ಉಡುಪಿ | ಯುವ ಜನತೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್

Date:

ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್‌ಎಸ್‌ಎಸ್‌ನಂತಹ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಕರೆ ನೀಡಿದರು.

ಅವರು ಇಂದು ಉಡುಪಿ ಜಿಲ್ಲೆಯ ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇವರ ವತಿಯಿಂದ ಆಯೋಜಿಸಿದ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿಗಳು ಪಠ್ಯದ ಚಟುವಟಿಕೆಗಳ ಜೊತೆಗೆ ಇತರೆ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರೊಂದಿಗೆ ಸಮುದಾಯದ ಸಮಸ್ಯೆಗಳನ್ನು ಅರಿತು ಸಹಾಯ ಮಾಡಲು ಮುಂದಾಗಬೇಕು. ಸಮಸ್ಯೆಗಳನ್ನು ಪರಿಹರಿಸುವುದರಿಂದ ಕೌಶಲ್ಯ ಹಾಗೂ ಜ್ಞಾನ ಬೆಳೆಯುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಜನರು ಸ್ವಯಂ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂಬುದು ಮಹಾತ್ಮಾ ಗಾಂಧೀಜಿಯವರ ಆಶಯವಾಗಿತ್ತು. ಸರಕಾರ ಶಿಕ್ಷಣದೊಂದಿಗೆ ಸೇವಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಎನ್‌ಎಸ್‌ಎಸ್‌ ಶಿಬಿರಗಳನ್ನು ಆಯೋಜಿಸಿದೆ. ಇದು ವಿದ್ಯಾರ್ಥಿಗಳ ಜೀವನದಲ್ಲಿ ನಾಯಕತ್ವ, ಶಿಸ್ತಿನ ಜತೆಗೆ ಸಾರ್ವತ್ರಿಕ ಪ್ರಜ್ಞೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಮಾತನಾಡಿ, ಶಿಬಿರಗಳು ಅವಕಾಶಗಳ ವೇದಿಕೆಯಾಗಿದೆ. ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡ ವಿದ್ಯಾರ್ಥಿಗಳು ಸಮಾಜ ಸೇವಕರಾಗಿ ಪರಿವರ್ತನೆಗೊಂಡು ಉತ್ತಮ ಕಾರ್ಯಗಳನ್ನು ಮಾಡುವುದರೊಂದಿಗೆ ಸಮಾಜದ ಏಳಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಎಂದರು.

ಯುವ ಶಕ್ತಿ ಸಾಮರ್ಥ್ಯವನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳುವ ಮೂಲಕ ಯುವಜನರಲ್ಲಿ ಸಮುದಾಯ ಸೇವೆಯ ಉತ್ಸಾಹವನ್ನು ಮೂಡಿಸುವುದರೊಂದಿಗೆ ಅರ್ಥಪೂರ್ಣವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತದೆ. ಸೇವೆಯಲ್ಲಿ ಸ್ವಾರ್ಥವಿರಬಾರದು. ಸಮಯಪ್ರಜ್ಞೆಯನ್ನು ಮೈಗೂಡಿಸಿಕೊಂಡಾಗ ಯಶಸ್ಸು ನಮ್ಮದಾಗುತ್ತದೆ ಎಂದರು.

ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಮುಖ್ಯೋಪಾಧ್ಯಾಯಿನಿ ಸಂಧ್ಯಾ ಮಾತನಾಡಿ, ಎನ್.ಎಸ್.ಎಸ್ ಶಿಬಿರದಲ್ಲಿ ವಿದ್ಯಾರ್ಥಿನಿಯರು ಪಡೆದ ಅನುಭವಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಶಿಬಿರಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಹಾಗೂ ಉತ್ತಮವಾಗಿ ಶಿಬಿರದಲ್ಲಿ ಭಾಗವಹಿಸಿದವರಿಗೆ ಬಹುಮಾನವನ್ನು ನೀಡಲಾಯಿತು.

ಇದನ್ನು ಓದಿದ್ದೀರಾ? ದಾವಣಗೆರೆ | ವಿಚಿತ್ರ ಪ್ರಕರಣ: ತಾನೇ ಕಳವು ಮಾಡಿ ದೂರು ನೀಡಿದ್ದ ಯುವತಿ ಈಗ ಪೊಲೀಸರ ಅತಿಥಿ!

ಕಾಲೇಜಿನ ಶಿಕ್ಷಣ ಸೇವಾ ಸಮಿತಿಯ ಖಜಾಂಜಿ ಶೇಖರ್ ಕೋಟ್ಯಾನ್, ಮಲ್ಪೆಯ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯ ಸದಾನಂದ ಸಾಲ್ಯಾನ್, ಖಜಾಂಜಿ ಚಂದ್ರಶೇಖರ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಯಾನಂದ, ಶಿಕ್ಷಣ ತಜ್ಞ ವಿಶ್ವನಾಥ ಬಾಯರಿ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವರ್ಗೀಸ್ ಪಿ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ) ವಿಭಾಗದ ಮುಖ್ಯೋಪಾಧ್ಯಾಯಿನಿ ಇಂದಿರಾ, ಉಪನ್ಯಾಸಕರುಗಳು, ಶಿಬಿರದ ನಾಯಕಿ ಸಹನಾ ಶಿಬಿರಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಉಪನ್ಯಾಸಕಿ ಶುಭಗೀತಾ ಸ್ವಾಗತಿಸಿ, ಪ್ರಕಾಶ್ ಶೆಟ್ಟಿ ನಿರೂಪಿಸಿದರೆ, ಉಪನ್ಯಾಸಕಿ ಭವ್ಯಾ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...