ಉಡುಪಿ | ಮಡಿಕೇರಿಯ ವಿದ್ಯಾರ್ಥಿನಿ ಮಲ್ಪೆಯಲ್ಲಿ ನೀರುಪಾಲು

Date:

ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಶನಿವಾರ ತಡರಾತ್ರಿ ಒಬ್ಬ ವಿದ್ಯಾರ್ಥಿನಿ ನೀರು ಪಾಲಾಗಿದ್ದು, ಸಮುದ್ರದಲ್ಲಿ ಸಿಲುಕಿದ್ದ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಿಸಲಾಗಿದೆ.

ಮೂರು ದಿನಗಳ ಹಿಂದೆ ಈ ವಿದ್ಯಾರ್ಥಿನಿಯರು ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಆದರೆ, ಉಡುಪಿಗೆ ಹೇಗೆ ಬಂದರು, ಸಮುದ್ರಕ್ಕೆ ಹಾರಿದರೇ? ಆಟವಾಡುತ್ತಿದ್ದಾಗ ನೀರುಪಾಲಾದರೇ ಎಂಬ ವಿವರಗಳು ಲಭ್ಯವಾಗಿಲ್ಲ.

ಮಡಿಕೇರಿಯ ಖಾಸಗಿ ಕಾಲೇಜೊಂದರ ಪ್ರಥಮ ಪಿಯಸಿ ವಿದ್ಯಾರ್ಥಿನಿಯರಾದ ಮಾನ್ಯ ಮೃತಪಟ್ಟ ವಿದ್ಯಾರ್ಥಿನಿ. ಸಮುದ್ರದಲ್ಲಿ ಸಿಲುಕಿದ್ದ ಯಶಸ್ವಿನಿ ಎಂಬ ವಿದ್ಯಾರ್ಥಿನಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ ತಡರಾತ್ರಿ ಮಲ್ಪೆ ತೀರದಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗುತ್ತಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಸಮಾಜಸೇವಕ ಈಶ್ವರ ಮಲ್ಪೆ ಅವರು ಘಟನಾ ಸ್ಥಳಕ್ಕೆ ಧಾವಿಸಿದ್ದು, ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನೂ ಮೇಲಕ್ಕೆತ್ತಿದರು. ಆದರೆ, ಅಷ್ಟು ಹೊತ್ತಿಗೆ ಮಾನ್ಯ ಉಸಿರು ಚೆಲ್ಲಿದ್ದಳು. ಮತ್ತೊಬ್ಬಳು ವಿದ್ಯಾರ್ಥಿನಿ ಯಶಸ್ವಿನಿಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿನಿ ಯಶಸ್ವಿನಿ ನೀಡಿದ ಮಾಹಿತಿ ಪ್ರಕಾರ ಅವರಿಬ್ಬರೂ ಮೂರು ದಿನಗಳ ಹಿಂದೆ ಮನೆ ಬಿಟ್ಟು ಬಂದಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾಗಿರುವ ಇವರು ಆಪ್ತ ಗೆಳತಿಯರು. ಇವರಲ್ಲಿ ಯಶಸ್ವಿನಿ ಮನೆ ಬಿಟ್ಟು ಹೊರಟಾಗ ಮಾನ್ಯ ಕೂಡಾ ಆಕೆಗೆ ಜೊತೆಯಲ್ಲಿ ಬಂದಿದ್ದಾಳೆ ಎಂಬುದು ಪ್ರಾಥಮಿಕ ಮಾಹಿತಿ. ಅವರು ನಾಪತ್ತೆಯಾದ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಆರಂಭಗೊಂಡಿತ್ತು. ಅದರ ನಡುವೆಯೇ ಇದೀಗ ದುರಂತ ಸಂಭವಿಸಿದೆ.

ಮಡಿಕೇರಿಯಿಂದ ಮಂಗಳೂರಿಗೆ ಬಂದು ಅಲ್ಲಿಂದ ಮುಂದಿನ ದಾರಿ ಕಾಣದೆ ಮಲ್ಪೆ ತೀರಕ್ಕೆ ಬಂದಿದ್ದಾರೆ. ಅಲ್ಲಿ ಕುಳಿತಿದ್ದಾಗ ಕಡಲ ಅಲೆಗಳಿಗೆ ಸಿಲುಕಿದ್ದಾರೆ. ಒಂದು ಮಾಹಿತಿ ಪ್ರಕಾರ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಈ ಇಬ್ಬರು ಕಾಣೆಯಾಗಿರುವ ದೂರು ದಾಖಲಾಗಿದೆ.

ಇವರಿಬ್ಬರೂ ಅಪ್ರಾಪ್ತರಾಗಿದ್ದು, ಯಾವ ಕಾರಣಕ್ಕಾಗಿ ಮನೆ ಬಿಟ್ಟು ಬಂದಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಮಡಿಕೇರಿ ಭಾಗದಲ್ಲಿ ಮಕ್ಕಳು ಮನೆ ಬಿಟ್ಟು ಹೋಗಿ ಕಣ್ಮರೆಯಾಗುವ ಹಲವಾರು ಘಟನೆಗಳು ನಡೆದಿದ್ದು, ಹೆಚ್ಚಿನವರು ಮರಳಿ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಜುಲೈ 23ರಂದು ನಾಲ್ವರು ಮಕ್ಕಳು ನಾಪತ್ತೆಯಾಗಿದ್ದರು

ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಕಳೆದ ಜುಲೈ 23ರಂದು ಕೂಲಿ ಕಾರ್ಮಿಕ ಕುಟುಂಬದ ನಾಲ್ವರು ಬಾಲಕಿಯರು ನಾಪತ್ತೆಯಾದ ಬಳಿಕ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಇವರಲ್ಲಿ ಇಬ್ಬರನ್ನು ಅವರ ಪೋಷಕರು ಶಾಲೆಗೆ ಹೋಗಲೆಂದು ಸಿದ್ಧಾಪುರ ಬಸ್‌ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ಅವರು ಮರಳಿ ಮನೆಗೆ ಬಂದಿರಲಿಲ್ಲ. ಇನ್ನಿಬ್ಬರು ಮಕ್ಕಳು ಅಜ್ಜಿ ಮನೆಗೆಂದು ಹೋದವರು ಅಲ್ಲಿಗೂ ಹೋಗದೆ ಕಾಣೆಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೊಬ್ಬರಿಗೆ ಬೆಂಬಲ ಬೆಲೆ ನಿಗದಿಪಡಿಸಲು ಒತ್ತಾಯ

ಈ ನಿರ್ದಿಷ್ಟ ಪ್ರಕರಣದಲ್ಲಿ ಈ ಇಬ್ಬರು ವಿದ್ಯಾರ್ಥಿನಿಯರು ಯಾಕೆ ಮನೆ ಬಿಟ್ಟು ಬಂದು ಮಲ್ಪೆಗೆ ಹೋದರು ಎಂಬುದು ತನಿಖೆಯಿಂದ ತಿಳಿದುಬರಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...