷಕರು ಎಷ್ಟು ಹೊತ್ತು ಕೆಲಸ ಮಾಡಿದ್ದಾರೆ ಎಂಬುದು ಮುಖ್ಯವಲ್ಲ, ಎಷ್ಟು ಹೊತ್ತು ಗುಣಮಟ್ಟದ ಕೆಲಸ ಮಾಡಿದ್ದೀರಿ ಎಂಬುದು ಮುಖ್ಯವಾಗುತ್ತದೆ” ಎಂದು ಹೇಳಿದರು.

“ಉತ್ತಮ ಸಮಾಜ ನಿರ್ಮಾಣ ಹಾಗೂ ಭವ್ಯ ಭಾರತವನ್ನು ನಿರ್ಮಾಣ ಮಾಡುವ ಕೆಲಸ ಪೋಷಕರಿಗಿಂತ ಹೆಚ್ಚು ಶಿಕ್ಷಕರ ಜವಾಬ್ದಾರಿಯಾಗಿದೆ. ಯಾವುದೇ ಕೆಲಸ ಮಾಡುವಾಗ ಕ್ವಾಲಿಟಿ ಕೆಲಸ ಮಾಡಿರಿ, ರೈತಾಪಿ ಬಳಗದ ಅನ್ನ ತಿನ್ನುವ ನಾವು ರೈತಾಪಿ ವರ್ಗದವರ ಏಳಿಗೆಗಾಗಿ ಕೆಲಸ ಮಾಡಬೇಕು. ಹಾಗೆಯೇ 116 ವರ್ಷಗಳ ಇತಿಹಾಸದ ಈ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯು ಮುಂದಿನ ದಿನಗಳಲ್ಲಿ ಉತ್ತಮವಾದ ಮಾದರಿ ಪ್ರಾಥಮಿಕ ಶಾಲೆಯಾಗಲಿ” ಎಂದು ಹಾರೈಸಿದರು. ಹಾಗೆಯೇ ಸ್ಪಂದನ ಸೇವಾ ಸಂಸ್ಥೆಯ ಈ ಸಮಾಜಮುಖಿ ಕೆಲಸವನ್ನು ಶ್ಲಾಘಿಸಿದರು.

ಹಿರಿಯ ಪತ್ರಕರ್ತ ಜನಾರ್ಧನ್ ಕೊಡವೂರು ಅವರು ಮಾತನಾಡಿ, “ಸ್ಪಂದನ ಸೇವಾ ಸಂಸ್ಥೆಯು ಈ ಶಾಲೆಗೆ ಪ್ರತಿ ವರ್ಷ ನೋಟ್ ಪುಸ್ತಕಗಳನ್ನು ಉಚಿತವಾಗಿ ನೀಡುತ್ತಾ ಬಂದಿದೆ. ಅದರೊಂದಿಗೆ ಅಧ್ಯಕ್ಷ ವೆಂಕಟೇಶ್ ಪೈ ಅವರು ಸ್ವತಃ ಪತ್ರಕರ್ತರಾಗಿರುವುದರಿಂದ ಉಡುಪಿ ಜಿಲ್ಲೆಯ ಒಬ್ಬ ಪತ್ರಕರ್ತರನ್ನು ಗುರುತಿಸಿ ಯಶೋಮಾಧ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದ್ದಾರೆ. ಹಾಗಾಗಿ ಈ ಬಾರಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರನ್ನು ಆಯ್ಕೆ ಮಾಡಿ ಅವರಿಗೆ ಯಶೋಮಾಧ್ಯಮ-2024 ಪ್ರಶಸ್ತಿ ನೀಡಿ ಗೌರವಿಸುತ್ತಿದ್ದಾರೆ” ಎಂದರು.

“ಸ್ಪಂದನಾ ಸೇವಾ ಸಂಸ್ಥೆಯ ಪದಾಧಿಕಾರಿಗಳಲ್ಲಿ ಅಧ್ಯಕ್ಷ ವೆಂಕಟೇಶ್ ಪೈ, ಕಾರ್ಯದರ್ಶಿ ಸಂತೋಷ್ ಕಾಮತ್, ಖಜಾಂಚಿ ರಜನಿ, ವಿ ಪೈ, ಸಹ ಕಾರ್ಯದರ್ಶಿ ಶಿವಾನಂದ ಕಾಮತ್ ನಾಲ್ವರೂ ಇದೇ ಶಾಲೆಯಲ್ಲಿ ಓದಿದ್ದಾರೆ. ಅವರು ಓದಿದ ಈ ಶಾಲೆಗೆ ಪ್ರತಿ ವರ್ಷ ಉಚಿತವಾಗಿ ನೋಟ್ ಪುಸ್ತಕ ನೀಡುತ್ತಿರುವುದು ಸಮಾಜಮುಖಿ ಕೆಲಸವಾಗಿದೆ. ಮುಂದಿನ ದಿನಗಳಲ್ಲಿ ಈ ಸಂಸ್ಥೆಯು ಇನ್ನೂ ಉತ್ತಮ ಕೆಲಸ ಮಾಡಲಿ” ಎಂದು ಹಾರೈಸಿದರು.

ಯಶೋಮಾಧ್ಯಮ-2024 ಪ್ರಶಸ್ತಿ ಪುರಸ್ಕೃತ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಮಾತನಾಡಿ, “ಯಶೋಮಾಧ್ಯಮ-2024 ಪ್ರಶಸ್ತಿಗೆ ಆಯ್ಕೆ ಮಾಡಿ ಜವಾಬ್ಧಾರಿಯನ್ನು ಹೆಚ್ಚಿಸಿದ್ದಾರೆ” ಎಂದರು.

ಮಣಿಪಾಲ ನರ್ಸಿಂಗ್‌ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಮರಿಯಾ ಪಾಯಸ್ ಮಾತನಾಡಿ, “ಸ್ಪಂದನ ಸೇವಾ ಸಂಸ್ಥೆ ಉತ್ತಮವಾದ ಸಮಾಜ ಸೇವೆಯನ್ನು ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡಲಿ” ಎಂದು ಹಾರೈಸಿದರು.

ಸ್ಪಂದನ ಸೇವಾ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪೈ, ಖಜಾಂಚಿ ರಜನಿ ವಿ ಪೈ ಅವರು ಸಂಸ್ಥೆಯ ಕಾರ್ಯ ಯೋಜನೆಗಳ ಬಗ್ಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಅರಣ್ಯ ಇಲಾಖೆಯಿಂದ ರೈತರ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಪ್ರಕಾಶ್ ಶೆಟ್ಟಿ, ಡಾ ಶೇಷಪ್ಪ ರೈ, ಮುಖ್ಯೋಪಾಧ್ಯಾಯ ಸಂತೋಷ ಶೆಟ್ಟಿ, ಸ್ಪಂದನಾ ಸೇವಾ ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಕಾಮತ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...