ಉಡುಪಿ | ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ

Date:

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ. ಮೂರ್ತಿಯ ಉಳಿದ ಭಾಗವನ್ನು ರಾತ್ರೋ ರಾತ್ರಿ ತೆರವುಗೊಳಿಸುವ ಕಾರ್ಯ ತೆರೆಮರೆಯಲ್ಲಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ತಿಳಿಸಿದರು.

ಉಡುಪಿ ಜಿಲ್ಲೆ ಕಾರ್ಕಳದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು, “ಕಂಚಿನ ನಕಲಿ ಮೂರ್ತಿಯ ಅರ್ಧ ಭಾಗವನ್ನು ಈ ಹಿಂದೆ ತೆರವುಗೊಳಿಸಿ ಪ್ಲಾಸ್ಟಿಕ್ ಹೊದಿಕೆಯಿಂದ ಮುಚ್ಚಲಾಗಿತ್ತು. ಮೂರ್ತಿಯ ಬಗೆಗಿನ ವಿವಾದದಿಂದಾಗಿ ರಾಜ್ಯ ಸರ್ಕಾರ ಸಿಒಡಿ ತನಿಖೆಗೆ ಆದೇಶಿಸಿತ್ತು. ತನಿಖೆಯ ಸಂದರ್ಭದಲ್ಲಿ ಮೂರ್ತಿಯನ್ನು ತೆರವುಗೊಳಿಸುವ ಮೂಲಕ ಉಳಿದ ಸಾಕ್ಷಿಯನ್ನು ಕೂಡಾ ನಾಶಪಡಿಸುವ ಹುನ್ನಾರವಾಗಿದೆ. ನಿರ್ಮಿತಿ ಕೇಂದ್ರದ ಮೂಲಕ ನ್ಯಾಯಾಲಯದ ನಿರ್ದೇಶನ ಇದೆ ಎಂಬ ಸುಳ್ಳು ಮಾಹಿತಿ ನೀಡಿ ಮೂರ್ತಿಯ ತೆರವು ಕಾರ್ಯಾಚರಣೆ ನಡೆಯುತ್ತಿದೆ” ಎಂದರು.

“ಜನವರಿ 9ರಂದು ಕ್ರಿಶ್ ವರ್ಲ್ಡ್‌ನ ಕಷ್ಣ ನಾಯಕ್ ರವರು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಪರಶುರಾಮ ಮೂರ್ತಿಯನ್ನು ತೆಗೆದುಕೊಂಡು ಹೋಗಲು ಪತ್ರವನ್ನು ಬರೆದಿರುತ್ತಾರೆ. ನಿರ್ಮಿತಿ ಕೇಂದ್ರದ ಅಧಿಕಾರಿಗಳು ಪರಶುರಾಮ ಮೂರ್ತಿಯನ್ನು ತೆಗೆದುಕೊಂಡು ಹೋಗಲು ನಮ್ಮ ಆಕ್ಷೆಪಣೆ ಇಲ್ಲವೆಂದು ಹೇಳಿರುತ್ತಾರೆ. ನಾಲ್ಕು ತಿಂಗಳ ಒಳಗಡೆ ಮೂರ್ತಿಯನ್ನು ಸ್ಥಾಪನೆ ಮಾಡದಿದ್ದರೆ ಕೃಷ್ಣ ನಾಯಕ್ ಅವರು ಹಣವನ್ನು ನಿರ್ಮಿತಿ ಕೇಂದ್ರಕ್ಕೆ ವಾಪಸ್‌ ನೀಡಬೇಕೆಂದು ಹೇಳಿರುತ್ತಾರೆ.
ಉಚ್ಛ ನ್ಯಾಯಾಲಯಕ್ಕೆ ಏಪ್ರಿಲ್ 10ರಂದು ರಿಟ್ ಪಿಟಿಷನ್ 11690 ಹಾಕಿ ಮೂರ್ತಿಯನ್ನು ತೆಗೆದುಕೊಂಡು ಹೋಗಲು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ದಾವೆ ಹಾಕಿರುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ಉಡುಪಿ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ 2022 ಅಕ್ಟೋಬರ್ 9ರಂದು ಪರಶುರಾಮ ಮೂರ್ತಿಯ ಅರ್ಧ ಭಾಗವನ್ನು ತೆಗೆದುಕೊಂಡು ಹೋಗಿದ್ದು, ಈ ಬಾರಿ ಜಿಲ್ಲಾಧಿಕಾರಿಯವರನ್ನು ಹೊರತುಪಡಿಸಿ ನೇರವಾಗಿ ಉಚ್ಛ ನ್ಯಾಯಾಲಯಕ್ಕೆ ದುರುದ್ದೇಶದಿಂದ ಹೋಗಿರುತ್ತಾರೆ” ಎಂದು ಆರೋಪಿಸಿದರು.

“ಉಚ್ಛ ನ್ಯಾಯಾಲಯವು ನಿರ್ಮಿತಿ ಕೇಂದ್ರಕ್ಕೆ ಕೃಷ್ಣ ನಾಯಕ ಅವರ ಅರ್ಜಿಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಹೇಳಿತ್ತಾರೆಯೇ ಹೊರತು ಪರಶುರಾಮ ಮೂರ್ತಿಯನ್ನು ತೆಗೆದುಕೊಂಡು ಹೋಗಲು ನಿರ್ದೇಶನ ನೀಡಿರುವುದಿಲ್ಲ. ಕೃಷ್ಣ ನಾಯಕ್ ಅವರ ರಿಟ್ ಪಿಟಿಷನ್‌ಗೆ ಮೆಮೊ 2024ರ ಏಪ್ರಿಲ್‌ 24ರಂದು ಹಾಕಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು ನನ್ನ ಅರ್ಜಿಯನ್ನು ಪರಿಗಣಿಸಿದ ಕಾರಣ ನನ್ನ ದಾವೆಯನ್ನು ವಿಲೇ ಮಾಡಬೇಕೆಂದು ಹೇಳಿರುತ್ತಾರೆ” ಎಂದು ಅವರು ತಿಳಿಸಿದರು.

“ಉಡುಪಿ ಜಿಲ್ಲಾಧಿಕಾರಿ ಸರ್ಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಯವರು ಈ ಪ್ರಸ್ತಾವವನ್ನು ತಿರಸ್ಕರಿಸಿದ್ದರೂ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಅನುಮತಿ ನೀಡಿದ್ದು ಮಾತ್ರವಲ್ಲದೆ‌, ನಿರ್ಮಿತಿ ಕೇಂದ್ರಕ್ಕೆ ವಹಿಸಿಕೊಟ್ಟಿತು. ಈಗ ಮತ್ತೆ ಜಿಲ್ಲಾಧಿಕಾರಿಯವರು ಸಿಒಡಿ ತನಿಖೆ ನಡೆಯುತ್ತಿರುವ ಸಂದರ್ಭ ಮೂರ್ತಿ ತೆರವು ಕಾರ್ಯಾಚರಣೆ ಮತ್ತೆ ಸಾರ್ವಜನಿಕರಲ್ಲಿ ಸಂಶಯ ಮೂಡಿಸಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ : ಮಲ್ಲಿಕಾರ್ಜುನ ಖರ್ಗೆ

“ಪರಶುರಾಮ ನಕಲಿ ಮೂರ್ತಿಯ ಸತ್ಯಾಸತ್ಯತೆ ಪತ್ತೆಹಚ್ಚಿ ಪರಶುರಾಮ ಮೂರ್ತಿಯ ಹೆಸರಿನಲ್ಲಿ ಜನರನ್ನು ವಂಚಿಸಿದ ತಪ್ಪಿತಸ್ತರ ಮೇಲೆ ಕ್ರಮಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಹಾಗೂ ಉಸ್ತುವಾರಿ ಸಚಿವರು ಪೂರ್ಣ ಸಹಕಾರ ನೀಡಲಿದ್ದಾರೆ. ಅಲ್ಲದೆ ಅಸಲಿ ಮೂರ್ತಿ ಪ್ರತಿಷ್ಠಾಪನೆಗೆ ಜವಾಬ್ದಾರಿಯುತವಾಗಿ ಕ್ರಮಕೈಗೊಳ್ಳಲಿದೆ ಎಂದ ಅವರು ಜನರ ಮುಂದೆ ಭಿಕ್ಷೆ ಬೇಡಿಯಾದರೂ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸುತ್ತೇನೆ ಎನ್ನುವ ಶಾಸಕರು ಆ ಕಾರ್ಯವನ್ನು ನಡೆಸಲಿ ಅದಕ್ಕೂ ನಮ್ಮ ಪೂರ್ಣ ಸಹಕಾರ ನೀಡುತ್ತೇವೆ” ಎಂದರು.

ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಜಾರ್ಜ್ ಕ್ಯಾಸ್ಟೆಲಿನೊ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...