ಉಡುಪಿ | ಸಾಂಪ್ರದಾಯಿಕ ಮೀನುಗಾರ ಶಿವಶಂಕರ ಗುಜ್ಜರಬೆಟ್ಟುಗೆ ರಾಷ್ಟ್ರೀಯ ಪುರಸ್ಕಾರ 

Date:

ಏಷಿಯನ್ ಫಿಷರೀಸ್ ಸೊಸೈಟಿ ಇಂಡಿಯನ್ ಬ್ರಾಂಚ್ ಪ್ರಾಯೋಜಿತ ಪ್ರೊಫೆಸರ್ ಡಾ ಎಂ ಸಿ ನಂದೀಶ-2024 ರಾಷ್ಟ್ರೀಯ ಪುರಸ್ಕಾರವು ಸಾಂಪ್ರದಾಯಿಕ ಮೀನುಗಾರ ಶಿವಶಂಕರ್ ಗುಜ್ಜರಬೆಟ್ಟು ಅವರಿಗೆ ಲಭಿಸಿದೆ.

ಇತ್ತೀಚೆಗೆ ಕೋಲ್ಕತ್ತಾದಲ್ಲಿ ನಡೆದ 13ನೇ ಇಂಡಿಯನ್ ಫಿಷರೀಸ್ ಅಂಡ್ ಅಕ್ವಾಕಲ್ಚರ್ ಪೋರಂನಲ್ಲಿ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಶೋತ್ತಮ್ ರೂಪಾಲಾ, ಶಿವಶಂಕರ್ ಅವರಿಗೆ ರಾಷ್ಟ್ರೀಯ ಪುರಸ್ಕಾರವನ್ನು ಪ್ರದಾನ ಮಾಡಿ ಗೌರವಿಸಿದರು. ಈ ಪುರಸ್ಕಾರವು ₹25,000 ಸ್ಮರಣಿಕೆ ಹಾಗೂ ಉಲ್ಲೇಖ ಪತ್ರವನ್ನೊಳಗೊಂಡಿದೆ.

ಉಡುಪಿ ಜಿಲ್ಲೆಯ ಕೆಮ್ಮಣ್ಣು ಗುಜ್ಜರಬೆಟ್ಟು ನಿವಾಸಿಯಾಗಿರುವ ಶಿವಶಂಕರ್ ಸುಮಾರು 14 ವರ್ಷಗಳಿಂದ ಆಳಸಮುದ್ರ ಮೀನುಗಾರಿಕೆ ಹಾಗೂ ಉಡುಪಿ ಜಿಲ್ಲೆಯ ಅಳಿವೆ ಪ್ರದೇಶಗಳಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹವಾಮಾನ ವೈಪರೀತ್ಯಗಳು ಹಾಗೂ ಹೆಚ್ಚು ಸಂಖ್ಯೆಯ ಯಾಂತ್ರೀಕೃತ ದೋಣಿಗಳ ಕಾರ್ಯಾಚರಣೆಯಿಂದ ಮೀನಿನ ಕ್ಷಾಮ ಉಂಟಾದ ಕಾರಣ, ಸುಸ್ಥಿರ ಜೀವನೋಪಾಯಕ್ಕಾಗಿ ಬದಲಿ ಮಾರ್ಗಗಳನ್ನು ಯೋಚಿಸತೊಡಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ಸಮಯಕ್ಕೆ ಕೇಂದ್ರೀಯ ಸಾಗರ ಮೀನುಗಾರಿಕಾ ಸಂಶೋಧನಾ ಸಂಸ್ಥೆಯ ಮಂಗಳೂರು ಪ್ರಾದೇಶಿಕ ಕೇಂದ್ರದ ವಿಜ್ಞಾನಿಗಳು ಗ್ರಾಮದಲ್ಲಿ ಕೈಗೊಂಡ ಪಂಜರ ಮೀನುಕೃಷಿಯ ಪ್ರಾತ್ಯಕ್ಷಿಕೆ ಮತ್ತು ತರಬೇತಿಯ ಮೂಲಕ ಆತ್ಮವಿಶ್ವಾಸವನ್ನು ಪಡೆದ ಇವರು ಪಂಜರ ಮೀನುಕೃಷಿಯನ್ನು ಪ್ರಾರಂಭಿಸಿದರು. ಇವರು ಕರ್ನಾಟಕದಿಂದ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯ ಕಾರ್ಯಕ್ರಮದಡಿ ಪಂಜರ ಮೀನುಕೃಷಿಗೆ ಆಯ್ಕೆಯಾದ 350 ರೈತರಲ್ಲಿ ಒಬ್ಬರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

ಶಿವಶಂಕರ್‌ ಅವರ ಶ್ರಮ ಮತ್ತು ಶ್ರದ್ಧೆಯಿಂದ ಪಂಜರ ಮೀನುಕೃಷಿಯಲ್ಲಿ ಹಲವಾರು ಬದಲಾವಣೆ ಹಾಗೂ ಕೊಡುಗೆಗಳನ್ನು ನೀಡಿದ್ದಾರೆ. ಕರ್ನಾಟಕಲ್ಲಿ ಪ್ರಪ್ರಥಮ ಬಾರಿಗೆ ಪಂಜರ ಮೀನುಕೃಷಿಯಲ್ಲಿ ಇಂಡಿಯನ್ ಪೊಂಪಾನೊ ಮೀನಿನ ತಳಿಯ ನಿರ್ವಹಣೆಯನ್ನು ಯಶಸ್ವಿಯಾಗಿಸಿದ ಮೀನು ಕೃಷಿಕ ಎಂಬ ಹಿರಿಮೆಗೆ ಇವರು ಪಾತ್ರರಾಗಿದ್ದಾರೆ.

ಸಮಗ್ರ ಬಹುಸ್ಥರ ಜಲಕೃಷಿ ಮಾದರಿಯಂತೆ ಪಚ್ಚಿಲೆ ಕೃಷಿಯನ್ನು ಪಂಜರ ಮೀನುಕೃಷಿಯ ಜತೆಗೆ ಅಳವಡಿಸಿಕೊಂಡು ಅಧಿಕ ಇಳುವರಿಯೊಂದಿಗೆ ಅಧಿಕ ಲಾಭವನ್ನು ಗಳಿಸಿ ಇತರ ಮೀನುಕೃಷಿಕರಿಗೆ ಮಾದರಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...