ಉಡುಪಿ | ಲಿಂಗ ಅಸಮಾನತೆ ಭೇದಿಸಲು ಮಹಿಳೆಯರು ರಾಜಕೀಯಕ್ಕೆ ಬರಬೇಕು: ಡಾ. ವೆನ್ನೆಲ ಗದ್ದರ್

Date:

ಸಮಾಜದಲ್ಲಿರುವ ಲಿಂಗ ಅಸಮಾನತೆಯನ್ನು ಭೇದಿಸಲು ಮಹಿಳೆಯರು ರಾಜಕೀಯವಾಗಿ ಮುಂದೆ ಬರುವುದು ತುಂಬಾ ಅಗತ್ಯವಾಗಿದೆ. ಆದರೆ, ರಾಜಕೀಯದಲ್ಲಿ ಮಹಿಳೆಯರ ಪ್ರಯಾಣ ಸುಲಭವಲ್ಲ ಮತ್ತು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯ ಮನೋಭಾವ ಮತ್ತು ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಂಶಗಳು ಕೂಡ ಸಮಸ್ಯೆಯಾಗಿದೆ ಎಂದು ಸಿಕಂದರಾಬಾದ್‌ನ ಸಾಹಿತಿ, ಹೋರಾಟಗಾರ್ತಿ ಡಾ. ಜಿ.ವಿ.ವೆನ್ನೆಲ ಗದ್ದ‌ರ್ ಹೇಳಿದರು.

ಉಡುಪಿಯ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ, ಉಡುಪಿ ಬಾಸೆಲ್ ಮಿಷನ್ ಚರ್ಚ್ ಹಾಲ್‌ನ ರತ್ನಾ ಅಮ್ಮಣ್ಣ ವೇದಿಕೆಯಲ್ಲಿ ಶನಿವಾರ (ಮಾ.9) ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಮಾಜ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನಮಾನವನ್ನು ನೀಡಿದೆ. ಆದರೆ, ಮಹಿಳೆಯರೇ ತಮ್ಮ ಸ್ಥಾನಮಾನ ಏರಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನವನ್ನು ತಮ್ಮ ಮನೆ, ಹಳ್ಳಿ, ಗುಡ್ಡಗಾಡು, ನಗರಗಳಲ್ಲಿ ಮಾಡಬೇಕು. ಪುರುಷ ಪ್ರಧಾನ ಸಮಾಜದಲ್ಲಿ ಇಂದಿರಾ ಗಾಂಧಿಯಿಂದ ಹಿಡಿದು ಮಮತಾ ಬ್ಯಾನರ್ಜಿಯವರೆಗೆ ಹಲವು ಮಂದಿ ಸಾಧನೆಗೆ ಲಿಂಗ ಅಡ್ಡಿಯಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಅವರು ಕೂಡ ಜೀವಪರ, ಸಮಾನತೆಗಾಗಿ ಅತ್ಯುತ್ತಮ ನಾಯಕತ್ವನ್ನು ನೀಡಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಮುಂದೆ ಇರುವ ನಾಯಕತ್ವದ ಮಾದರಿಗಳು ಪಿತೃ ಪ್ರಧಾನ ನೀತಿಯಿಂದ ಕೂಡಿದೆ. ಅದನ್ನು ಲಿಂಗಸೂಕ್ಷತೆಯಿಂದ ನೋಡಿ ಹೊಸ ದೃಷ್ಟಿಯನ್ನು ಇಟ್ಟುಕೊಳ್ಳಬೇಕಾಗುತ್ತದೆ. ಲಿಂಗ ಸಮಾನತೆ, ಸಾಮೂಹಿಕ ನಾಯತ್ವದ ಪರಿಕಲ್ಪನೆಯನ್ನು ನಾವು ಹೆಚ್ಚಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಒಬ್ಬ ಮಹಿಳೆ ಸಾವಿರ ಆಯುಧಗಳಿಗೆ ಸಮಾನ. ಸ್ವಸಹಾಯ ಗುಂಪುಗಳು, ಸಂಘಟನೆಗಳು ಮಹಿಳೆಯರನ್ನು ತಳಮಟ್ಟದಲ್ಲಿಯೇ ಆರ್ಥಿಕ ಸಬಲಗೊಳಿಸಿದೆ. ಮಹಿಳೆಯರ ಕುರಿತ ಸಮಾಜದ ದೃಷ್ಟಿಕೋನವನ್ನು ಬದಲಾಯಿಸಲು ನಾವೆಲ್ಲ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅಂಬೇಡ್ಕ‌ರ್ ಕೊಟ್ಟ ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಮಾರ್ಗದಲ್ಲಿ ನಾವೆಲ್ಲ ಸಾಗಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆಯನ್ನು ವರೋನಿಕಾ ಕರ್ನೆಲಿಯೋ ವಹಿಸಿದ್ದರು. ಅಖಿಲಾ ವಿದ್ಯಾಸಂದ್ರ ಉಡುಪಿ ಘೋಷಣೆ ಮಂಡಿಸಿದರು. ಮೇರಿ ಡಿಸೋಜ ಭಾರತ ಸಂವಿಧಾನ ಪೀಠಿಕೆ ವಾಚಿಸಿದರು. ಅಪ್ಪಿ ಮೂಡುಬೆಳ್ಳಿ ಪಾಡ್ಡಾನ ಹಾಡು ಹಾಡಿದರು.

ವೇದಿಕೆಯಲ್ಲಿ ಗ್ರೇಸಿ ಕುವೆಲ್ಲೊ, ಕುಲ್ಬುಮ್ ಅಬೂಬಕರ್, ಸರೋಜಾ, ರೆಹನಾ ಸುಲ್ತಾನಾ ಬೈಂದೂರು, ಮಂಜುನಾಥ ಗಿಳಿಯಾರು, ಸಂತೋಷ್ ಕರ್ನೆಲಿಯೋ, ನಾಗಮ್ಮ ಬೈಂದೂರು, ಸಂತೋಷ್ ಬಲ್ಲಾಳ್, ಸಂಜೀವ ವಂಡ್ರೆ, ಶಾಂತಿ ನರೋನ್ಹಾ, ಶ್ರೀಕುಮಾರ್, ಸುಮಿತ್ರಾ ಸುಧಾಕರ್, ದೇವಿಕಾ ನಾಗೇಶ್, ಸಲೀಮ್ ಖಾನ್ ಕೊಪ್ಪಳ, ಪ್ರಭಾವತಿ, ಚಂದ್ರಮ್ಮ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...