ಉಡುಪಿ | ಸುಸಜ್ಜಿತ ಪುನರ್‌ವಸತಿ ಕೇಂದ್ರ ಸ್ಥಾಪನೆಗೆ ಒತ್ತಾಯ

Date:

ರಕ್ಷಣೆ ಮಾಡಿದ ಮಕ್ಕಳು, ಭಿಕ್ಷುಕರು, ಮಾನಸಿಕ ಅಸ್ವಸ್ಥರು ಹಾಗೂ ಅಸಹಾಯಕ ಮಹಿಳೆಯರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಪುನರ್‌ವಸತಿ ಕೇಂದ್ರ ಇಲ್ಲ. ತುರ್ತಾಗಿ ಉಡುಪಿ ಜಿಲ್ಲೆಗೆ ಸುಸಜ್ಜಿತ ಪುನರ್‌ವಸತಿ ಕೇಂದ್ರವನ್ನು ಸರ್ಕಾರ ಮಂಜೂರು ಮಾಡಬೇಕು ಎಂದು ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟ್ ಸಹಯೋಗದಲ್ಲಿ ಸಾಮಾಜಿಕ ಕಾರ್ಯಕರ್ತರೊಂದಿಗೆ ಚರ್ಚಾ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮುಳುಗ ತಜ್ಞ ಈಶ್ವರ ಮಲ್ಪೆ, ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ ಹಾಗೂ ಗಣೇಶ್‌ರಾಜ್ ಸರಳೇಬೆಟ್ಟು ಭಾಗಿಯಾಗಿ ಮಾತನಾಡಿದರು.

ಚರ್ಚೆಯ ವೇಳೆ ಮಾತನಾಡಿದ ನಿತ್ಯಾನಂದ ಒಳಕಾಡು, “ನಾವು ಅನಾಥ ಮಕ್ಕಳನ್ನು ರಕ್ಷಣೆ ಮಾಡುತ್ತೇವೆ. ಆದರೆ, ಸಂಬಂಧಪಟ್ಟವರು ಕೌನ್ಸಿಲಿಂಗ್ ಮಾಡಿ ಅವರನ್ನು ಬಿಟ್ಟುಬಿಡುತ್ತಾರೆ. ಯಾಕೆಂದರೆ ಇಲ್ಲಿ ಅವರಿಗೆ ಉಳಿದುಕೊಳ್ಳಲು ಯಾವುದೇ ವ್ಯವಸ್ಥೆ ಇಲ್ಲ. ಅದೇ ರೀತಿ ಭಿಕ್ಷುಕರು, ಮಾನಸಿಕ ಅಸ್ವಸ್ಥರಿಗೆ ಸfಕಾರಿ ಮಟ್ಟದಲ್ಲಿ ಪುನರ್ ವಸತಿ ಕೇಂದ್ರದ ವ್ಯವಸ್ಥೆ ಇಲ್ಲ. ಇದರಿಂದ ಸಾಮಾಜಿಕ ಕಾರ್ಯಕರ್ತರು ಪರದಾಡುವಂತಾಗಿದೆ. ಕೆಲವು ವರ್ಷಗಳ ಹಿಂದೆ ನಾವು ಜಿಲ್ಲಾಧಿಕಾರಿಗೆ ಮನವಿ ಕೊಟ್ಟರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶು ಶೆಟ್ಟಿ ಅಂಬಲಪಾಡಿ ಮಾತನಾಡಿ, “ಈ ವರ್ಷ ಮಾನಸಿಕ ಸ್ಥಿಮಿತ ಕಳೆದುಕೊಂಡು ತಿರುಗಾಡುತ್ತಿದ್ದ ಮಹಿಳೆಯರನ್ನು ರಕ್ಷಣೆ ಮಾಡಿದ್ದೇವೆ. ಆದರೆ ಅವರಿಗೆ ಪುನರ್‌ವಸತಿ ಕಲ್ಪಿಸಲು ನಮ್ಮಲ್ಲಿ ಯಾವುದೇ ಸೌಲಭ್ಯ ಇಲ್ಲ. ಇವರನ್ನು ಚಿಕಿತ್ಸೆಗಾಗಿ ಹೊರ ಜಿಲ್ಲೆಗೆ ಕರೆದುಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ನಮ್ಮ ಮನವಿಗೆ ಹಿರಿಯ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಸಾಕಷ್ಟು ಮಂದಿಯ ಪ್ರಾಣ ಪಕ್ಷಿ ಹಾರಿ ಹೋಗಿದೆ. ಎಚ್‌ಐವಿ ಸೋಂಕಿತ ಮಹಿಳೆಯರು ಬೀದಿಬದಿ ತಿರುಗಾಡುತ್ತಿದ್ದರೂ ಅವರ ರಕ್ಷಣೆಗೆ ಯಾವುದೇ ವ್ಯವಸ್ಥೆ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಜೀವರಕ್ಷಕ ಈಶ್ವರ ಮಲ್ಪೆ, “ಸರ್ಕಾರ ನಮಗೆ ಉಡುಪಿಯಲ್ಲಿ ಐದು ಎಕರೆ ಜಾಗ ನೀಡಿದರೆ ನಾವೇ ಪುನರ್‌ವಸತಿ ಕೇಂದ್ರವನ್ನು ಸ್ಥಾಪಿಸುವ ಜವಾಬ್ದಾರಿ ವಹಿಸಿಕೊಳ್ಳುತ್ತೇವೆ” ಎಂದರು.

“ಮಲ್ಪೆ ಬಂದರಿಂದ ಶೇ.50ರಷ್ಟು ಹೂಳು ತೆಗೆದಿದ್ದು, ಇದರಿಂದ ನೀರಿಗೆ ಬಿದ್ದು ಸಾಯುವವರ ಸಂಖ್ಯೆ ಕಡಿಮೆಯಾಗಿದೆ. ಆದರೂ, ಉಳಿದ ಶೇ.50ರಷ್ಟು ಹೂಳನ್ನು ಸರ್ಕಾರ ಕೂಡಲೇ ತೆಗೆಯಬೇಕು. ಮಲ್ಪೆ ಬೀಚ್ನಲ್ಲಿ ಕಸದ ರಾಶಿ ತುಂಬಿ ಹೋಗಿದೆ. 50-60ಟನ್ ಕಸ ಸಮುದ್ರದಿಂದ ತೀರಕ್ಕೆ ಬಂದು ಬಿದ್ದಿದೆ” ಎಂದು ತಿಳಿಸಿದರು.

“ಅಪಘಾತ ಹಾಗೂ ನೀರಿಗೆ ಬಿದ್ದು ಸಾಯುವ ಪ್ರಕರಣಗಳಲ್ಲಿ ಬಹುತೇಕ ಮಂದಿ ಮದ್ಯ ಅಥವಾ ಮಾದಕ ದ್ರವ್ಯ ಸೇವೆನೆ ಮಾಡಿರುತ್ತಾರೆ. ಆದ್ದರಿಂದ ಪೊಲೀಸ್ ಇಲಾಖೆಯು ಮಾದಕ ದ್ರವ್ಯ ಜಾಲದ ಮೂಲವನ್ನು ಪತ್ತೆ ಹಚ್ಚಿ, ಕ್ರಮ ತೆಗೆದುಕೊಳ್ಳಬೇಕು. ಅದೇ ರೀತಿ ಶಿಕ್ಷಣ ಸಂಸ್ಥೆಗಳು ಹಾಗೂ ಪೋಷಕರು ಕೂಡ ಈ ಕುರಿತು ಎಚ್ಚರ ವಹಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?: ಉಡುಪಿ | ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಅವಕಾಶ ನೀಡಬಾರದೆಂದು ಪೊಲೀಸ್ ಉಪನಿರೀಕ್ಷರಿಗೆ ಮನವಿ

ಗಣೇಶ್‌ರಾಜ್ ಸರಳೇಬೆಟ್ಟು ಮಾತನಾಡಿ, “ಹೆಚ್ಚು ಬೆಂಕಿ ಅನಾಹುತಗಳು ಸಂಭವಿಸುವ ಮಣಿಪಾಲಕ್ಕೆ ಅಗ್ನಿಶಾಮಕ ದಳ ಠಾಣೆ ಮಂಜೂರು ಮಾಡಬೇಕು. ಉಡುಪಿ ಜಿಲ್ಲೆಗೆ ಸುಸಜ್ಜಿತ ವಿದ್ಯುತ್ ಚಿತಗಾರ ಬೇಕಾಗಿದೆ. ಪ್ರವಾಸೋದ್ಯಮ ದೃಷ್ಠಿಯಿಂದ ಮಣಿಪಾಲದಲ್ಲಿರುವ ಅರ್ಬಿ ಪಾಲ್ಸ್ ಅಭಿವೃದ್ಧಿ ಪಡಿಸಬೇಕು. ಪರ್ಕಳದ ರಾಷ್ಟ್ರೀಯ ಹೆದ್ದಾರಿ ಕಾಮ ಗಾರಿ ಕೂಡಲೇ ಪೂರ್ಣಗೊಳಿಸಬೇಕು. ಕಾಡು ಪ್ರಾಣಿಗಳ ಹಾವಳಿ ತಡೆಗೆ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮವನ್ನು ಸಂಸ್ಕೃತಿ ಸಿರಿ ಟ್ರಸ್ಟ್‌ನ ಆಡಳಿತ ವಿಶ್ವಸ್ಥ ಹಾಗೂ ವಿಮರ್ಶಕ ಪ್ರೊ.ಮುಳೀಧರ ಉಪಾಧ್ಯ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಪತ್ರಕರ್ತ ಶಶಿಧರ ಮಾಸ್ತಿಬೈಲು ಸಾಮಾಜಿಕ ಕಾರ್ಯಕರ್ತರನ್ನು ಪರಿಚಯಿಸಿ ದರು. ರಜತ ಮಹೋತ್ಸವ ಸಮಿತಿ ಸಂಚಾಲಕ ಮುಹಮ್ಮದ್ ಶರೀಫ್ ವಂದಿಸಿದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಮೈಕಲ್ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...