ಉಡುಪಿ | ಕಾಮಗಾರಿ ವಿಳಂಬ; ಮೋದಿ ಮುಖವಾಡ ಧರಿಸಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ

Date:

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಕಲ್ಸಂಕ ಜಂಕ್ಷನ್‌ನಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಅಮೃತ್ ಶೆಣೈ ಹಾಗೂ ಸಾಮಾಜಿಕ ಕಾರ್ಯಕರ್ತ ಅನ್ಸಾರ್ ಅಹ್ಮದ್ ಕೇಶ ಮುಂಡನ ಮಾಡಿಸಿದರು. ಬಳಿಕ ಎಲ್ಲ ಪ್ರತಿಭಟನಕಾರರ ಕಿವಿ ಮೇಲೆ ಹೂವನ್ನು ಇಡಲಾಯಿತು. ಭಿಕ್ಷುಕನ ವೇಷ ಧರಿಸಿದ್ದ ಅನ್ಸಾರ್ ಅಹ್ಮದ್ ಕೈಯಲ್ಲಿದ್ದ ತಟ್ಟೆಗೆ ಹಣ ಹಾಕುವ ಮೂಲಕ ಮೆರವಣಿಗೆಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಚಾಲನೆ ನೀಡಿದರು.

ಕಲ್ಸಂಕದಿಂದ ಹೊರಟ ಮೆರವಣಿಗೆ ಕಡಿಯಾಳಿ, ಕುಂಜಿಬೆಟ್ಟು ಮಾರ್ಗವಾಗಿ ಇಂದ್ರಾಳಿ ಸೇತುವೆವರೆಗೆ ಸಾಗಿತು. ಮೆರವಣಿಗೆಯುದ್ದಕ್ಕೂ ಸೇತುವೆ ನಿರ್ಮಾಣಕ್ಕಾಗಿ ಭಿಕ್ಷಾಟನೆಯ ಮೂಲಕ ಹಣವನ್ನು ಸಂಗ್ರಹಿಸಲಾಯಿತು. ಇಂದ್ರಾಳಿಯಲ್ಲಿ ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಸರ್ಕಾರದ ವೈಫಲ್ಯವನ್ನು ವಿರೋಧಿಸಲಾಯಿತು. ನಂತರ ಸೇತುವೆ ಉದ್ಘಾಟನೆಗೆ ಮುಖವಾಡ ಧರಿಸಿದ ಪ್ರಧಾನಿ ನರೇಂದ್ರ ಮೋದಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದ್ರಾಳಿಗೆ ಆಗಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮೆರವಣಿಗೆಯಲ್ಲಿ ಅನ್ಸಾರ್ ಅಹ್ಮದ್ ಸಂಗ್ರಹಿಸಿದ ಹಣವನ್ನು ಮೋದಿಯವರಿಗೆ ನೀಡುವ ಮೂಲಕ ಕೇಂದ್ರ ಸರ್ಕಾರದ ವಿಳಂಬ ನೀತಿಯನ್ನು ಅಣಕಿಸಲಾಯಿತು. ನಂತರ‌ ಸೇತುವೆಯನ್ನು ಉದ್ಘಾಟಿಸುವ ಮೂಲಕ ಮುಖವಾಡದ ಮೋದಿ ಏಪ್ರಿಲ್ ಫೂಲ್ ಮಾಡಿದರು. ಕಳೆದ ಏಳೆಂಟು ವರ್ಷಗಳಿಂದ ಉಡುಪಿ ಜನತೆಯನ್ನು ಸಂಸದರು ಮೂರ್ಖರನ್ನಾಗಿ ಮಾಡಿರುವ ಬಗ್ಗೆ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪ್ರತಿಭಟನಕಾರರು ಕೆಲವೊತ್ತು ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಕೇಂದ್ರ ಸರ್ಕಾರ ಹಾಗೂ ಸಂಸದರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಭ್ರಷ್ಟಾಚಾರಿಗಳೇ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವುದು ಹಾಸ್ಯಾಸ್ಪದ – ನಾಗೇಂದ್ರ ಪುತ್ರನ್ ಕೋಟ

ಸಭೆಯಲ್ಲಿ ಮಾಜಿ ಸಚಿವ‌ರಾದ ಜಯಪ್ರಕಾಶ್ ಹೆಗ್ಡೆ, ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಸಿಪಿಎಂ ಮುಖಂಡ ಬಾಲಕೃಷ್ಣ ಶೆಟ್ಟಿ, ವೆಲ್‌ಫೇರ್ ಪಾರ್ಟಿಯ ಉಡುಪಿ ಜಿಲ್ಲಾಧ್ಯಕ್ಷ ಇದ್ರಿಸ್ ಹೂಡೆ, ಸಮಿತಿಯ ಅಧ್ಯಕ್ಷ ಕೀರ್ತಿ ಶೆಟ್ಟಿ, ಪ್ರಧಾನ ಸಂಚಾಲಕ ಅಮೃತ್ ಶೆಣೈ, ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ರಮೇಶ್ ಕಾಂಚನ್, ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಹರಿಪ್ರಸಾದ್ ರೈ, ಮುಹಮ್ಮದ್ ಮೌಲಾ, ಸುರೇಶ್ ಕಲ್ಲಾಗರ್, ಎಂ ಎ ಗಫೂರ್, ಮಂಜುಳಾ ನಾಯಕ್, ಪ್ರೊ.ಸುರೇಂದ್ರನಾಥ್ ಕೊಕ್ಕರ್ಣೆ, ಉದ್ಯಾವರ ನಾಗೇಶ್ ಕುಮಾರ್, ದಿನೇಶ್ ಮೊಳಹಳ್ಳಿ, ಇಸ್ಮಾಯಿಲ್ ಆತ್ರಾಡಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...