ಉಡುಪಿ | ಮಹಿಳೆಯರನ್ನು ಮಾತೆ ಎಂದು ಸಂಭೋಧಿಸುವ ಬಿಜೆಪಿಗರ ನಿಜ ಬಣ್ಣ ಪದೇ ಪದೇ ಬಯಲಾಗುತ್ತಿದೆ

Date:

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಧಾನ ಪರಿಷತ್ತಿನ ವಿಪಕ್ಷ ಬಿಜೆಪಿಯ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡು ಕೂಡಲೇ ಬಂಧಿಸುವಂತೆ ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ರಾತ್ರಿಯಿಡೀ ರಾಜ್ಯ ಸರಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದು ಬಿಜೆಪಿಯ ಎನ್.ರವಿಕುಮಾರ್ ರವರು ಹೇಳಿಕೆ ನೀಡಿರುವ ದ್ವಂದ್ವ ಮಾತುಗಳು ಆಶ್ಚರ್ಯ ಹಾಗೂ ಅಸಹನೀಯವಾಗಿದೆ. ಮಾತೆತ್ತಿದರೆ ಮಹಿಳೆಯರನ್ನು ಮಾತೆ, ತಾಯಿ ಎಂದು ಸಂಭೋಧಿಸುವ ಬಿಜೆಪಿಗರು ನಿಜ ಬಣ್ಣ ಪದೇ ಪದೇ ಬಯಲಾಗುತ್ತಿದೆ.

ಮಹಿಳೆಯರನ್ನು ಕೆಟ್ಟ ದೃಷ್ಠಿಯಲ್ಲಿ ನೋಡುವುದರಲ್ಲಿ ಬಿಜೆಪಿಗರು ಬಲು ನಿಸ್ಸೀಮರು ಎನ್ನುವುದಕ್ಕೆ ಈ ಹಿಂದೆ ರಾಜ್ಯದಲ್ಲೇ ಬಿಜೆಪಿ ನಾಯಕರು ಮಹಿಳೆಯರ ಮೇಲೆ ದೌರ್ಜನ್ಯವೆಸಗಿರುವುದು ಹಲವಾರು ಸಾಕ್ಷಿಗಳು ಕಣ್ಣ ಮುಂದೆ ಇವೆ. ವಿಧಾನ ಪರಿಷತ್ತಿನ ವಿಪಕ್ಷ ಬಿಜೆಪಿಯ ಮುಖ್ಯ ಸಚೇತಕ ಎನ್.ರವಿಕುಮಾರ್ ಇತ್ತೀಚಿಗೆ ಕಲಬುರಗಿ ಜಿಲ್ಲಾಧಿಕಾರಿ ಕುರಿತು ವಿವಾದಿತ ಮಾತುಗಳನ್ನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದಲ್ಲದೆ ಮತ್ತೆ ಹೈಕೋರ್ಟ್ ಕೂಡ ಛೀಮಾರಿ ಹಾಕಿ ಜಿಲ್ಲಾಧಿಕಾರಿಯವರಲ್ಲಿ ಕ್ಷಮೆ ಕೇಳಲು ಹೇಳಿದ್ದು ಮತ್ತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧವೂ ಅವಹೇಳನಕಾರಿಯಾಗಿ ಮಾತನಾಡಿರುವುದು ಬಿಜೆಪಿಗರ ನಿಜ ಸಂಸ್ಕೃತಿ ಏನು ಎನ್ನುವುದನ್ನು ತೋರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಉನ್ನತ ಸ್ಥಾನದಲ್ಲಿರುವ ಮಹಿಳೆಯನ್ನು ಇಂತಹ ಕೀಳು ಮಟ್ಟದಲ್ಲಿ ಮಾತನಾಡಿದರೂ ಕೂಡ ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಆಗಲಿ, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಆಗಲಿ ಯಾರೂ ಕೂಡ ರವಿಕುಮಾರ್ ವಿರುದ್ದ ಮಾತನಾಡುವ ಅಥವಾ ಅವರ ಮಾತನ್ನು ತಪ್ಪು ಎಂದು ಹೇಳುವ ಕನಿಷ್ಠ ಸೌಜನ್ಯ ಕೂಡ ಇಲ್ಲದಿರುವುದು ನಾಚೀಕೆಗೇಡಿನ ಸಂಗತಿಯಾಗಿದೆ. ಇಂತಹ ಅವಹೇಳನಕಾರಿಯಾಗಿ ಮಾತನಾಡಿರುವ ಎನ್ ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಬೇಕು ಮತ್ತು ಅವರನ್ನು ಬಂಧಿಸುವಂತೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...