ಉಡುಪಿ | ಯುವ ಜನಾಂಗದ ಭವಿಷ್ಯ ರೂಪಿಸಲು ಪೋಷಕರು ಮಾದರಿಯಾಗಲಿ — ವಲಿ ರಹ್ಮಾನಿ

Date:

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ ಭಾನುವಾರದಂದು ಉಡುಪಿ ಮಣಿಪಾಲ್ ಇನ್ ಹೋಟೆಲ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಭಾರತದ ಭವಿಷ್ಯದ ಯುವ ನಾಯಕ ಹಾಗೂ ಸಮಾಜಸೇವಕ ವಲಿ ರಹ್ಮಾನಿ ಅವರು ಯುವಕರಿಗೂ, ಪೋಷಕರಿಗೂ ಪ್ರೇರಣಾದಾಯಕ ಸಂದೇಶ ನೀಡಿದರು.

ಈ ಕಾರ್ಯಕ್ರಮದಲ್ಲಿ ಸುಮಾರು 350 ವಿದ್ಯಾರ್ಥಿಗಳು ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿದರು. ವಲಿ ರಹ್ಮಾನಿ ತಮ್ಮ ಭಾಷಣವನ್ನು ಉತ್ಸಾಹಭರಿತ ಶೈಲಿಯಲ್ಲಿ, ಪ್ರಶ್ನೋತ್ತರ, ಪಿಪಿಟಿ ಪ್ರದರ್ಶನ ಹಾಗೂ ವಿವಿಧ ಚಟುವಟಿಕೆಗಳ ಮೂಲಕ ನಿರ್ವಹಿಸಿ, ಶ್ರೋತೃಗಳ ಮನಗೆದ್ದರು.

1006653684

ಅವರು ಯುವಕರಿಗೆ ತಮ್ಮ ಮಾನಸಿಕ, ಬೌದ್ಧಿಕ, ನೈತಿಕ ಮತ್ತು ಶೈಕ್ಷಣಿಕ ಸಾಮರ್ಥ್ಯವನ್ನು ಬೆಳೆಸಿ, ಶಿಸ್ತಿನ, ಕೌಶಲ್ಯಸಂಪನ್ನ ಹಾಗೂ ಜವಾಬ್ದಾರಿಯುತ ವ್ಯಕ್ತಿಗಳಾಗಿ ರೂಪುಗೊಳ್ಳುವಂತೆ ಕರೆ ನೀಡಿದರು. “ಸಮಯವನ್ನು ವ್ಯರ್ಥ ಮಾಡಬೇಡಿ, ಕಿಶೋರ ವಯಸ್ಸನ್ನು ಸುರಕ್ಷಿತ ಮತ್ತು ಫಲಪ್ರದವಾಗಿ ಬಳಸಿ” ಎಂದು ಅವರು ಒತ್ತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜೆಯ ನಡೆದ ಕಾರ್ಯಕ್ರಮದಲ್ಲಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದ ವಲಿ ರಹ್ಮಾನಿ “ಮಕ್ಕಳು ಪೋಷಕರಿಗೆ ಅಮಾನತ್‌. ಅವರ ದೈಹಿಕ, ಬೌದ್ಧಿಕ, ನೈತಿಕ ಮತ್ತು ಧಾರ್ಮಿಕ ಹಿತವನ್ನು ಪ್ರಾಮುಖ್ಯತೆಯಿಂದ ನೋಡಿಕೊಳ್ಳಬೇಕು. ಮನೆ ಒಂದು ಶಾಲೆಯಾಗಲಿ, ಪೋಷಕರು ಗುರುಗಳಾಗಲಿ, ಮಕ್ಕಳ ಮೊದಲ ಪಾಠ ಮನೆಯಲ್ಲಿಯೇ ಪ್ರಾರಂಭವಾಗಲಿ” ಎಂದು ಹೇಳಿದರು.

ಈ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ (ರಿ) ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ಇರ್ಷಾದ್ ನೇಜಾರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

1006653844 1


ಜಿಲ್ಲಾಧ್ಯಕ್ಷ ಮೊಹಮ್ಮದ್ ಮೌಲಾ ಸ್ವಾಗತಿಸಿದರು, ಕಾರ್ಯಕ್ರಮದ ಸಂಚಾಲಕರಾದ ಶೇಖ್ ಅಬ್ದುಲ್ ಲತೀಫ್ ಮದನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಕಟಪೂರ್ವ ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಒಕ್ಕೂಟದ ಉಡುಪಿ ತಾಲೂಕು ಅಧ್ಯಕ್ಷರಾದ ಇರ್ಷಾದ್ ನೇಜಾರ್ ಧನ್ಯವಾದ ಸಲ್ಲಿಸಿದರು.

1006653842
1006653789 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...