ಉಡುಪಿ | ನಟನೆಯ ಕಡೆಗೆ ಇಂದಿನ ಯುವಜನತೆ ಹೆಚ್ಚಿನ ಒಲವು: ರಂಗ ನಿರ್ದೇಶಕ ಪ್ರಸನ್ನ

Date:

ಇಂದಿನ ಯುವ ಸಮುದಾಯ ನಟನೆಯ ಕಡೆಗೆ ಹೆಚ್ಚು ಒಲವನ್ನು ತೋರಿಸುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಇಪ್ಪತ್ತೊಂದನೇ ಶತಮಾನ ಯುವ ಜನಾಂಗದ ಶತಮಾನ, ಯುವಕರಿಗೆ ಸಂವಹನದ ಅಗತ್ಯವಿದೆ. ತನಗೆ ಅನಿಸಿದ್ದನ್ಬು ತಾನು ಮತ್ತಿಬ್ಬರಿಗೆ ಶಾಂತ ರೀತಿಯಲ್ಲಿ ತಿಳಿಸುವ ಅಗತ್ಯತೆ ಇದೆ. ಇಂದು ಸಂವಹನದ ಸಮಸ್ಯೆಯಿಂದ ಜಗಳಗಳು ನಡೆಯುತ್ತಿದೆ ಎಂದು ಪ್ರಸಿದ್ಧ ರಂಗ ನಿರ್ದೇಶಕ ಪ್ರಸನ್ನ ರವರು ಹೇಳಿದರು.

ಅವರು ಉಡುಪಿಯ ಕಲ್ಯಾಣಪುರದ ಮಿಲಾಗ್ರೀಸ್ ಕಾಲೇಜಿನಲ್ಲಿ ಯಕ್ಷ ರಂಗಾಯಣ, ಕಾರ್ಕಳ, ರಂಗಭೂಮಿ ಉಡುಪಿ ವತಿಯಿಂದ ನಡೆಯುತ್ತಿರುವ ಕಾಲೇಜು ವಿದ್ಯಾರ್ಥಿಗಳಿಗೆ ಮೂರು ದಿನದ ರಂಗಭಾಷೆ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ನಾಟಕದ ಭಾಷೆಯನ್ನು ಕಲಿತು ಸಂವಹನ ನಡೆಸುವುದು ಬಹಳ ಮುಖ್ಯ, ಹೃದಯದ ಭಾಷೆಯನ್ನು ಶಾಂತ ಚಿತ್ತ ರೀತಿಯಲ್ಲಿ ತೋರಿಸುವುದೇ ಸಂವಹನ ಮಾಧ್ಯಮ ಅದನ್ನೆ ನಾಟಕ ನಮಗೆ ಕಲಿಸಿಕೊಡುತ್ತದೆ. ಸಂಪೂರ್ಣ ಸಾಮರಸ್ಯ ಇಲ್ಲದ ಕಾಲದಲ್ಲಿ ಸಾಮರಸ್ಯ ಅಗತ್ಯತೆ ಇದೆ. ಅದನ್ನು ರಂಗಭಾಷೆಯಲ್ಲಿ ಪರಿಚಯ ಪಡಿಸುವುದು ಕಾಲದ ಅವಶ್ಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಕ್ಷ ರಂಗಾಯಣ ಕಾರ್ಕಳ ನಿರ್ದೇಶಕರಾದ ಬಿ ಆರ್ ವೆಂಕಟರಮಣ ಐತಾಳ್ ಮಾತನಾಡಿ, ರಂಗಾಯಣ ಸಮಾಜದ ನಡುವೆ ರಂಗ ಚಟುವಟಿಕೆ ಬಗ್ಗೆ ಯುವಕರಲ್ಲಿ ಮತ್ತು ಮಕ್ಕಳಲ್ಲಿ ನಾಟಕದ ಬಗ್ಗೆ ಆಸಕ್ತಿ ಮೂಡಿಸುವ ಮೂಲಕ ರಂಗ ಕಮ್ಮಟ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಯುವ ಜನಾಂಗದ ಮನಸ್ಸು ಕೆಡಿಸುವ ಕೆಲಸ ಮಾಡುತ್ತಿದೆ. ಅದಕ್ಕೆ ಪ್ರತಿಯಾಗಿ ರಂಗ ಭೂಮಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಚಿಂತಾಮಣಿ | ಶ್ರೀಗಂಧ ಅಕ್ರಮ ದಾಸ್ತಾನು; ಇಬ್ಬರ ಬಂಧನ

ಪ್ರಾಂಶುಪಾಲರು ವಿಲ್ಸಂಟ್ ಆಳ್ವಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಟರು ಮತ್ತು ನಿರ್ದೇಶಕರು ಮಂಡ್ಯ ರಮೇಶ್, ಶಶಿಧರ್ ಭಾರಿಘಾಟ್, ರಂಗ ನಿರ್ದೇಶಕಿ ಶ್ವೇತ ರಾಣಿ, ಯಕ್ಷ ರಂಗಾಯಣ ಕಾರ್ಯದರ್ಶಿ ಪೂರ್ಣಿಮಾ, ರಾಜಗೋಪಾಲ್ ಬಲ್ಲಾಳ್, ಬಾಸ್ಕರ್ ರಾವ್ ಕಿದಿಯೂರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಯಪ್ರಕಾಶ್ ಕೆತ್ಲಾಯ ಸ್ವಾಗತಿಸಿ, ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...